<p><strong>ಸಿಂಗಪುರ:</strong> ಸಿಂಗಪುರ ಸಂಸತ್ನ ಸಂಸದೀಯ ಸಮಿತಿಗೆ ಸುಳ್ಳು ಸಾಕ್ಷ್ಯ ನೀಡಿದ ಪ್ರಕರಣದಲ್ಲಿ ಭಾರತ ಮೂಲದ ವಿರೋಧ ಪಕ್ಷದ ನಾಯಕ ಪ್ರೀತಂ ಸಿಂಗ್ ಅವರಿಗೆ ಇಲ್ಲಿನ ಜಿಲ್ಲಾ ನ್ಯಾಯಾಲಯ ₹9 ಲಕ್ಷ ದಂಡ ವಿಧಿಸಿದೆ.</p><p>ಉಪ ಪ್ರಧಾನ ಜಿಲ್ಲಾ ನ್ಯಾಯಾಧೀಶ ಲೂಕ್ ಟಾನ್ ಅವರು ಎರಡು ಪ್ರಕರಣಗಳಲ್ಲಿ ಪ್ರೀತಂ ತಪ್ಪಿತಸ್ಥ ಎಂದು ಸೋಮವಾರ ತೀರ್ಪು ನೀಡಿದರು. ಎರಡು ಪ್ರಕರಣಗಳಲ್ಲಿ ತಲಾ ₹4.5 ಲಕ್ಷ ದಂಡ ವಿಧಿಸಿದರು.</p><p>ತೀರ್ಪು ಹೊರಬಿದ್ದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ವಿರೋಧ ಪಕ್ಷದ ನಾಯಕ, ಈ ವರ್ಷದ ನವೆಂಬರ್ನಲ್ಲಿ ನಡೆಯಲಿರುವ ಸಾರ್ವತ್ರಿಕ ಚುನಾವಣೆಯಲ್ಲಿ ಸ್ಪರ್ಧಿಸುವುದಾಗಿ ತಿಳಿಸಿದರು.</p><p>ಯಾವುದೇ ಪ್ರಕರಣದಲ್ಲಿ ಸಂಸದರು ಕನಿಷ್ಠ ಒಂದು ವರ್ಷ ಜೈಲು ಅಥವಾ ಕನಿಷ್ಠ ₹ 6.50 ಲಕ್ಷ (ಒಂದು ಅಪರಾಧಕ್ಕೆ ಸಂಬಂಧಿಸಿದಂತೆ) ದಂಡಕ್ಕೆ ಗುರಿಯಾದರೆ ಅವರ ಸಂಸತ್ ಸದಸ್ಯತ್ವ ರದ್ದಾಗುತ್ತದೆ ಮತ್ತು ಚುನಾವಣೆಯಲ್ಲಿ ಸ್ಪರ್ಧಿಸಲು ಅನರ್ಹರಾಗುತ್ತಾರೆ ಎಂದು ನಿಯಮ ಹೇಳುತ್ತದೆ.</p><p>ಆದರೆ, ಸಿಂಗ್ ಅವರಿಗೆ ವಿಧಿಸಿರುವ ಶಿಕ್ಷೆಯು ಅವರನ್ನು ಸಂಸತ್ ಸದಸ್ಯತ್ವದಿಂದ ಅನರ್ಹಗೊಳಿಸುವ ಮಿತಿಯನ್ನು ತಲುಪುವುದಿಲ್ಲ ಎಂದು ಚುನಾವಣಾ ಆಯೋಗ ಸೋಮವಾರ ದೃಢಪಡಿಸಿದೆ.