<p><strong>ಕರಾಚಿ (ಪಾಕಿಸ್ತಾನ):</strong> ಬಂದರು ನಗರ ಗ್ವಾದರ್ನಲ್ಲಿ ಗುರುವಾರ ಅಪರಿಚಿತ ಬಂದೂಕುಧಾರಿಗಳು ನಡೆಸಿದ ಭಯೋತ್ಪಾದಕ ದಾಳಿಯಲ್ಲಿ ಕನಿಷ್ಠ ಏಳು ಕಾರ್ಮಿಕರು ಮೃತಪಟ್ಟಿದ್ದಾರೆ.</p> <p>'ಸುರ್ಬಂದರ್ ಪ್ರದೇಶದ ಗ್ವಾದರ್ ಬಂದರು ಬಳಿಯ ವಸತಿ ಪ್ರದೇಶದಲ್ಲಿ ಬಂದೂಕುಧಾರಿಗಳು ಗುಂಡು ಹಾರಿಸಿದ್ದಾರೆ. ಘಟನೆಯಲ್ಲಿ 7 ಮಂದಿ ಮೃತಪಟ್ಟಿದ್ದು, ಒಬ್ಬರು ಗಾಯಗೊಂಡಿದ್ದಾರೆ' ಎಂದು ಗ್ವಾದರ್ ಪೊಲೀಸ್ ಅಧಿಕಾರಿ ಮೊಹ್ಸಿನ್ ತಿಳಿಸಿದ್ದಾರೆ.</p> <p>ಮೃತರು ಹಾಗೂ ಗಾಯಗೊಂಡ ವ್ಯಕ್ತಿ ಈ ಪ್ರದೇಶದ ಕ್ಷೌರದ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದರು. ಇವರು ಪಂಜಾಬ್ನ ಖನೇವಾಲ್ ಜಿಲ್ಲೆಗೆ ಸೇರಿದವರು. ಸದ್ಯ ಮೃತ ದೇಹಗಳನ್ನು ಗ್ವಾದರ್ ಆಸ್ಪತ್ರೆಗೆ ರವಾನಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.</p> <p>ಕಾರ್ಮಿಕರ ಹತ್ಯೆಯನ್ನು ಬಲೂಚಿಸ್ತಾನ ಮುಖ್ಯಮಂತ್ರಿ ಸರ್ಫ್ರಾಜ್ ಬುಗ್ತಿ ಖಂಡಿಸಿದ್ದಾರೆ. ಭಯೋತ್ಪಾದಕರು ಮತ್ತು ಅವರಿಗೆ ಸಹಾಯ ಮಾಡುವವರನ್ನು ಶಿಕ್ಷಿಸಲು ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಅವರು ತಿಳಿಸಿದ್ದಾರೆ.</p> <p>ಬಲೂಚಿಸ್ತಾನದ ಗೃಹ ಸಚಿವ ಮಿರ್ ಜಿಯಾ ಉಲ್ಲಾ ಲಾಂಗೌ ಕಾರ್ಮಿಕರ ಹತ್ಯೆಯ ಬಗ್ಗೆ ತನಿಖೆಗೆ ಆದೇಶಿಸಿದ್ದಾರೆ. ಕಾರ್ಮಿಕರ ಹತ್ಯೆ ಹೇಡಿತನ. ಭಯೋತ್ಪಾದಕರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಅವರು ಹೇಳಿದ್ದಾರೆ.</p>.ಪಾಕಿಸ್ತಾನ: ಉಗ್ರರ ದಾಳಿಗೆ 7 ಮಂದಿ ಸಾವು.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕರಾಚಿ (ಪಾಕಿಸ್ತಾನ):</strong> ಬಂದರು ನಗರ ಗ್ವಾದರ್ನಲ್ಲಿ ಗುರುವಾರ ಅಪರಿಚಿತ ಬಂದೂಕುಧಾರಿಗಳು ನಡೆಸಿದ ಭಯೋತ್ಪಾದಕ ದಾಳಿಯಲ್ಲಿ ಕನಿಷ್ಠ ಏಳು ಕಾರ್ಮಿಕರು ಮೃತಪಟ್ಟಿದ್ದಾರೆ.</p> <p>'ಸುರ್ಬಂದರ್ ಪ್ರದೇಶದ ಗ್ವಾದರ್ ಬಂದರು ಬಳಿಯ ವಸತಿ ಪ್ರದೇಶದಲ್ಲಿ ಬಂದೂಕುಧಾರಿಗಳು ಗುಂಡು ಹಾರಿಸಿದ್ದಾರೆ. ಘಟನೆಯಲ್ಲಿ 7 ಮಂದಿ ಮೃತಪಟ್ಟಿದ್ದು, ಒಬ್ಬರು ಗಾಯಗೊಂಡಿದ್ದಾರೆ' ಎಂದು ಗ್ವಾದರ್ ಪೊಲೀಸ್ ಅಧಿಕಾರಿ ಮೊಹ್ಸಿನ್ ತಿಳಿಸಿದ್ದಾರೆ.</p> <p>ಮೃತರು ಹಾಗೂ ಗಾಯಗೊಂಡ ವ್ಯಕ್ತಿ ಈ ಪ್ರದೇಶದ ಕ್ಷೌರದ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದರು. ಇವರು ಪಂಜಾಬ್ನ ಖನೇವಾಲ್ ಜಿಲ್ಲೆಗೆ ಸೇರಿದವರು. ಸದ್ಯ ಮೃತ ದೇಹಗಳನ್ನು ಗ್ವಾದರ್ ಆಸ್ಪತ್ರೆಗೆ ರವಾನಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.</p> <p>ಕಾರ್ಮಿಕರ ಹತ್ಯೆಯನ್ನು ಬಲೂಚಿಸ್ತಾನ ಮುಖ್ಯಮಂತ್ರಿ ಸರ್ಫ್ರಾಜ್ ಬುಗ್ತಿ ಖಂಡಿಸಿದ್ದಾರೆ. ಭಯೋತ್ಪಾದಕರು ಮತ್ತು ಅವರಿಗೆ ಸಹಾಯ ಮಾಡುವವರನ್ನು ಶಿಕ್ಷಿಸಲು ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಅವರು ತಿಳಿಸಿದ್ದಾರೆ.</p> <p>ಬಲೂಚಿಸ್ತಾನದ ಗೃಹ ಸಚಿವ ಮಿರ್ ಜಿಯಾ ಉಲ್ಲಾ ಲಾಂಗೌ ಕಾರ್ಮಿಕರ ಹತ್ಯೆಯ ಬಗ್ಗೆ ತನಿಖೆಗೆ ಆದೇಶಿಸಿದ್ದಾರೆ. ಕಾರ್ಮಿಕರ ಹತ್ಯೆ ಹೇಡಿತನ. ಭಯೋತ್ಪಾದಕರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಅವರು ಹೇಳಿದ್ದಾರೆ.</p>.ಪಾಕಿಸ್ತಾನ: ಉಗ್ರರ ದಾಳಿಗೆ 7 ಮಂದಿ ಸಾವು.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>