ಕಠ್ಮಂಡು: ಹಿಮಾಲಯದ ಅನ್ನಪೂರ್ಣ ಪರ್ವತದಲ್ಲಿ ಸಂಭವಿಸಿದ ಭಾರಿ ಹಿಮಪಾತದಲ್ಲಿ ಸಿಲುಕಿದ್ದ 200 ಚಾರಣಿಗರನ್ನು ರಕ್ಷಿಸಲಾಗಿದೆ ಎಂದು ನೇಪಾಳದ ಅಧಿಕಾರಿಗಳು ತಿಳಿಸಿದ್ದಾರೆ.
ದಕ್ಷಿಣ ಕೊರಿಯಾದ ನಾಲ್ವರು ಮತ್ತು ನೇಪಾಳದ ಮೂವರು ಇನ್ನೂ ಪತ್ತೆಯಾಗಿಲ್ಲ. ಹೆಲಿಕಾಪ್ಟರ್ ಹಾರಾಟಕ್ಕೆ ಪೂರಕ ವಾತಾವರಣವಿದ್ದ ಕಾರಣ ಕಾರ್ಯಾಚರಣೆ ನಡೆಸಲಾಗಿದೆ. ರಕ್ಷಣಾ ಕಾರ್ಯಾಚರಣೆಗೆ ದಕ್ಷಿಣ ಕೊರಿಯಾದ ತಂಡ ನೇಪಾಳಕ್ಕೆ ಬಂದಿದೆ.
2014ರಲ್ಲಿ ಇದೇ ಪ್ರದೇಶದಲ್ಲಿ ಭಾರಿ ಹಿಮಪಾತ ಸಂಭವಿಸಿ 40 ಜನಮೃತಪಟ್ಟಿದ್ದರು.