ದುಬೈ: ಒಮಾನ್ನಲ್ಲಿ ಆರು ಕಟ್ಟಡ ನಿರ್ಮಾಣ ಕಾರ್ಮಿಕರು ಮೃತಪಟ್ಟಿದ್ದು, ಇವರು ಭಾರತೀಯರು ಎಂಬ ಶಂಕೆ ವ್ಯಕ್ತವಾಗಿದೆ. ನೀರಿನ ಪೈಪ್ಲೈನ್ ಕಾಮಗಾರಿಗಾಗಿ ನೆಲ ಅಗೆಯುತ್ತಿದ್ದಾಗ ಈ ಅವಘಡ ಸಂಭವಿಸಿದೆ.
ಭಾರಿ ಮಳೆ ಬಿದ್ದ ನಂತರ ಮಸ್ಕತ್ನ ಸೀಬ್ ಪ್ರದೇಶದಲ್ಲಿ ಕಾಮಗಾರಿ ನಡೆಯುತ್ತಿದ್ದ ವೇಳೆ ಭಾನುವಾರ ಈ ಅವಘಡ ನಡೆದಿದೆ ಎಂದು ಮಸ್ಕತ್ನಲ್ಲಿನ ಭಾರತೀಯ ರಾಯಭಾರ ಕಚೇರಿ ತಿಳಿಸಿದೆ.
ಘಟನೆಯ ಬಗ್ಗೆ ಹೆಚ್ಚಿನ ಮಾಹಿತಿ ಪಡೆಯಲು ಮತ್ತು ಮೃತರ ಗುರುತು ದೃಢಪಡಿಸಿಕೊಳ್ಳಲು ಒಮನ್ ಅಧಿ ಕಾರಿಗಳೊಂದಿಗೆ ನಿರಂತರ ಸಂಪರ್ಕದಲ್ಲಿ ಇರುವುದಾಗಿ ರಾಯಭಾರ ಕಚೇರಿ ತಿಳಿಸಿದೆ.
ನೆಲದಿಂದ 14 ಮೀಟರ್ ಆಳದಲ್ಲಿ ಕಾರ್ಮಿಕರು ಕೆಲಸ ಮಾಡುತ್ತಿದ್ದಾಗ ಮಣ್ಣು ಕುಸಿದಿದೆ ಎನ್ನಲಾಗುತ್ತಿದೆ.