</p><p>‘ತೀರ್ಪಿನ ವಿರುದ್ಧ ಮೇಲ್ಮನವಿ ಸಲ್ಲಿಸಲು ಕಾನೂನು ತಂಡಕ್ಕೆ ಸೂಚಿಸಿದ್ದೇನೆ’ ಎಂದು ಸಿಂಗಪುರ ಸಂಸತ್ನಲ್ಲಿ ವಿಪಕ್ಷ ಸ್ಥಾನದಲ್ಲಿರುವ ವರ್ಕರ್ಸ್ ಪಾರ್ಟಿ ಪ್ರಧಾನ ಕಾರ್ಯದರ್ಶಿಯಾಗಿರುವ ಸಿಂಗ್ ಅವರು ಫೇಸ್ಬುಕ್ ಖಾತೆಯಲ್ಲಿ ಬರೆದುಕೊಂಡಿದ್ದಾರೆ. </p><p>2021ರಲ್ಲಿ ತಮ್ಮದೇ ಪಕ್ಷದ ಮಾಜಿ ಸಂಸದೆ ರಯೀಸಾ ಖಾನ್ ಅವರಿಗೆ ಸಂಬಂಧಿಸಿದ ಪ್ರಕರಣದ ವಿಚಾರಣೆ ವೇಳೆ ಸಂಸದೀಯ ಸಮಿತಿಗೆ ಸುಳ್ಳು ಸಾಕ್ಷ್ಯ ನೀಡಿದ ಎರಡು ಆರೋಪಗಳು ಸಿಂಗ್ ಮೇಲಿದ್ದವು.</p>.ಭಾರತ ಮೂಲದ ಪ್ರೀತಂ ಸಿಂಗ್ ಸಿಂಗಪುರ ವಿರೋಧ ಪಕ್ಷದ ನಾಯಕ.₹246 ಕೋಟಿ ಉಡುಗೊರೆ ಪಡೆದ ಆರೋಪ: ಭಾರತ ಮೂಲದ ಸಿಂಗಪುರ ಸಚಿವನ ವಿರುದ್ಧ ವಿಚಾರಣೆ .ಸಿಂಗಪುರ ಅಧ್ಯಕ್ಷೀಯ ಚುನಾವಣೆ ಸ್ಪರ್ಧೆಗೆ ಅರ್ಹತೆ ಪಡೆದ ಭಾರತ ಮೂಲದ ಷಣ್ಮುಗರತ್ನಂ.ಸಿಂಗಪುರ ಅಧ್ಯಕ್ಷರಾಗಿ ಭಾರತ ಮೂಲದ ಥರ್ಮನ್ ಷಣ್ಮುಗರತ್ನಂ ಆಯ್ಕೆ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸಿಂಗಪುರ:</strong> ಸಿಂಗಪುರ ಸಂಸತ್ನ ಸಂಸದೀಯ ಸಮಿತಿಗೆ ಸುಳ್ಳು ಸಾಕ್ಷ್ಯ ನೀಡಿದ ಪ್ರಕರಣದಲ್ಲಿ ಭಾರತ ಮೂಲದ ವಿರೋಧ ಪಕ್ಷದ ನಾಯಕ ಪ್ರೀತಂ ಸಿಂಗ್ ಅವರಿಗೆ ಇಲ್ಲಿನ ಜಿಲ್ಲಾ ನ್ಯಾಯಾಲಯ ₹9 ಲಕ್ಷ ದಂಡ ವಿಧಿಸಿದೆ.</p><p>ಉಪ ಪ್ರಧಾನ ಜಿಲ್ಲಾ ನ್ಯಾಯಾಧೀಶ ಲೂಕ್ ಟಾನ್ ಅವರು ಎರಡು ಪ್ರಕರಣಗಳಲ್ಲಿ ಪ್ರೀತಂ ತಪ್ಪಿತಸ್ಥ ಎಂದು ಸೋಮವಾರ ತೀರ್ಪು ನೀಡಿದರು. ಎರಡು ಪ್ರಕರಣಗಳಲ್ಲಿ ತಲಾ ₹4.5 ಲಕ್ಷ ದಂಡ ವಿಧಿಸಿದರು.</p><p>ತೀರ್ಪು ಹೊರಬಿದ್ದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ವಿರೋಧ ಪಕ್ಷದ ನಾಯಕ, ಈ ವರ್ಷದ ನವೆಂಬರ್ನಲ್ಲಿ ನಡೆಯಲಿರುವ ಸಾರ್ವತ್ರಿಕ ಚುನಾವಣೆಯಲ್ಲಿ ಸ್ಪರ್ಧಿಸುವುದಾಗಿ ತಿಳಿಸಿದರು.