ಸಿಐಡಿ ಎದುರು ಹಾಜರಾಗಿ ಹೇಳಿಕೆ ದಾಖಲಿಸುವಂತೆ ಜಯಸುಂದರ ಅವರಿಗೆ ಸೂಚಿಸಲಾಗಿತ್ತು. ಆದರೆ, ಅವರು ಆಸ್ಪತ್ರೆಗೆ ದಾಖಲಾಗಿದ್ದರು. ಸಿಐಡಿ ಅಧಿಕಾರಿಗಳು ಆಸ್ಪತ್ರೆಗೆ ತೆರಳಿ, ವಿಚಾರಣೆಗೊಳಪಡಿಸಿದ ನಂತರ ಬಂಧಿಸಿದ್ದಾರೆ ಎಂದು ಕೊಲಂಬೊ ಗೆಜೆಟ್ ವರದಿ ಮಾಡಿದೆ. ಬಂಧಿತ ಅಧಿಕಾರಿಗಳ ವಿರುದ್ಧ ತನಿಖೆಗೆ ಮೂವರ ಸದಸ್ಯರ ಸಮಿತಿಯನ್ನು ಅಧ್ಯಕ್ಷ ಸಿರಿಸೇನಾ ರಚಿಸಿದ್ದಾರೆ.