<p><strong>ಕೊಲಂಬೊ:</strong> ಶ್ರೀಲಂಕಾದಲ್ಲಿ ಸರ್ವಪಕ್ಷ ಮಧ್ಯಂತರ ಸರ್ಕಾರ ರಚಿಸಲು ಅಲ್ಲಿನ ಪ್ರಮುಖ ವಿರೋಧ ಪಕ್ಷಗಳು ಭಾನುವಾರ ನಿರ್ಧರಿಸಿವೆ.<br />ಅಧ್ಯಕ್ಷ ಗೊಟಬಯ ರಾಜಪಕ್ಸ ಮತ್ತು ಪ್ರಧಾನಿ ರಾನಿಲ್ ವಿಕ್ರಮಸಿಂಘೆ ಬಗ್ಗೆ ಜನರಲ್ಲಿ ಭಾರಿ ಆಕ್ರೋಶ<br />ಸೃಷ್ಟಿಯಾಗಿದೆ. ಹಾಗಾಗಿ, ಗೊಟಬಯ ಅವರು ಬುಧವಾರ ರಾಜೀನಾಮೆ ನೀಡುವುದಾಗಿ ಘೋಷಿಸಿದ್ದಾರೆ.</p>.<p>ಈಗ ದೇಶದ ಮುಂದೆ ಇರುವ ಆರ್ಥಿಕ ಬಿಕ್ಕಟ್ಟು ಮತ್ತು ಗೊಟಬಯ ರಾಜೀನಾಮೆಯಿಂದ ಸೃಷ್ಟಿಯಾಗುವ ಪರಿಸ್ಥಿತಿಯನ್ನು ಹೇಗೆ ನಿಭಾಯಿಸುವುದು ಎಂಬ ಕುರಿತು ಚರ್ಚಿಸಲು ವಿರೋಧ ಪಕ್ಷಗಳ ಮುಖಂಡರು ಸಭೆ ನಡೆಸಿದ್ದರು.</p>.<p>‘ಎಲ್ಲ ಪಕ್ಷಗಳಿಗೂ ಪ್ರಾತಿನಿಧ್ಯ ಇರುವ ಮಧ್ಯಂತರ ಸರ್ಕಾರ ರಚಿಸಲು ತಾತ್ವಿಕವಾಗಿ ನಾವು ಸಮ್ಮತಿಸಿದ್ದೇವೆ’ ಎಂದು ಆಡಳಿತಾರೂಢ ಶ್ರೀಲಂಕಾ ಪೊದುಜನ ಪೆರಮುನ ಪಕ್ಷದಿಂದ ಸಿಡಿದು ಬೇರೆಯಾಗಿರುವ ಬಣದ ನಾಯಕ ವಿಮಲ್ ವೀರವಂಶ ಹೇಳಿದ್ದಾರೆ.</p>.<p>ರಾಜಪಕ್ಸ ಅವರ ರಾಜೀನಾಮೆಯ ವರೆಗೆ ಕಾಯುವ ಅಗತ್ಯವೇನೂ ಇಲ್ಲ ಎಂದು ಇದೇ ಬಣದ ಇನ್ನೊಬ್ಬ ನಾಯಕ ವಾಸುದೇವ ನನಯಕ್ಕರ ಹೇಳಿದ್ದಾರೆ.</p>.<p>ಅಧ್ಯಕ್ಷ ಸ್ಥಾನಕ್ಕೆ ಬುಧವಾರ ರಾಜೀನಾಮೆ ನೀಡುವುದಾಗಿ ಸಂಸತ್ತಿನ ಸ್ಪೀಕರ್ ಮಹಿಂದಾ ಯಪ ಅಭಯ<br />ವರ್ಧನ ಅವರಿಗೆ ಗೊಟಬಯ ಅವರು ಶನಿವಾರ ತಿಳಿಸಿದ್ದಾರೆ. ಪ್ರಧಾನಿ ರಾನಿಲ್ ವಿಕ್ರಮಸಿಂಘೆ ಅವರೂ ರಾಜೀನಾಮೆ ನೀಡುವುದಾಗಿ ಹೇಳಿದ್ದಾರೆ.ಅಧ್ಯಕ್ಷರು ರಾಜೀನಾಮೆ ನೀಡಬೇಕು ಎಂದು ವಿರೋಧ ಪಕ್ಷಗಳು ಬಯಸಿವೆ ಎಂದು ಸ್ಪೀಕರ್ ಅವರು ಗೊಟಬಯ ಅವರಿಗೆ ಶನಿವಾರ ತಿಳಿಸಿದ್ದರು.</p>.<p>ರಾಜಕೀಯ ಪಕ್ಷಗಳ ಮುಖಂಡರು ಸೋಮವಾರ ಸಭೆ ಸೇರಿ, ಸಂಸತ್ ಅಧಿವೇಶನ ನಡೆಸುವುದು ಮತ್ತು ರಾಜಪಕ್ಸ ಅವರಿಂದ ಅಧಿಕಾರ ಹಸ್ತಾಂತರ ಪ್ರಕ್ರಿಯೆಗಳ ಬಗ್ಗೆ ಚರ್ಚೆ ನಡೆಸಲಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೊಲಂಬೊ:</strong> ಶ್ರೀಲಂಕಾದಲ್ಲಿ ಸರ್ವಪಕ್ಷ ಮಧ್ಯಂತರ ಸರ್ಕಾರ ರಚಿಸಲು ಅಲ್ಲಿನ ಪ್ರಮುಖ ವಿರೋಧ ಪಕ್ಷಗಳು ಭಾನುವಾರ ನಿರ್ಧರಿಸಿವೆ.