ಪ್ರಧಾನಿ ಸ್ಥಾನಕ್ಕಾಗಿ ನಡೆಯುತ್ತಿರುವ ಹಗ್ಗಜಗ್ಗಾಟ ಸಂಸತ್ ವಿಸರ್ಜನೆಗೆ ಎಡೆಮಾಡಿಕೊಟ್ಟಿದೆ. 2015ರಲ್ಲಿ ಸರ್ಕಾರ ರಚನೆಯ ಕಸರತ್ತಿನಲ್ಲಿ ಅಧ್ಯಕ್ಷ ಮೈತ್ರಿಪಾಲ ಸಿರಿಸೇನ, ರನಿಲ್ ವಿಕ್ರಮಸಿಂಘೆ ಅವರೊಂದಿಗೆ ಕೈಜೋಡಿಸಿದ್ದರು. ಪ್ರಧಾನಿಯಾಗಿದ್ದ ರನಿಲ್ ವಿಕ್ರಮಸಿಂಘೆ ಅವರನ್ನು ಅಕ್ಟೋಬರ್ 26ರಂದು ಸಿರಿಸೇನ ಪದಚ್ಯುತಗೊಳಿಸಿ,ಪ್ರಧಾನಿ ಹುದ್ದೆಗೆ ಮಾಜಿ ಅಧ್ಯಕ್ಷ ಮಹಿಂದ ರಾಜಪಕ್ಸೆ ಅವರನ್ನು ನೇಮಿಸಲಾಗಿತ್ತು.