<p><strong>ಕೊಲಂಬೊ</strong>: ಕೇಬಲ್ ಚಾಲಿತ ಕಾರು ಪಲ್ಟಿಯಾಗಿ ಭಾರತೀಯ ಸೇರಿ ಏಳು ಮಂದಿ ಬೌದ್ಧ ಸನ್ಯಾಸಿಗಳು ಮೃತಪಟ್ಟ ಘಟನೆ ವಾಯವ್ಯ ಶ್ರೀಲಂಕಾದಲ್ಲಿ ನಡೆದಿದೆ ಎಂದು ಪೊಲೀಸರು ಗುರುವಾರ ತಿಳಿಸಿದ್ದಾರೆ.</p><p>ಕೊಲಂಬೊದಿಂದ ಸುಮಾರು 125 ಕಿ.ಮೀ ದೂರದಲ್ಲಿರುವ ನಿಕಾವೆರಟಿಯಾದಲ್ಲಿರುವ ಪ್ರಸಿದ್ಧ ಬೌದ್ಧ ಮಠವಾದ ‘ನಾ ಉಯನ ಅರಣ್ಯ ಸೇನಾಸನಯ’ದಲ್ಲಿ ಬುಧವಾರ ರಾತ್ರಿ ಈ ಘಟನೆ ಸಂಭವಿಸಿದೆ. ಈ ಮಠವು ಧ್ಯಾನ ಕೇಂದ್ರಗಳಿಗೆ ಹೆಸರುವಾಸಿಯಾಗಿದ್ದು, ಪ್ರಪಂಚದಾದ್ಯಂತ ವಿವಿಧ ಪ್ರದೇಶಗಳ ಸಾಧಕರು ಇಲ್ಲಿಗೆ ಭೇಟಿ ನೀಡುತ್ತಾರೆ.</p><p>ಆರಂಭಿಕ ವರದಿಗಳ ಪ್ರಕಾರ ಕೇಬಲ್ ತುಂಡಾಗಿ, ಅತಿ ವೇಗದಲ್ಲಿ ಕೆಳಮುಖವಾಗಿ ಚಲಿಸುತ್ತಿದ್ದ ಕಾರು ಬೋಗಿ ಮರಕ್ಕೆ ಡಿಕ್ಕಿ ಹೊಡೆದಿದೆ. ಮೃತರಲ್ಲಿ ಭಾರತ, ರಷ್ಯಾ ಮತ್ತು ರೊಮೇನಿಯಾದ ತಲಾ ಒಬ್ಬರು ಸೇರಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.</p><p>ಘಟನೆಯಲ್ಲಿ ಆರು ಮಂದಿ ಗಾಯಗೊಂಡಿದ್ದು, ಇವರಲ್ಲಿ ನಾಲ್ವರ ಸ್ಥಿತಿ ಗಂಭೀರವಾಗಿದೆ ಎಂದೂ ಅವರು ಮಾಹಿತಿ ನೀಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೊಲಂಬೊ</strong>: ಕೇಬಲ್ ಚಾಲಿತ ಕಾರು ಪಲ್ಟಿಯಾಗಿ ಭಾರತೀಯ ಸೇರಿ ಏಳು ಮಂದಿ ಬೌದ್ಧ ಸನ್ಯಾಸಿಗಳು ಮೃತಪಟ್ಟ ಘಟನೆ ವಾಯವ್ಯ ಶ್ರೀಲಂಕಾದಲ್ಲಿ ನಡೆದಿದೆ ಎಂದು ಪೊಲೀಸರು ಗುರುವಾರ ತಿಳಿಸಿದ್ದಾರೆ.</p><p>ಕೊಲಂಬೊದಿಂದ ಸುಮಾರು 125 ಕಿ.ಮೀ ದೂರದಲ್ಲಿರುವ ನಿಕಾವೆರಟಿಯಾದಲ್ಲಿರುವ ಪ್ರಸಿದ್ಧ ಬೌದ್ಧ ಮಠವಾದ ‘ನಾ ಉಯನ ಅರಣ್ಯ ಸೇನಾಸನಯ’ದಲ್ಲಿ ಬುಧವಾರ ರಾತ್ರಿ ಈ ಘಟನೆ ಸಂಭವಿಸಿದೆ. ಈ ಮಠವು ಧ್ಯಾನ ಕೇಂದ್ರಗಳಿಗೆ ಹೆಸರುವಾಸಿಯಾಗಿದ್ದು, ಪ್ರಪಂಚದಾದ್ಯಂತ ವಿವಿಧ ಪ್ರದೇಶಗಳ ಸಾಧಕರು ಇಲ್ಲಿಗೆ ಭೇಟಿ ನೀಡುತ್ತಾರೆ.</p><p>ಆರಂಭಿಕ ವರದಿಗಳ ಪ್ರಕಾರ ಕೇಬಲ್ ತುಂಡಾಗಿ, ಅತಿ ವೇಗದಲ್ಲಿ ಕೆಳಮುಖವಾಗಿ ಚಲಿಸುತ್ತಿದ್ದ ಕಾರು ಬೋಗಿ ಮರಕ್ಕೆ ಡಿಕ್ಕಿ ಹೊಡೆದಿದೆ. ಮೃತರಲ್ಲಿ ಭಾರತ, ರಷ್ಯಾ ಮತ್ತು ರೊಮೇನಿಯಾದ ತಲಾ ಒಬ್ಬರು ಸೇರಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.</p><p>ಘಟನೆಯಲ್ಲಿ ಆರು ಮಂದಿ ಗಾಯಗೊಂಡಿದ್ದು, ಇವರಲ್ಲಿ ನಾಲ್ವರ ಸ್ಥಿತಿ ಗಂಭೀರವಾಗಿದೆ ಎಂದೂ ಅವರು ಮಾಹಿತಿ ನೀಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>