<p><strong>ಕೊಲಂಬೊ</strong>: ಸರ್ಕಾರದ ನಿಧಿಯನ್ನು ದುರುಪಯೋಗ ಮಾಡಿಕೊಂಡ ಆರೋಪದ ಮೇಲೆ ಶ್ರೀಲಂಕಾದ ಮಾಜಿ ಅಧ್ಯಕ್ಷ ರಾನಿಲ್ ವಿಕ್ರಮ್ಸಿಂಘೆ ಅವರನ್ನು ಅಪರಾಧ ತನಿಖಾ ವಿಭಾಗ (ಸಿಐಡಿ) ಬಂಧಿಸಿದೆ.</p><p>2023ರ ಸೆಪ್ಟೆಂಬರ್ನಲ್ಲಿ ವಿಕ್ರಮ್ಸಿಂಘೆ ಅವರು ಇಂಗ್ಲೆಂಡ್ಗೆ ಪ್ರಯಾಣಿಸಲು ಸಾರ್ವಜನಿಕ ನಿಧಿಯ ಹಣವನ್ನು ಬಳಸಿದ್ದಾರೆ ಎಂದು ಆರೋಪಿಸಲಾಗಿದೆ.</p><p>ಸಿಂಘೆ ಅವರು ಅಮೆರಿಕದಲ್ಲಿ ಅಧಿಕೃತವಾಗಿ ಸಮಾರಂಭವೊಂದರಲ್ಲಿ ಭಾಗಿಯಾಗಿದ್ದರು. ಅಲ್ಲಿಂದ ಬಂದ ಬಳಿಕ ಖಾಸಗಿ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಇಂಗ್ಲೆಂಡ್ಗೆ ತೆರಳಿದ್ದರು. ತಮ್ಮ ಈ ಪ್ರವಾಸಕ್ಕೆ ಸಾರ್ವಜನಿಕ ನಿಧಿಗಾಗಿ ಮೀಸಲಿಟ್ಟಿದ್ದ ಸರ್ಕಾರದ ಹಣವನ್ನು ಬಳಸಿಕೊಂಡಿದ್ದಾರೆ ಎಂದು ಆರೋಪಿಸಲಾಗಿದೆ.</p><p>ಸಿಂಘೆ, 2022ರ ಜುಲೈನಿಂದ 2024ರ ಸೆಪ್ಟೆಂಬರ್ ವರೆಗೆ ಶ್ರೀಲಂಕಾದ ಅಧ್ಯಕ್ಷರಾಗಿದ್ದರು. ದೇಶದ ಆರ್ಥಿಕ ಪರಿಸ್ಥಿತಿಯ ವಿರುದ್ಧ ನಡೆಯುತ್ತಿದ್ದ ಪ್ರತಿಭಟನೆಯಿಂದಾಗಿ ಗೊಟಬಯಾ ರಾಜಪಕ್ಸೆ ಅವರು ಹುದ್ದೆಗೆ ರಾಜೀನಾಮೆ ನೀಡಿದ್ದರು. ಹೀಗಾಗಿ ಉಳಿದ ಅವಧಿಯನ್ನು ಪೂರೈಸಲು ಸಿಂಘೆ ಅವರನ್ನು ಅಧ್ಯಕ್ಷರನ್ನಾಗಿ ಮಾಡಲಾಗಿತ್ತು.</p><p>ಸಿಂಘೆ ಅವರು ಆರು ಬಾರಿ ಶ್ರೀಲಂಕಾದ ಪ್ರಧಾನಿಯಾಗಿ ಕಾರ್ಯನಿರ್ವಹಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೊಲಂಬೊ</strong>: ಸರ್ಕಾರದ ನಿಧಿಯನ್ನು ದುರುಪಯೋಗ ಮಾಡಿಕೊಂಡ ಆರೋಪದ ಮೇಲೆ ಶ್ರೀಲಂಕಾದ ಮಾಜಿ ಅಧ್ಯಕ್ಷ ರಾನಿಲ್ ವಿಕ್ರಮ್ಸಿಂಘೆ ಅವರನ್ನು ಅಪರಾಧ ತನಿಖಾ ವಿಭಾಗ (ಸಿಐಡಿ) ಬಂಧಿಸಿದೆ.</p><p>2023ರ ಸೆಪ್ಟೆಂಬರ್ನಲ್ಲಿ ವಿಕ್ರಮ್ಸಿಂಘೆ ಅವರು ಇಂಗ್ಲೆಂಡ್ಗೆ ಪ್ರಯಾಣಿಸಲು ಸಾರ್ವಜನಿಕ ನಿಧಿಯ ಹಣವನ್ನು ಬಳಸಿದ್ದಾರೆ ಎಂದು ಆರೋಪಿಸಲಾಗಿದೆ.</p><p>ಸಿಂಘೆ ಅವರು ಅಮೆರಿಕದಲ್ಲಿ ಅಧಿಕೃತವಾಗಿ ಸಮಾರಂಭವೊಂದರಲ್ಲಿ ಭಾಗಿಯಾಗಿದ್ದರು. ಅಲ್ಲಿಂದ ಬಂದ ಬಳಿಕ ಖಾಸಗಿ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಇಂಗ್ಲೆಂಡ್ಗೆ ತೆರಳಿದ್ದರು. ತಮ್ಮ ಈ ಪ್ರವಾಸಕ್ಕೆ ಸಾರ್ವಜನಿಕ ನಿಧಿಗಾಗಿ ಮೀಸಲಿಟ್ಟಿದ್ದ ಸರ್ಕಾರದ ಹಣವನ್ನು ಬಳಸಿಕೊಂಡಿದ್ದಾರೆ ಎಂದು ಆರೋಪಿಸಲಾಗಿದೆ.</p><p>ಸಿಂಘೆ, 2022ರ ಜುಲೈನಿಂದ 2024ರ ಸೆಪ್ಟೆಂಬರ್ ವರೆಗೆ ಶ್ರೀಲಂಕಾದ ಅಧ್ಯಕ್ಷರಾಗಿದ್ದರು. ದೇಶದ ಆರ್ಥಿಕ ಪರಿಸ್ಥಿತಿಯ ವಿರುದ್ಧ ನಡೆಯುತ್ತಿದ್ದ ಪ್ರತಿಭಟನೆಯಿಂದಾಗಿ ಗೊಟಬಯಾ ರಾಜಪಕ್ಸೆ ಅವರು ಹುದ್ದೆಗೆ ರಾಜೀನಾಮೆ ನೀಡಿದ್ದರು. ಹೀಗಾಗಿ ಉಳಿದ ಅವಧಿಯನ್ನು ಪೂರೈಸಲು ಸಿಂಘೆ ಅವರನ್ನು ಅಧ್ಯಕ್ಷರನ್ನಾಗಿ ಮಾಡಲಾಗಿತ್ತು.</p><p>ಸಿಂಘೆ ಅವರು ಆರು ಬಾರಿ ಶ್ರೀಲಂಕಾದ ಪ್ರಧಾನಿಯಾಗಿ ಕಾರ್ಯನಿರ್ವಹಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>