ಆಸ್ಪತ್ರೆಯಲ್ಲಿ ತಮ್ಮ ಪ್ರೀತಿ ಪಾತ್ರರ ಆರೋಗ್ಯ ನೋಡಿಕೊಳ್ಳುತ್ತಿದ್ದ ಸಿಬ್ಬಂದಿ ಕೋವಿಡ್ ಸೋಂಕಿಗೆ ತುತ್ತಾದರು. ಇದರಿಂದಾಗಿ ಸಿಬ್ಬಂದಿ ಸರ್ಕಾರದ ಕಠಿಣ ಕೋವಿಡ್ ನಿಯಂತ್ರಣ ಕ್ರಮಗಳನ್ನು ಪಾಲಿಸಲು ಕ್ವಾರಂಟೈನ್ ಆದರು. ಇದರ ಪರಿಣಾಮ ಆಸ್ಪತ್ರೆಯಲ್ಲಿ ಸಿಬ್ಬಂದಿಯ ಕೊರತೆ ಎದುರಾಯಿತು. ಸೂಕ್ತ ಚಿಕಿತ್ಸೆ ಇಲ್ಲದೆ ತಮ್ಮ ಪ್ರೀತಿ ಪಾತ್ರರು ಬಲಿಯಾಗಿದ್ದಾರೆ ಎಂದು ಸಂಬಂಧಿಕರು ದೂರಿದ್ದಾರೆ. ಅಲ್ಲದೆ ಸೋಂಕಿಗೆ ತುತ್ತಾದ ಬಹುತೇಕ ಸಿಬ್ಬಂದಿಯಲ್ಲಿ ಸೌಮ್ಯ ಸೋಂಕಿನ ಲಕ್ಷಣ ಇದ್ದಾಗ್ಯೂ, ಅವರನ್ನು ಕ್ವಾರಂಟೈನ್ ಮಾಡಲಾಗಿತ್ತು ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.