<p><strong>ಪೆಶಾವರ:</strong> ವಾಯವ್ಯ ಪಾಕಿಸ್ತಾನದ ಖೈಬರ್ ಪಂಖ್ತುಖ್ವಾ ಪ್ರಾಂತ್ಯದ ಮಸೀದಿಯೊಂದರಲ್ಲಿ ಶುಕ್ರವಾರದ ಪ್ರಾರ್ಥನೆ ವೇಳೆ ಬಾಂಬ್ ಸ್ಫೋಟಿಸಿ ಹಿರಿಯ ಧಾರ್ಮಿಕ ಮುಖಂಡ ಸೇರಿ ನಾಲ್ವರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.</p>.ಬಲೂಚಿಸ್ತಾನ ಲಿಬರೇಶನ್ ಆರ್ಮಿ ದಾಳಿಗೆ ನಲುಗಿದ ಪಾಕಿಸ್ತಾನ: ಪ್ರಮುಖ ಘಟನಾವಳಿ...<p>ದಕ್ಷಿಣ ವಜೀರಿಸ್ತಾನದ ಮೌಲಾನಾ ಅಬ್ದುಲ್ ಅಜೀಜ್ ಮಸೀದಿಯಲ್ಲಿ ಕಚ್ಚಾ ಬಾಂಬ್ ಸ್ಫೋಟಗೊಂಡು ಜಮಿಯತ್ ಉಲೇಮಾ-ಎ-ಇಸ್ಲಾಂ (ಜೆಯುಐ) ಜಿಲ್ಲಾ ಮುಖ್ಯಸ್ಥ ಮೌಲಾನಾ ಅಬ್ದುಲ್ಲಾ ನದೀಮ್ ಸೇರಿದಂತೆ ಇತರರು ಗಾಯಗೊಂಡಿದ್ದಾರೆ ಎಂದು ಜಿಲ್ಲಾ ಪೊಲೀಸ್ ಅಧಿಕಾರಿ ಆಸಿಫ್ ಬಹಾದರ್ ಹೇಳಿದ್ದಾರೆ.</p><p>ಮಸೀದಿಯ ಪ್ರವಚನಪೀಠದಲ್ಲಿ ಸ್ಫೋಟಕ ಇಡಲಾಗಿತ್ತು ಅಧಿಕಾರಿ ತಿಳಿಸಿದ್ದಾರೆ.</p><p>ರಕ್ಷಣಾ ತಂಡವು ತಕ್ಷಣ ಸ್ಥಳಕ್ಕೆ ಆಗಮಿಸಿದ್ದು, ಗಾಯಾಳುಗಳನ್ನು ವಾನಾದ ಜಿಲ್ಲಾ ಆಸ್ಪತ್ರೆಗೆ ಕರೆದೊಯ್ಯಲಾಗಿದೆ ಎಂದು ಅವರು ಹೇಳಿದ್ದಾರೆ.</p><p>ಪೊಲೀಸರು ಕೂಡ ಸ್ಥಳಕ್ಕೆ ತಲುಪಿದ್ದು, ಸಾಕ್ಷ್ಯಗಳನ್ನು ಸಂಗ್ರಹಿಸುತ್ತಿದ್ದಾರೆ. ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಅಧಿಕಾರಿ ಮಾಹಿತಿ ನೀಡಿದ್ದಾರೆ.</p>.ಪಾಕಿಸ್ತಾನ ಭಯೋತ್ಪಾದನೆಯ ಕೇಂದ್ರ: ರೈಲು ಮೇಲಿನ ದಾಳಿ ಕೈವಾಡ ನಿರಾಕರಿಸಿದ ಭಾರತ.<p>ಶುಕ್ರವಾರದ ಪ್ರಾರ್ಥನೆಯ ಸಮಯದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಜನ ಸೇರುವ ಮಸೀದಿಗಳನ್ನು ಗುರಿಯಾಗಿಸಿಕೊಂಡು ಈ ಹಿಂದೆಯೂ ಪ್ರಾಂತ್ಯದಲ್ಲಿ ಬಾಂಬ್ ಸ್ಫೋಟ ನಡೆಸಲಾಗಿತ್ತು.</p><p>ಕಳೆದ ತಿಂಗಳು, ಪ್ರಾಂತ್ಯದ ದಾರುಲ್ ಉಲೂಮ್ ಹಕ್ಕಾನಿಯಾ ಸೆಮಿನರಿಯಲ್ಲಿ ಆತ್ಮಹುತಿ ಬಾಂಬ್ ದಾಳಿ ನಡೆದು ಜೆಯುಐ-ಎಸ್ ನಾಯಕ ಮೌಲಾನಾ ಹಮೀದುಲ್ ಹಕ್ ಹಕ್ಕಾನಿ ಸೇರಿದಂತೆ ಆರು ಮಂದಿ ಮೃತಪಟ್ಟು 15 ಜನರು ಗಾಯಗೊಂಡಿದ್ದರು.</p>.ಪಾಕಿಸ್ತಾನ ರೈಲು ಹೈಜಾಕ್: ಘಟನೆಯ ಭಯಾನಕತೆ ವಿವರಿಸಿದ ಒತ್ತೆಯಾಳುಗಳು....