<p><strong>ಸಿಂಗಪುರ:</strong> ನಾವು ಭಯೋತ್ಪಾದಕ ಕೃತ್ಯಗಳನ್ನು ತೀವ್ರವಾಗಿ ಖಂಡಿಸುತ್ತೇವೆ, ಅದರ ವಿರುದ್ಧದ ಹೋರಾಟದಲ್ಲಿ ಭಾರತದ ಪರವಾಗಿದ್ದೇವೆ ಎಂದು ಸಿಂಗಪುರವು ಬೆಂಬಲ ಸೂಚಿಸಿದೆ. </p><p>ಮಂಗಳವಾರ 'ಆಪರೇಷನ್ ಸಿಂಧೂರ' ಕುರಿತು ಮಾಹಿತಿ ನೀಡಲು ತೆರಳಿರುವ ಜೆಡಿ(ಯು) ರಾಜ್ಯ ಸಭಾ ಸದಸ್ಯ ಸಂಜಯ್ ಕುಮಾರ್ ಝಾ ನೇತೃತ್ವದ 'ಸರ್ವಪಕ್ಷ ಸಂಸದೀಯ ನಿಯೋಗ'ದ ಭೇಟಿಯ ನಂತರ ಅಲ್ಲಿನ ವಿದೇಶಾಂಗ ಸಚಿವೆ ಸಿಮ್ ಆನ್ ಅವರು ಭಾರತಕ್ಕೆ ಬೆಂಬಲ ಸೂಚಿಸಿದ್ದಾರೆ. </p><p>ಉಗ್ರವಾದದ ವಿರುದ್ಧ ಭಾರತ ತೆಗೆದುಕೊಳ್ಳುತ್ತಿರುವ ಕ್ರಮಗಳು ಹಾಗೂ ನಿಲುವುಗಳ ಕುರಿತು ಅವರೊಂದಿಗೆ ನಿಯೋಗವು ಚರ್ಚಿಸಿದೆ. </p><p>ಭಾರತ ಹಾಗೂ ಸಿಂಗಪುರಗಳು ಮಿತ್ರ ರಾಷ್ಟ್ರಗಳಾಗಿದ್ದು, ಭಯೋತ್ಪಾದನೆಯಂತಹ ಜಾಗತಿಕ ಸಮಸ್ಯೆಗಳ ವಿರುದ್ಧದ ಹೋರಾಟಕ್ಕೆ ನಮ್ಮ ಸಂಪೂರ್ಣ ಬೆಂಬಲ ಸೂಚಿಸುತ್ತೇವೆ. </p><p>ಮುಂದಿನ ದಿನಗಳಲ್ಲಿ ನಮ್ಮ ನಡುವಿನ ದ್ವಿಪಕ್ಷೀಯ ಸಂಬಂಧಗಳನ್ನು ಮತ್ತಷ್ಟು ವೃದ್ಧಿಸಿಕೊಳ್ಳಲಾಗುತ್ತದೆ ಎಂದು ವಿದೇಶಾಂಗ ಸಚಿವೆ ಸಿಮ್ ಆನ್ ಹೇಳಿದ್ದಾರೆ. </p><p>ಭಾರತೀಯ ನಿಯೋಗವು ಸಿಂಗಪುರ ಸರ್ಕಾರ ಹಾಗೂ ಅಲ್ಲಿನ ಮಾಧ್ಯಮಗಳಿಗೆ ಪಹಲ್ಗಾಮ್ ಭಯೋತ್ಪಾದಕ ದಾಳಿಗೆ ಪ್ರತಿಕಾರವಾಗಿ 'ಆಪರೇಷನ್ ಸಿಂಧೂರ' ನಡೆಸಿದ್ದು, ಅದು ಕೇವಲ ಉಗ್ರರ ಮೇಲಿನ ದಾಳಿ ಅಷ್ಟೇ ಎನ್ನುವುದನ್ನು ಮನವರಿಕೆ ಮಾಡಿಕೊಡಲು ಯಶಸ್ವಿಯಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸಿಂಗಪುರ:</strong> ನಾವು