</p><p>ಯಾವುದೇ ಪ್ರಕರಣದಲ್ಲಿ ಸಂಸದರು ಕನಿಷ್ಠ ಒಂದು ವರ್ಷ ಜೈಲು ಅಥವಾ ಕನಿಷ್ಠ ₹ 6.50 ಲಕ್ಷ (ಒಂದು ಅಪರಾಧಕ್ಕೆ ಸಂಬಂಧಿಸಿದಂತೆ) ದಂಡಕ್ಕೆ ಗುರಿಯಾದರೆ ಅವರ ಸಂಸತ್ ಸದಸ್ಯತ್ವ ರದ್ದಾಗುತ್ತದೆ ಮತ್ತು ಚುನಾವಣೆಯಲ್ಲಿ ಸ್ಪರ್ಧಿಸಲು ಅನರ್ಹರಾಗುತ್ತಾರೆ ಎಂದು ನಿಯಮ ಹೇಳುತ್ತದೆ.</p><p>ಆದರೆ, ಸಿಂಗ್ ಅವರಿಗೆ ವಿಧಿಸಿರುವ ಶಿಕ್ಷೆಯು ಅವರನ್ನು ಸಂಸತ್ ಸದಸ್ಯತ್ವದಿಂದ ಅನರ್ಹಗೊಳಿಸುವ ಮಿತಿಯನ್ನು ತಲುಪುವುದಿಲ್ಲ ಎಂದು ಚುನಾವಣಾ ಆಯೋಗ ಸೋಮವಾರ ದೃಢಪಡಿಸಿದೆ.</p><p>‘ತೀರ್ಪಿನ ವಿರುದ್ಧ ಮೇಲ್ಮನವಿ ಸಲ್ಲಿಸಲು ಕಾನೂನು ತಂಡಕ್ಕೆ ಸೂಚಿಸಿದ್ದೇನೆ’ ಎಂದು ಸಿಂಗಪುರ ಸಂಸತ್ನಲ್ಲಿ ವಿಪಕ್ಷ ಸ್ಥಾನದಲ್ಲಿರುವ ವರ್ಕರ್ಸ್ ಪಾರ್ಟಿ ಪ್ರಧಾನ ಕಾರ್ಯದರ್ಶಿಯಾಗಿರುವ ಸಿಂಗ್ ಅವರು ಫೇಸ್ಬುಕ್ ಖಾತೆಯಲ್ಲಿ ಬರೆದುಕೊಂಡಿದ್ದಾರೆ. </p><p>2021ರಲ್ಲಿ ತಮ್ಮದೇ ಪಕ್ಷದ ಮಾಜಿ ಸಂಸದೆ ರಯೀಸಾ ಖಾನ್ ಅವರಿಗೆ ಸಂಬಂಧಿಸಿದ ಪ್ರಕರಣದ ವಿಚಾರಣೆ ವೇಳೆ ಸಂಸದೀಯ ಸಮಿತಿಗೆ ಸುಳ್ಳು ಸಾಕ್ಷ್ಯ ನೀಡಿದ ಎರಡು ಆರೋಪಗಳು ಸಿಂಗ್ ಮೇಲಿದ್ದವು.</p>.ಭಾರತ ಮೂಲದ ಪ್ರೀತಂ ಸಿಂಗ್ ಸಿಂಗಪುರ ವಿರೋಧ ಪಕ್ಷದ ನಾಯಕ.₹246 ಕೋಟಿ ಉಡುಗೊರೆ ಪಡೆದ ಆರೋಪ: ಭಾರತ ಮೂಲದ ಸಿಂಗಪುರ ಸಚಿವನ ವಿರುದ್ಧ ವಿಚಾರಣೆ .ಸಿಂಗಪುರ ಅಧ್ಯಕ್ಷೀಯ ಚುನಾವಣೆ ಸ್ಪರ್ಧೆಗೆ ಅರ್ಹತೆ ಪಡೆದ ಭಾರತ ಮೂಲದ ಷಣ್ಮುಗರತ್ನಂ.ಸಿಂಗಪುರ ಅಧ್ಯಕ್ಷರಾಗಿ ಭಾರತ ಮೂಲದ ಥರ್ಮನ್ ಷಣ್ಮುಗರತ್ನಂ ಆಯ್ಕೆ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>