<p><strong>ಕೊಲಂಬೊ/ಅಲವತುಗೋಡ (ಶ್ರೀಲಂಕಾ)</strong>: ದ್ವೀಪ ರಾಷ್ಟ್ರ ಶ್ರೀಲಂಕಾದಲ್ಲಿ ‘ದಿತ್ವಾ’ ಚಂಡಮಾರುತದಿಂದ ಉಂಟಾದ ಭೂಕುಸಿತ ಹಾಗೂ ಪ್ರವಾಹದಿಂದಾಗಿ ಈವರೆಗೆ 410 ಮಂದಿ ಮೃತಪಟ್ಟಿದ್ದು, 336 ಜನ ಕಾಣೆಯಾಗಿದ್ದಾರೆ. </p>.<p>4.07 ಲಕ್ಷ ಕುಟುಂಬಗಳ 14.66 ಲಕ್ಷ ಜನರು ಬಾಧಿತರಾಗಿದ್ದಾರೆ. 15 ಪ್ರಮುಖ ಸೇತುವೆಗಳು, 256 ರಸ್ತೆಗಳು ಹಾನಿಗೊಳಗಾಗಿವೆ ಎಂದು ವಿಪತ್ತು ನಿರ್ವಹಣಾ ಕೇಂದ್ರ ತಿಳಿಸಿದೆ.</p>.<p>ಸೇನಾ ಪಡೆ ಮತ್ತು ಪೊಲೀಸ್ ಇಲಾಖೆಯ ನೂರಾರು ಸಿಬ್ಬಂದಿ ರಕ್ಷಣಾ ಕಾರ್ಯಾಚರಣೆ ಕೈಗೊಂಡಿದ್ದಾರೆ. ಮಣ್ಣಿನಡಿ ಸಿಲುಕಿರುವ ಜನರಿಗಾಗಿ ಶೋಧ ಕಾರ್ಯ ನಡೆಸುತ್ತಿದ್ದಾರೆ. ರಸ್ತೆ, ವಿದ್ಯುತ್ ಸಂಪರ್ಕ ಮರುಸ್ಥಾಪಿಸುವ ಕಾರ್ಯ ಸಮರೋಪಾದಿಯಲ್ಲಿ ಸಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.</p>.<p>ಇತ್ತೀಚಿನ ದಿನಗಳಲ್ಲಿ ದಕ್ಷಿಣ ಮತ್ತು ಆಗ್ನೇಯ ಏಷ್ಯಾದಾದ್ಯಂತ ಮಾರಕ ಬಿರುಗಾಳಿ ಬೀಸಿದ್ದು, ಇಂಡೊನೇಷ್ಯಾ, ಮಲೇಷ್ಯಾ ಮತ್ತು ಥಾಯ್ಲೆಂಡ್ನ ಹೆಚ್ಚಿನ ಭಾಗಗಳನ್ನು ಧ್ವಂಸಗೊಳಿಸಿದೆ. ನೂರಾರು ಜೀವಗಳನ್ನು ಬಲಿ ಪಡೆದಿದೆ.</p>.<h2><strong>‘ತುರ್ತು ಸ್ಪಂದನೆ: ಪ್ರಮುಖ ಪಾತ್ರ ವಹಿಸಿದ ಭಾರತ’</strong></h2> <p>‘ದಿತ್ವಾ ಚಂಡಮಾರುತದಿಂದ ಉದ್ಭವಿಸಿರುವ ತುರ್ತು ಪರಿಸ್ಥಿತಿಯನ್ನು ಸಮರ್ಪಕವಾಗಿ ನಿಭಾಯಿಸುವ ಕಾರ್ಯದಲ್ಲಿ ಭಾರತವು ಪ್ರಮುಖ ಪಾತ್ರ ವಹಿಸಿದೆ’ ಎಂದು ಶ್ರೀಲಂಕಾದ ಅಧ್ಯಕ್ಷ ಅನುರಾ ಕುಮಾರ ದಿಸ್ಸನಾಯಕೆ ಅವರ ಕಚೇರಿ ಮಂಗಳವಾರ ತಿಳಿಸಿದೆ.</p><p>‘ಪ್ರಧಾನಿ ನರೇಂದ್ರ ಮೋದಿ ಅವರು ಅನುರಾ ಕುಮಾರ ದಿಸ್ಸನಾಯಕೆ ಅವರ ಜೊತೆ ಮಾತನಾಡಿ ಚಂಡಮಾರುತದಿಂದಾದ ಅವಘಡಗಳಲ್ಲಿ ಮೃತರಿಗೆ ಸಂತಾಪ ಸೂಚಿಸಿದ್ದಾರೆ. ಈ ಕಷ್ಟದ ಸಮಯದಲ್ಲಿ ಭಾರತವು ಶ್ರೀಲಂಕಾ ಮತ್ತು ಅದರ ಜನರೊಂದಿಗೆ ದೃಢವಾಗಿ ನಿಲ್ಲುತ್ತದೆ ಎಂದು ಪುನರುಚ್ಚರಿಸಿದ್ದಾರೆ’ ಎಂದು ಹೇಳಿದೆ. </p><p>ದ್ವೀಪ ರಾಷ್ಟ್ರವು ವ್ಯಾಪಕ ಪ್ರವಾಹ ಭೂಕುಸಿತ ಮತ್ತು ಮೂಲಸೌಕರ್ಯ ನಾಶದಿಂದ ಸಂಕಷ್ಟಕ್ಕೆ ಸಿಲುಕಿದೆ. ಹಲವು ಜಿಲ್ಲೆಗಳು ಪ್ರತ್ಯೇಕಗೊಂಡಿವೆ. ಭಾರತವು ‘ಸಾಗರ ಬಂಧು’ ಕಾರ್ಯಾಚರಣೆಯಡಿ ಎನ್ಡಿಆರ್ಎಫ್ನ 80 ಸಿಬ್ಬಂದಿಯನ್ನು ದ್ವೀಪ ರಾಷ್ಟ್ರಕ್ಕೆ ಕಳುಹಿಸಿದೆ. </p>.