<p><strong>ನವದೆಹಲಿ</strong>: ರಾಷ್ಟ್ರ ರಾಜಧಾನಿ ದೆಹಲಿಯನ್ನು ಬೆಚ್ಚಿ ಬೀಳಿಸಿರುವ ಶ್ರದ್ಧಾವಾಲ್ಕರ್ ಎಂಬ ಯುವತಿಯ ಕೊಲೆಯ ರೀತಿಯೇ ಬಾಂಗ್ಲಾದೇಶದಲ್ಲಿಯೂ ಮಹಿಳೆಯೊಬ್ಬರ ಕೊಲೆಯಾಗಿರುವುದು ವರದಿಯಾಗಿದೆ.</p>.<p>ಬಾಂಗ್ಲಾದೇಶದ ಖುಲ್ನಾ ಎಂಬಲ್ಲಿ ಕವಿತಾ ರಾಣಿ ಎಂಬ 30 ವರ್ಷದ ಮಹಿಳೆಯನ್ನು ಆಕೆಯ ಪ್ರಿಯಕರನೇ ಕೊಲೆ ಮಾಡಿದ್ದಾನೆ. ಆರೋಪಿಯನ್ನು ಅಬು ಬಕರ್ ಎಂದು ಗುರುತಿಸಲಾಗಿದೆ.</p>.<p>ಮೂರು ವರ್ಷಗಳಿಂದ ಕವಿತಾ ರಾಣಿ ಅಬು ಬಕರ್ನನ್ನು ಪ್ರೀತಿಸುತ್ತಿದ್ದರು. ಆದರೆ, ಇತ್ತೀಚೆಗೆ ಅಬು ಬಕರ್ ಮದುವೆಯಾಗಿದ್ದನ್ನು ತಿಳಿದು, ಪ್ರಶ್ನಿಸಿದ್ದಕ್ಕೆ ಕವಿತಾಳನ್ನು ನವೆಂಬರ್ 7 ರಂದು ಅಬು ಬಕರ್ ಭೀಕರವಾಗಿ ಕೊಲೆ ಮಾಡಿದ್ದಾನೆ ಎಂದು ಟೈಮ್ಸ್ ನೌ ವರದಿ ಮಾಡಿದೆ.</p>.<p>ಕೊಲೆ ಮಾಡಿದ ನಂತರ ಕವಿತಾಳ ದೇಹವನ್ನು ಮೂರು ಭಾಗಗಳಾಗಿ ಕತ್ತರಿಸಿದ್ದಾನೆ. ಬಳಿಕ ಕೈ ಕಾಲನ್ನು ಕಾಲುವೆಗೆ ಎಸೆದು, ಉಳಿದ ಭಾಗವನ್ನು ಮನೆಯಲ್ಲಿ ಅಡಗಿಸಿಟ್ಟಿದ್ದ. ಪೊಲೀಸರು ನವೆಂಬರ್ 7 ರಂದು ಅಬು ಬಕರ್ನನ್ನು ಬಂಧಿಸಿದ್ದಾರೆ ಎಂದು ವರದಿ ತಿಳಿಸಿದೆ.</p>.<p>ಮುಂಬೈ ಮೂಲದ ಅಫ್ತಾಬ್ ಪೂನವಾಲಾ ಎಂಬಾತ 26 ವರ್ಷದ ಶ್ರದ್ಧಾಎಂಬ ತನ್ನ ಪ್ರೇಯಸಿಯನ್ನು ಕೊಲೆ ಮಾಡಿ, ಆಕೆಯ ದೇಹವನ್ನು 35 ತುಂಡುಗಳಾಗಿ ಕತ್ತರಿಸಿ ನಗರದ ತುಂಬ ಚೆಲ್ಲಾಡಿದ್ದ. ಪ್ರಕರಣಕ್ಕೆ ಸಂಬಂಧಿಸಿದಂತೆ ಅಫ್ತಾಬ್ನನ್ನು ಪೊಲೀಸರು ಬಂಧಿಸಿ ತನಿಖೆ ನಡೆಸುತ್ತಿದ್ದಾರೆ.</p>.<p>ಮೇ 18ರಂದು ದಕ್ಷಿಣ ದೆಹಲಿಯ ಮೆಹ್ರೌಲಿಯಲ್ಲಿ ಅಫ್ತಾಬ್ ಪೂನವಾಲ ಪ್ರೇಯಸಿ ಶ್ರದ್ಧಾ ವಾಲ್ಕರ್ ಅವರಕತ್ತುಸೀಳಿ ಕೊಂದಿದ್ದ. ಬಳಿಕ ಆಕೆಯ ದೇಹವನ್ನು ಸುಮಾರು 35 ಭಾಗಗಳಾಗಿ ಕತ್ತರಿಸಿ ಮೂರು ವಾರಗಳ ಕಾಲ ಫ್ರಿಡ್ಜ್ನಲ್ಲಿಟ್ಟು, ನಗರದಾದ್ಯಂತ ಹಲವು ದಿನಗಳ ಕಾಲ ಬಿಡಿ ಬಿಡಿಯಾಗಿ ಎಸೆದಿದ್ದ.</p>.<p><a href="https://www.prajavani.net/district/bengaluru-city/pakistan-jindabad-slogan-in-bengaluru-college-actor-chetan-ahimsa-reacts-989862.html" itemprop="url">ಪಾಕ್ ಪರ ಘೋಷಣೆ:ವಾಕ್ ಸ್ವಾತಂತ್ರ್ಯ ಎತ್ತಿ ಹಿಡಿಯಬೇಕು ಎಂದ ನಟ ಚೇತನ್ ಅಹಿಂಸಾ </a></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ರಾಷ್ಟ್ರ ರಾಜಧಾನಿ ದೆಹಲಿಯನ್ನು ಬೆಚ್ಚಿ ಬೀಳಿಸಿರುವ ಶ್ರದ್ಧಾವಾಲ್ಕರ್ ಎಂಬ ಯುವತಿಯ ಕೊಲೆಯ ರೀತಿಯೇ ಬಾಂಗ್ಲಾದೇಶದಲ್ಲಿಯೂ ಮಹಿಳೆಯೊಬ್ಬರ ಕೊಲೆಯಾಗಿರುವುದು ವರದಿಯಾಗಿದೆ.