<p><strong>ಢಾಕಾ:</strong> ಬಾಂಗ್ಲಾದೇಶದ ಪದಚ್ಯುತ ಪ್ರಧಾನಿ ಶೇಖ್ ಹಸೀನಾ ಅವರಿಗೆ ಮರಣ ದಂಡನೆ ವಿಧಿಸಿ ಕೋರ್ಟ್ ಆದೇಶ ಹೊರಡಿಸಿದ ಬಳಿಕ ದೇಶದಾದ್ಯಂತ ಪರಿಸ್ಥಿತಿ ಶಾಂತವಾಗಿದ್ದರೂ, ಪ್ರಮುಖ ನಗರಗಳಲ್ಲಿ ಬಿಗಿ ಭದ್ರತೆ ಕೈಗೊಳ್ಳಲಾಗಿದೆ. ಈ ನಡುವೆ ಹಸೀನಾ ಅವರಿಗೆ ಮರಣದಂಡನೆ ವಿಧಿಸಿರುವುದನ್ನು ವಿರೋಧಿಸಿ ಅವಾಮಿ ಲೀಗ್ ಪಕ್ಷ ಸಂಪೂರ್ಣ ಬಂದ್ ಘೋಷಿಸಿದೆ. </p><p>ತೀರ್ಪು ಬಂದಾಗಿನಿಂದ ಈವರೆಗೆ ಯಾವುದೇ ಅಹಿತಕರ ಘಟನೆ ವರದಿಯಾಗಿಲ್ಲ. ಆದರೆ, ಯಾವುದೇ ಸಮಯದಲ್ಲಿ ಗಲಭೆ ಉಂಟಾಗುವ ಸಾಧ್ಯತೆ ಇರುವ ಕಾರಣ ವಾಹನ ಸಂಚಾರ ಕಡಿಮೆಯಾಗಿದ್ದು, ಜನರೂ ಮನೆಯಿಂದ ಹೊರಬರುತ್ತಿಲ್ಲ. ಶಾಲಾ ಕಾಲೇಜುಗಳಲ್ಲಿ ಹಾಜರಾತಿ ಕಡಿಮೆಯಾಗಿದ್ದು, ಕಚೇರಿಗಳಲ್ಲೂ ಸಿಬ್ಬಂದಿ ಗೈರಾಗಿದ್ದಾರೆ ಎಂದು ವರದಿಯಾಗಿದೆ.</p><p>ಮುಂಜಾಗ್ರತಾ ಕ್ರಮವಾಗಿ ಶಸ್ತ್ರಸಜ್ಜಿತ ಪೊಲೀಸರು, ಕ್ಷಿಪ್ರ ಕಾರ್ಯಾಚರಣೆಯ ಬೆಟಾಲಿಯನ್ ಸಿಬ್ಬಂದಿ ಮತ್ತು ಅರೆಸೈನಿಕ ಘಟಕಗಳು, ವಿಶೇಷವಾಗಿ ಸರ್ಕಾರಿ ಕಟ್ಟಡಗಳು, ಪಕ್ಷದ ಕಚೇರಿಗಳು ಮತ್ತು ಪ್ರಮುಖ ವೃತ್ತಗಳಲ್ಲಿ ದಿನದ 24 ಗಂಟೆಯೂ ಗಸ್ತು ತಿರುಗುತ್ತಿದ್ದಾರೆ.</p><p>ಅವಾಮಿ ಲೀಗ್ ಪಕ್ಷ ನ.19–21ರವರೆಗೆ ದೇಶದಾದ್ಯಂತ ಬಂದ್ ಮಾಡಿ, ಪ್ರತಿಭಟನೆ ನಡೆಸುವುದಾಗಿ ಸಾಮಾಜಿಕ ಮಾಧ್ಯಮದಲ್ಲಿ ಮಾಹಿತಿ ಹಂಚಿಕೊಂಡಿದೆ. </p><p>2024ರಲ್ಲಿ ಬಾಂಗ್ಲಾದೇಶದಲ್ಲಿ ನಡೆದ ದಂಗೆಯ ಸಂದರ್ಭದಲ್ಲಿ ಅಲ್ಲಿನ ಆಗಿನ ಪ್ರಧಾನಿ ಶೇಖ್ ಹಸೀನಾ ‘ಮಾನವೀಯತೆ ವಿರುದ್ಧ ಅಪರಾಧ ಎಸಗಿದ್ದಾರೆ’ ಎಂದು ತೀರ್ಮಾನಿಸಿರುವ ಬಾಂಗ್ಲಾದೇಶದಲ್ಲಿರುವ ಅಂತರರಾಷ್ಟ್ರೀಯ ಅಪರಾಧ ನ್ಯಾಯಮಂಡಳಿಯು, 78 ವರ್ಷದ ಹಸೀನಾ ಅವರಿಗೆ ಸೋಮವಾರ ಮರಣ ದಂಡನೆ ವಿಧಿಸಿದೆ.</p>.ಮರಣ ದಂಡನೆ | ರಾಜಕೀಯ ಪ್ರೇರಿತ ತೀರ್ಪು: ಶೇಖ್ ಹಸೀನಾ.ಹಸೀನಾ ಹೇಳಿಕೆಗಳನ್ನು ಪ್ರಸಾರ ಮಾಡದಂತೆ ಮಾಧ್ಯಮಗಳಿಗೆ ನಿರ್ಬಂಧ ಹೇರಿದ ಬಾಂಗ್ಲಾ .