ಭಯೋತ್ಪಾದಕ ಕೃತ್ಯಗಳನ್ನು ತೀವ್ರವಾಗಿ ಖಂಡಿಸುತ್ತೇವೆ, ಅದರ ವಿರುದ್ಧದ ಹೋರಾಟದಲ್ಲಿ ಭಾರತದ ಪರವಾಗಿದ್ದೇವೆ ಎಂದು ಸಿಂಗಪುರವು ಬೆಂಬಲ ಸೂಚಿಸಿದೆ. </p><p>ಮಂಗಳವಾರ 'ಆಪರೇಷನ್ ಸಿಂಧೂರ' ಕುರಿತು ಮಾಹಿತಿ ನೀಡಲು ತೆರಳಿರುವ ಜೆಡಿ(ಯು) ರಾಜ್ಯ ಸಭಾ ಸದಸ್ಯ ಸಂಜಯ್ ಕುಮಾರ್ ಝಾ ನೇತೃತ್ವದ 'ಸರ್ವಪಕ್ಷ ಸಂಸದೀಯ ನಿಯೋಗ'ದ ಭೇಟಿಯ ನಂತರ ಅಲ್ಲಿನ ವಿದೇಶಾಂಗ ಸಚಿವೆ ಸಿಮ್ ಆನ್ ಅವರು ಭಾರತಕ್ಕೆ ಬೆಂಬಲ ಸೂಚಿಸಿದ್ದಾರೆ. </p><p>ಉಗ್ರವಾದದ ವಿರುದ್ಧ ಭಾರತ ತೆಗೆದುಕೊಳ್ಳುತ್ತಿರುವ ಕ್ರಮಗಳು ಹಾಗೂ ನಿಲುವುಗಳ ಕುರಿತು ಅವರೊಂದಿಗೆ ನಿಯೋಗವು ಚರ್ಚಿಸಿದೆ. </p><p>ಭಾರತ ಹಾಗೂ ಸಿಂಗಪುರಗಳು ಮಿತ್ರ ರಾಷ್ಟ್ರಗಳಾಗಿದ್ದು, ಭಯೋತ್ಪಾದನೆಯಂತಹ ಜಾಗತಿಕ ಸಮಸ್ಯೆಗಳ ವಿರುದ್ಧದ ಹೋರಾಟಕ್ಕೆ ನಮ್ಮ ಸಂಪೂರ್ಣ ಬೆಂಬಲ ಸೂಚಿಸುತ್ತೇವೆ. </p><p>ಮುಂದಿನ ದಿನಗಳಲ್ಲಿ ನಮ್ಮ ನಡುವಿನ ದ್ವಿಪಕ್ಷೀಯ ಸಂಬಂಧಗಳನ್ನು ಮತ್ತಷ್ಟು ವೃದ್ಧಿಸಿಕೊಳ್ಳಲಾಗುತ್ತದೆ ಎಂದು ವಿದೇಶಾಂಗ ಸಚಿವೆ ಸಿಮ್ ಆನ್ ಹೇಳಿದ್ದಾರೆ. </p><p>ಭಾರತೀಯ ನಿಯೋಗವು ಸಿಂಗಪುರ ಸರ್ಕಾರ ಹಾಗೂ ಅಲ್ಲಿನ ಮಾಧ್ಯಮಗಳಿಗೆ ಪಹಲ್ಗಾಮ್ ಭಯೋತ್ಪಾದಕ ದಾಳಿಗೆ ಪ್ರತಿಕಾರವಾಗಿ 'ಆಪರೇಷನ್ ಸಿಂಧೂರ' ನಡೆಸಿದ್ದು, ಅದು ಕೇವಲ ಉಗ್ರರ ಮೇಲಿನ ದಾಳಿ ಅಷ್ಟೇ ಎನ್ನುವುದನ್ನು ಮನವರಿಕೆ ಮಾಡಿಕೊಡಲು ಯಶಸ್ವಿಯಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>