</p>.<p>ಬಾಂಗ್ಲಾದೇಶದ ಖುಲ್ನಾ ಎಂಬಲ್ಲಿ ಕವಿತಾ ರಾಣಿ ಎಂಬ 30 ವರ್ಷದ ಮಹಿಳೆಯನ್ನು ಆಕೆಯ ಪ್ರಿಯಕರನೇ ಕೊಲೆ ಮಾಡಿದ್ದಾನೆ. ಆರೋಪಿಯನ್ನು ಅಬು ಬಕರ್ ಎಂದು ಗುರುತಿಸಲಾಗಿದೆ.</p>.<p>ಮೂರು ವರ್ಷಗಳಿಂದ ಕವಿತಾ ರಾಣಿ ಅಬು ಬಕರ್ನನ್ನು ಪ್ರೀತಿಸುತ್ತಿದ್ದರು. ಆದರೆ, ಇತ್ತೀಚೆಗೆ ಅಬು ಬಕರ್ ಮದುವೆಯಾಗಿದ್ದನ್ನು ತಿಳಿದು, ಪ್ರಶ್ನಿಸಿದ್ದಕ್ಕೆ ಕವಿತಾಳನ್ನು ನವೆಂಬರ್ 7 ರಂದು ಅಬು ಬಕರ್ ಭೀಕರವಾಗಿ ಕೊಲೆ ಮಾಡಿದ್ದಾನೆ ಎಂದು ಟೈಮ್ಸ್ ನೌ ವರದಿ ಮಾಡಿದೆ.</p>.<p>ಕೊಲೆ ಮಾಡಿದ ನಂತರ ಕವಿತಾಳ ದೇಹವನ್ನು ಮೂರು ಭಾಗಗಳಾಗಿ ಕತ್ತರಿಸಿದ್ದಾನೆ. ಬಳಿಕ ಕೈ ಕಾಲನ್ನು ಕಾಲುವೆಗೆ ಎಸೆದು, ಉಳಿದ ಭಾಗವನ್ನು ಮನೆಯಲ್ಲಿ ಅಡಗಿಸಿಟ್ಟಿದ್ದ. ಪೊಲೀಸರು ನವೆಂಬರ್ 7 ರಂದು ಅಬು ಬಕರ್ನನ್ನು ಬಂಧಿಸಿದ್ದಾರೆ ಎಂದು ವರದಿ ತಿಳಿಸಿದೆ.</p>.<p>ಮುಂಬೈ ಮೂಲದ ಅಫ್ತಾಬ್ ಪೂನವಾಲಾ ಎಂಬಾತ 26 ವರ್ಷದ ಶ್ರದ್ಧಾಎಂಬ ತನ್ನ ಪ್ರೇಯಸಿಯನ್ನು ಕೊಲೆ ಮಾಡಿ, ಆಕೆಯ ದೇಹವನ್ನು 35 ತುಂಡುಗಳಾಗಿ ಕತ್ತರಿಸಿ ನಗರದ ತುಂಬ ಚೆಲ್ಲಾಡಿದ್ದ. ಪ್ರಕರಣಕ್ಕೆ ಸಂಬಂಧಿಸಿದಂತೆ ಅಫ್ತಾಬ್ನನ್ನು ಪೊಲೀಸರು ಬಂಧಿಸಿ ತನಿಖೆ ನಡೆಸುತ್ತಿದ್ದಾರೆ.</p>.<p>ಮೇ 18ರಂದು ದಕ್ಷಿಣ ದೆಹಲಿಯ ಮೆಹ್ರೌಲಿಯಲ್ಲಿ ಅಫ್ತಾಬ್ ಪೂನವಾಲ ಪ್ರೇಯಸಿ ಶ್ರದ್ಧಾ ವಾಲ್ಕರ್ ಅವರಕತ್ತುಸೀಳಿ ಕೊಂದಿದ್ದ. ಬಳಿಕ ಆಕೆಯ ದೇಹವನ್ನು ಸುಮಾರು 35 ಭಾಗಗಳಾಗಿ ಕತ್ತರಿಸಿ ಮೂರು ವಾರಗಳ ಕಾಲ ಫ್ರಿಡ್ಜ್ನಲ್ಲಿಟ್ಟು, ನಗರದಾದ್ಯಂತ ಹಲವು ದಿನಗಳ ಕಾಲ ಬಿಡಿ ಬಿಡಿಯಾಗಿ ಎಸೆದಿದ್ದ.</p>.<p><a href="https://www.prajavani.net/district/bengaluru-city/pakistan-jindabad-slogan-in-bengaluru-college-actor-chetan-ahimsa-reacts-989862.html" itemprop="url">ಪಾಕ್ ಪರ ಘೋಷಣೆ:ವಾಕ್ ಸ್ವಾತಂತ್ರ್ಯ ಎತ್ತಿ ಹಿಡಿಯಬೇಕು ಎಂದ ನಟ ಚೇತನ್ ಅಹಿಂಸಾ </a></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>