<p><strong>ಕಠ್ಮಂಡು</strong>: ಶಿಕ್ಷಣ ವ್ಯವಸ್ಥೆಯ ಸುಧಾರಣೆ ಹಾಗೂ ವೇತನ ಹೆಚ್ಚಳಕ್ಕೆ ಆಗ್ರಹಿಸಿ (ನೇಪಾಳದ ರಾಜಧಾನಿ) ಕಠ್ಮಂಡುವಿನಲ್ಲಿ ಶಿಕ್ಷಕರು ನಡೆಸುತ್ತಿರುವ ಪ್ರತಿಭಟನೆಯು ಭಾನುವಾರ ಸಂಘರ್ಷಕ್ಕೆ ತಿರುಗಿದೆ.</p>.<p>ಪೊಲೀಸರು ಮತ್ತು ಶಿಕ್ಷಕರ ನಡುವಿನ ಜಟಾಪಟಿಯಲ್ಲಿ 7 ಶಿಕ್ಷಕರು ಹಾಗೂ ಹಲವು ಪೊಲೀಸರು ಗಾಯಗೊಂಡಿದ್ದಾರೆ. </p>.<p class="title">ನಯಾ ಬನೇಶ್ವರ ನಗರಕ್ಕೆ ಪ್ರತಿಭಟನನಿರತರು ಮುತ್ತಿಗೆ ಹಾಕಲು ಪ್ರಯತ್ನಿಸಿದ್ದು, ಅವರನ್ನು ಚದುರಿಸಲು ಪೊಲೀಸರು ಲಾಠಿ ಹಾಗೂ ಜಲಫಿರಂಗಿ ಪ್ರಯೋಗಿಸಿದ್ದಾರೆ. ಇದರಿಂದ ಸಂಘರ್ಷ ಏರ್ಪಟ್ಟು ಶಿಕ್ಷಕರು ಹಾಗೂ ಪೊಲೀಸರು ಗಾಯಗೊಂಡಿದ್ದಾರೆ ಎಂದು ಪ್ರತ್ಯಕ್ಷದರ್ಶಿಯೊಬ್ಬರು ಹೇಳಿದ್ದಾರೆ.</p>.<p class="title">ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಸುಧಾರಣೆ ತರುವುದರ ಜತೆಗೆ ಶಿಕ್ಷಕರಿಗೆ ನೀಡುವ ವೇತನ ಹಾಗೂ ಸವಲತ್ತುಗಳನ್ನು ಹೆಚ್ಚಿಸಬೇಕು, ಇದಕ್ಕೆ ಸಂಬಂಧಿಸಿದಂತೆ ಶಾಲಾ ಶಿಕ್ಷಣ ಮಸೂದೆಯನ್ನು ಸಂಸತ್ತಿನಲ್ಲಿ ಅಂಗೀಕರಿಸಬೇಕೆಂದು ಆಗ್ರಹಿಸಿ ಕಳೆದ 1 ತಿಂಗಳಿಂದಲೂ ಈ ಪ್ರತಿಭಟನೆ ನಡೆಯುತ್ತಿದೆ. ದೇಶದ ವಿವಿಧ ಭಾಗಗಳಿಂದ ಶಿಕ್ಷಕರು ಕಠ್ಮಂಡುವಿನಲ್ಲಿ ಜಮಾಯಿಸಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುತ್ತಿದ್ದಾರೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಠ್ಮಂಡು</strong>: ಶಿಕ್ಷಣ ವ್ಯವಸ್ಥೆಯ ಸುಧಾರಣೆ ಹಾಗೂ ವೇತನ ಹೆಚ್ಚಳಕ್ಕೆ ಆಗ್ರಹಿಸಿ (ನೇಪಾಳದ ರಾಜಧಾನಿ) ಕಠ್ಮಂಡುವಿನಲ್ಲಿ ಶಿಕ್ಷಕರು ನಡೆಸುತ್ತಿರುವ ಪ್ರತಿಭಟನೆಯು ಭಾನುವಾರ ಸಂಘರ್ಷಕ್ಕೆ ತಿರುಗಿದೆ.</p>.<p>ಪೊಲೀಸರು ಮತ್ತು ಶಿಕ್ಷಕರ ನಡುವಿನ ಜಟಾಪಟಿಯಲ್ಲಿ 7 ಶಿಕ್ಷಕರು ಹಾಗೂ ಹಲವು ಪೊಲೀಸರು ಗಾಯಗೊಂಡಿದ್ದಾರೆ. </p>.<p class="title">ನಯಾ ಬನೇಶ್ವರ ನಗರಕ್ಕೆ ಪ್ರತಿಭಟನನಿರತರು ಮುತ್ತಿಗೆ ಹಾಕಲು ಪ್ರಯತ್ನಿಸಿದ್ದು, ಅವರನ್ನು ಚದುರಿಸಲು ಪೊಲೀಸರು ಲಾಠಿ ಹಾಗೂ ಜಲಫಿರಂಗಿ ಪ್ರಯೋಗಿಸಿದ್ದಾರೆ. ಇದರಿಂದ ಸಂಘರ್ಷ ಏರ್ಪಟ್ಟು ಶಿಕ್ಷಕರು ಹಾಗೂ ಪೊಲೀಸರು ಗಾಯಗೊಂಡಿದ್ದಾರೆ ಎಂದು ಪ್ರತ್ಯಕ್ಷದರ್ಶಿಯೊಬ್ಬರು ಹೇಳಿದ್ದಾರೆ.</p>.<p class="title">ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಸುಧಾರಣೆ ತರುವುದರ ಜತೆಗೆ ಶಿಕ್ಷಕರಿಗೆ ನೀಡುವ ವೇತನ ಹಾಗೂ ಸವಲತ್ತುಗಳನ್ನು ಹೆಚ್ಚಿಸಬೇಕು, ಇದಕ್ಕೆ ಸಂಬಂಧಿಸಿದಂತೆ ಶಾಲಾ ಶಿಕ್ಷಣ ಮಸೂದೆಯನ್ನು ಸಂಸತ್ತಿನಲ್ಲಿ ಅಂಗೀಕರಿಸಬೇಕೆಂದು ಆಗ್ರಹಿಸಿ ಕಳೆದ 1 ತಿಂಗಳಿಂದಲೂ ಈ ಪ್ರತಿಭಟನೆ ನಡೆಯುತ್ತಿದೆ. ದೇಶದ ವಿವಿಧ ಭಾಗಗಳಿಂದ ಶಿಕ್ಷಕರು ಕಠ್ಮಂಡುವಿನಲ್ಲಿ ಜಮಾಯಿಸಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುತ್ತಿದ್ದಾರೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>