<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಪೆಶಾವರ:</strong> ವಾಯವ್ಯ ಪಾಕಿಸ್ತಾನದ ಖೈಬರ್ ಪಂಖ್ತುಖ್ವಾ ಪ್ರಾಂತ್ಯದ ಮಸೀದಿಯೊಂದರಲ್ಲಿ ಶುಕ್ರವಾರದ ಪ್ರಾರ್ಥನೆ ವೇಳೆ ಬಾಂಬ್ ಸ್ಫೋಟಿಸಿ ಹಿರಿಯ ಧಾರ್ಮಿಕ ಮುಖಂಡ ಸೇರಿ ನಾಲ್ವರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.</p>.ಬಲೂಚಿಸ್ತಾನ ಲಿಬರೇಶನ್ ಆರ್ಮಿ ದಾಳಿಗೆ ನಲುಗಿದ ಪಾಕಿಸ್ತಾನ: ಪ್ರಮುಖ ಘಟನಾವಳಿ...<p>ದಕ್ಷಿಣ ವಜೀರಿಸ್ತಾನದ ಮೌಲಾನಾ ಅಬ್ದುಲ್ ಅಜೀಜ್ ಮಸೀದಿಯಲ್ಲಿ ಕಚ್ಚಾ ಬಾಂಬ್ ಸ್ಫೋಟಗೊಂಡು ಜಮಿಯತ್ ಉಲೇಮಾ-ಎ-ಇಸ್ಲಾಂ (ಜೆಯುಐ) ಜಿಲ್ಲಾ ಮುಖ್ಯಸ್ಥ ಮೌಲಾನಾ ಅಬ್ದುಲ್ಲಾ ನದೀಮ್ ಸೇರಿದಂತೆ ಇತರರು ಗಾಯಗೊಂಡಿದ್ದಾರೆ ಎಂದು ಜಿಲ್ಲಾ ಪೊಲೀಸ್ ಅಧಿಕಾರಿ ಆಸಿಫ್ ಬಹಾದರ್ ಹೇಳಿದ್ದಾರೆ.</p><p>ಮಸೀದಿಯ ಪ್ರವಚನಪೀಠದಲ್ಲಿ ಸ್ಫೋಟಕ ಇಡಲಾಗಿತ್ತು ಅಧಿಕಾರಿ ತಿಳಿಸಿದ್ದಾರೆ.</p><p>ರಕ್ಷಣಾ ತಂಡವು ತಕ್ಷಣ ಸ್ಥಳಕ್ಕೆ ಆಗಮಿಸಿದ್ದು, ಗಾಯಾಳುಗಳನ್ನು ವಾನಾದ ಜಿಲ್ಲಾ ಆಸ್ಪತ್ರೆಗೆ ಕರೆದೊಯ್ಯಲಾಗಿದೆ ಎಂದು ಅವರು ಹೇಳಿದ್ದಾರೆ.</p><p>ಪೊಲೀಸರು ಕೂಡ ಸ್ಥಳಕ್ಕೆ ತಲುಪಿದ್ದು, ಸಾಕ್ಷ್ಯಗಳನ್ನು ಸಂಗ್ರಹಿಸುತ್ತಿದ್ದಾರೆ. ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಅಧಿಕಾರಿ ಮಾಹಿತಿ ನೀಡಿದ್ದಾರೆ.</p>.ಪಾಕಿಸ್ತಾನ ಭಯೋತ್ಪಾದನೆಯ ಕೇಂದ್ರ: ರೈಲು ಮೇಲಿನ ದಾಳಿ ಕೈವಾಡ ನಿರಾಕರಿಸಿದ ಭಾರತ.<p>ಶುಕ್ರವಾರದ ಪ್ರಾರ್ಥನೆಯ ಸಮಯದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಜನ ಸೇರುವ ಮಸೀದಿಗಳನ್ನು ಗುರಿಯಾಗಿಸಿಕೊಂಡು ಈ ಹಿಂದೆಯೂ ಪ್ರಾಂತ್ಯದಲ್ಲಿ ಬಾಂಬ್ ಸ್ಫೋಟ ನಡೆಸಲಾಗಿತ್ತು.</p><p>ಕಳೆದ ತಿಂಗಳು, ಪ್ರಾಂತ್ಯದ ದಾರುಲ್ ಉಲೂಮ್ ಹಕ್ಕಾನಿಯಾ ಸೆಮಿನರಿಯಲ್ಲಿ ಆತ್ಮಹುತಿ ಬಾಂಬ್ ದಾಳಿ ನಡೆದು ಜೆಯುಐ-ಎಸ್ ನಾಯಕ ಮೌಲಾನಾ ಹಮೀದುಲ್ ಹಕ್ ಹಕ್ಕಾನಿ ಸೇರಿದಂತೆ ಆರು ಮಂದಿ ಮೃತಪಟ್ಟು 15 ಜನರು ಗಾಯಗೊಂಡಿದ್ದರು.</p>.ಪಾಕಿಸ್ತಾನ ರೈಲು ಹೈಜಾಕ್: ಘಟನೆಯ ಭಯಾನಕತೆ ವಿವರಿಸಿದ ಒತ್ತೆಯಾಳುಗಳು....<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>