ಭಾನುವಾರದಿಂದ ಭಾರಿ ಮಳೆ ಸುರಿಯುತ್ತಿದ್ದು, ಮನೆಗಳು ಮತ್ತು ರಸ್ತೆಗಳು ಜಲಾವೃತಗೊಂಡಿವೆ. ಮುಂಜಾಗ್ರತಾ ಕ್ರಮವಾಗಿ ವಿದ್ಯುತ್ ಸಂಪರ್ಕವನ್ನು ಕಡಿತಗೊಳಿಸಲಾಗಿದೆ. ರಾಜಧಾನಿ ಕೊಲಂಬೊ ಮತ್ತು ರತ್ನಾಪುರ ಜಿಲ್ಲೆಯಲ್ಲಿ ಆರು ಮಂದಿ ಪ್ರವಾಹದಲ್ಲಿ ಕೊಚ್ಚಿಕೊಂಡು ಹೋಗಿದ್ದಾರೆ ಎಂದು ವಿಪತ್ತು ನಿರ್ವಹಣಾ ಕೇಂದ್ರ ಮಾಹಿತಿ ನೀಡಿದೆ. ಮನೆಗಳ ಮೇಲೆ ಮಣ್ಣು ಕುಸಿದು ಇತರ ಮೂವರ ಸತ್ತಿದ್ದು, ಮರ ಬಿದ್ದು ಒಬ್ಬ ಮೃತಪಟ್ಟಿದ್ದಾನೆ.