<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಢಾಕಾ:</strong> ಬಾಂಗ್ಲಾದೇಶದ ಪದಚ್ಯುತ ಪ್ರಧಾನಿ ಶೇಖ್ ಹಸೀನಾ ಅವರಿಗೆ ಮರಣ ದಂಡನೆ ವಿಧಿಸಿ ಕೋರ್ಟ್ ಆದೇಶ ಹೊರಡಿಸಿದ ಬಳಿಕ ದೇಶದಾದ್ಯಂತ ಪರಿಸ್ಥಿತಿ ಶಾಂತವಾಗಿದ್ದರೂ, ಪ್ರಮುಖ ನಗರಗಳಲ್ಲಿ ಬಿಗಿ ಭದ್ರತೆ ಕೈಗೊಳ್ಳಲಾಗಿದೆ. ಈ ನಡುವೆ ಹಸೀನಾ ಅವರಿಗೆ ಮರಣದಂಡನೆ ವಿಧಿಸಿರುವುದನ್ನು ವಿರೋಧಿಸಿ ಅವಾಮಿ ಲೀಗ್ ಪಕ್ಷ ಸಂಪೂರ್ಣ ಬಂದ್ ಘೋಷಿಸಿದೆ. </p><p>ತೀರ್ಪು ಬಂದಾಗಿನಿಂದ ಈವರೆಗೆ ಯಾವುದೇ ಅಹಿತಕರ ಘಟನೆ ವರದಿಯಾಗಿಲ್ಲ. ಆದರೆ, ಯಾವುದೇ ಸಮಯದಲ್ಲಿ ಗಲಭೆ ಉಂಟಾಗುವ ಸಾಧ್ಯತೆ ಇರುವ ಕಾರಣ ವಾಹನ ಸಂಚಾರ ಕಡಿಮೆಯಾಗಿದ್ದು, ಜನರೂ ಮನೆಯಿಂದ ಹೊರಬರುತ್ತಿಲ್ಲ. ಶಾಲಾ ಕಾಲೇಜುಗಳಲ್ಲಿ ಹಾಜರಾತಿ ಕಡಿಮೆಯಾಗಿದ್ದು, ಕಚೇರಿಗಳಲ್ಲೂ ಸಿಬ್ಬಂದಿ ಗೈರಾಗಿದ್ದಾರೆ ಎಂದು ವರದಿಯಾಗಿದೆ.</p><p>ಮುಂಜಾಗ್ರತಾ ಕ್ರಮವಾಗಿ ಶಸ್ತ್ರಸಜ್ಜಿತ ಪೊಲೀಸರು, ಕ್ಷಿಪ್ರ ಕಾರ್ಯಾಚರಣೆಯ ಬೆಟಾಲಿಯನ್ ಸಿಬ್ಬಂದಿ ಮತ್ತು ಅರೆಸೈನಿಕ ಘಟಕಗಳು, ವಿಶೇಷವಾಗಿ ಸರ್ಕಾರಿ ಕಟ್ಟಡಗಳು, ಪಕ್ಷದ ಕಚೇರಿಗಳು ಮತ್ತು ಪ್ರಮುಖ ವೃತ್ತಗಳಲ್ಲಿ ದಿನದ 24 ಗಂಟೆಯೂ ಗಸ್ತು ತಿರುಗುತ್ತಿದ್ದಾರೆ.</p><p>ಅವಾಮಿ ಲೀಗ್ ಪಕ್ಷ ನ.19–21ರವರೆಗೆ ದೇಶದಾದ್ಯಂತ ಬಂದ್ ಮಾಡಿ, ಪ್ರತಿಭಟನೆ ನಡೆಸುವುದಾಗಿ ಸಾಮಾಜಿಕ ಮಾಧ್ಯಮದಲ್ಲಿ ಮಾಹಿತಿ ಹಂಚಿಕೊಂಡಿದೆ. </p><p>2024ರಲ್ಲಿ ಬಾಂಗ್ಲಾದೇಶದಲ್ಲಿ ನಡೆದ ದಂಗೆಯ ಸಂದರ್ಭದಲ್ಲಿ ಅಲ್ಲಿನ ಆಗಿನ ಪ್ರಧಾನಿ ಶೇಖ್ ಹಸೀನಾ ‘ಮಾನವೀಯತೆ ವಿರುದ್ಧ ಅಪರಾಧ ಎಸಗಿದ್ದಾರೆ’ ಎಂದು ತೀರ್ಮಾನಿಸಿರುವ ಬಾಂಗ್ಲಾದೇಶದಲ್ಲಿರುವ ಅಂತರರಾಷ್ಟ್ರೀಯ ಅಪರಾಧ ನ್ಯಾಯಮಂಡಳಿಯು, 78 ವರ್ಷದ ಹಸೀನಾ ಅವರಿಗೆ ಸೋಮವಾರ ಮರಣ ದಂಡನೆ ವಿಧಿಸಿದೆ.</p>.ಮರಣ ದಂಡನೆ | ರಾಜಕೀಯ ಪ್ರೇರಿತ ತೀರ್ಪು: ಶೇಖ್ ಹಸೀನಾ.ಹಸೀನಾ ಹೇಳಿಕೆಗಳನ್ನು ಪ್ರಸಾರ ಮಾಡದಂತೆ ಮಾಧ್ಯಮಗಳಿಗೆ ನಿರ್ಬಂಧ ಹೇರಿದ ಬಾಂಗ್ಲಾ .<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>