<br />ಅಧ್ಯಕ್ಷ ಗೊಟಬಯ ರಾಜಪಕ್ಸ ಮತ್ತು ಪ್ರಧಾನಿ ರಾನಿಲ್ ವಿಕ್ರಮಸಿಂಘೆ ಬಗ್ಗೆ ಜನರಲ್ಲಿ ಭಾರಿ ಆಕ್ರೋಶ<br />ಸೃಷ್ಟಿಯಾಗಿದೆ. ಹಾಗಾಗಿ, ಗೊಟಬಯ ಅವರು ಬುಧವಾರ ರಾಜೀನಾಮೆ ನೀಡುವುದಾಗಿ ಘೋಷಿಸಿದ್ದಾರೆ.</p>.<p>ಈಗ ದೇಶದ ಮುಂದೆ ಇರುವ ಆರ್ಥಿಕ ಬಿಕ್ಕಟ್ಟು ಮತ್ತು ಗೊಟಬಯ ರಾಜೀನಾಮೆಯಿಂದ ಸೃಷ್ಟಿಯಾಗುವ ಪರಿಸ್ಥಿತಿಯನ್ನು ಹೇಗೆ ನಿಭಾಯಿಸುವುದು ಎಂಬ ಕುರಿತು ಚರ್ಚಿಸಲು ವಿರೋಧ ಪಕ್ಷಗಳ ಮುಖಂಡರು ಸಭೆ ನಡೆಸಿದ್ದರು.</p>.<p>‘ಎಲ್ಲ ಪಕ್ಷಗಳಿಗೂ ಪ್ರಾತಿನಿಧ್ಯ ಇರುವ ಮಧ್ಯಂತರ ಸರ್ಕಾರ ರಚಿಸಲು ತಾತ್ವಿಕವಾಗಿ ನಾವು ಸಮ್ಮತಿಸಿದ್ದೇವೆ’ ಎಂದು ಆಡಳಿತಾರೂಢ ಶ್ರೀಲಂಕಾ ಪೊದುಜನ ಪೆರಮುನ ಪಕ್ಷದಿಂದ ಸಿಡಿದು ಬೇರೆಯಾಗಿರುವ ಬಣದ ನಾಯಕ ವಿಮಲ್ ವೀರವಂಶ ಹೇಳಿದ್ದಾರೆ.</p>.<p>ರಾಜಪಕ್ಸ ಅವರ ರಾಜೀನಾಮೆಯ ವರೆಗೆ ಕಾಯುವ ಅಗತ್ಯವೇನೂ ಇಲ್ಲ ಎಂದು ಇದೇ ಬಣದ ಇನ್ನೊಬ್ಬ ನಾಯಕ ವಾಸುದೇವ ನನಯಕ್ಕರ ಹೇಳಿದ್ದಾರೆ.</p>.<p>ಅಧ್ಯಕ್ಷ ಸ್ಥಾನಕ್ಕೆ ಬುಧವಾರ ರಾಜೀನಾಮೆ ನೀಡುವುದಾಗಿ ಸಂಸತ್ತಿನ ಸ್ಪೀಕರ್ ಮಹಿಂದಾ ಯಪ ಅಭಯ<br />ವರ್ಧನ ಅವರಿಗೆ ಗೊಟಬಯ ಅವರು ಶನಿವಾರ ತಿಳಿಸಿದ್ದಾರೆ. ಪ್ರಧಾನಿ ರಾನಿಲ್ ವಿಕ್ರಮಸಿಂಘೆ ಅವರೂ ರಾಜೀನಾಮೆ ನೀಡುವುದಾಗಿ ಹೇಳಿದ್ದಾರೆ.ಅಧ್ಯಕ್ಷರು ರಾಜೀನಾಮೆ ನೀಡಬೇಕು ಎಂದು ವಿರೋಧ ಪಕ್ಷಗಳು ಬಯಸಿವೆ ಎಂದು ಸ್ಪೀಕರ್ ಅವರು ಗೊಟಬಯ ಅವರಿಗೆ ಶನಿವಾರ ತಿಳಿಸಿದ್ದರು.</p>.<p>ರಾಜಕೀಯ ಪಕ್ಷಗಳ ಮುಖಂಡರು ಸೋಮವಾರ ಸಭೆ ಸೇರಿ, ಸಂಸತ್ ಅಧಿವೇಶನ ನಡೆಸುವುದು ಮತ್ತು ರಾಜಪಕ್ಸ ಅವರಿಂದ ಅಧಿಕಾರ ಹಸ್ತಾಂತರ ಪ್ರಕ್ರಿಯೆಗಳ ಬಗ್ಗೆ ಚರ್ಚೆ ನಡೆಸಲಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>