<div><div class="bigfact-title">ಇಂಡೊನೇಷ್ಯಾ: ಮೃತರ ಸಂಖ್ಯೆ 753ಕ್ಕೆ ಏರಿಕೆ</div><div class="bigfact-description"> ಇಂಡೊನೇಷ್ಯಾದ ಸುಮಾತ್ರ ದ್ವೀಪದಲ್ಲಿ ಉಂಟಾದ ಪ್ರವಾಹ ಹಾಗೂ ಭೂಕುಸಿತದಿಂದ ಮೃತಪಟ್ಟವರ ಸಂಖ್ಯೆ 753ಕ್ಕೆ ಏರಿಕೆಯಾಗಿದೆ. 504 ಮಂದಿ ನಾಪತ್ತೆಯಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ.</div></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೊಲಂಬೊ/ಅಲವತುಗೋಡ (ಶ್ರೀಲಂಕಾ)</strong>: ದ್ವೀಪ ರಾಷ್ಟ್ರ ಶ್ರೀಲಂಕಾದಲ್ಲಿ ‘ದಿತ್ವಾ’ ಚಂಡಮಾರುತದಿಂದ ಉಂಟಾದ ಭೂಕುಸಿತ ಹಾಗೂ ಪ್ರವಾಹದಿಂದಾಗಿ ಈವರೆಗೆ 410 ಮಂದಿ ಮೃತಪಟ್ಟಿದ್ದು, 336 ಜನ ಕಾಣೆಯಾಗಿದ್ದಾರೆ. </p>.<p>4.07 ಲಕ್ಷ ಕುಟುಂಬಗಳ 14.66 ಲಕ್ಷ ಜನರು ಬಾಧಿತರಾಗಿದ್ದಾರೆ. 15 ಪ್ರಮುಖ ಸೇತುವೆಗಳು, 256 ರಸ್ತೆಗಳು ಹಾನಿಗೊಳಗಾಗಿವೆ ಎಂದು ವಿಪತ್ತು ನಿರ್ವಹಣಾ ಕೇಂದ್ರ ತಿಳಿಸಿದೆ.</p>.<p>ಸೇನಾ ಪಡೆ ಮತ್ತು ಪೊಲೀಸ್ ಇಲಾಖೆಯ ನೂರಾರು ಸಿಬ್ಬಂದಿ ರಕ್ಷಣಾ ಕಾರ್ಯಾಚರಣೆ ಕೈಗೊಂಡಿದ್ದಾರೆ. ಮಣ್ಣಿನಡಿ ಸಿಲುಕಿರುವ ಜನರಿಗಾಗಿ ಶೋಧ ಕಾರ್ಯ ನಡೆಸುತ್ತಿದ್ದಾರೆ. ರಸ್ತೆ, ವಿದ್ಯುತ್ ಸಂಪರ್ಕ ಮರುಸ್ಥಾಪಿಸುವ ಕಾರ್ಯ ಸಮರೋಪಾದಿಯಲ್ಲಿ ಸಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.</p>.<p>ಇತ್ತೀಚಿನ ದಿನಗಳಲ್ಲಿ ದಕ್ಷಿಣ ಮತ್ತು ಆಗ್ನೇಯ ಏಷ್ಯಾದಾದ್ಯಂತ ಮಾರಕ ಬಿರುಗಾಳಿ ಬೀಸಿದ್ದು, ಇಂಡೊನೇಷ್ಯಾ, ಮಲೇಷ್ಯಾ ಮತ್ತು ಥಾಯ್ಲೆಂಡ್ನ ಹೆಚ್ಚಿನ ಭಾಗಗಳನ್ನು ಧ್ವಂಸಗೊಳಿಸಿದೆ. ನೂರಾರು ಜೀವಗಳನ್ನು ಬಲಿ ಪಡೆದಿದೆ.</p>.<h2><strong>‘ತುರ್ತು ಸ್ಪಂದನೆ: ಪ್ರಮುಖ ಪಾತ್ರ ವಹಿಸಿದ ಭಾರತ’</strong></h2> <p>‘ದಿತ್ವಾ ಚಂಡಮಾರುತದಿಂದ ಉದ್ಭವಿಸಿರುವ ತುರ್ತು ಪರಿಸ್ಥಿತಿಯನ್ನು ಸಮರ್ಪಕವಾಗಿ ನಿಭಾಯಿಸುವ ಕಾರ್ಯದಲ್ಲಿ ಭಾರತವು ಪ್ರಮುಖ ಪಾತ್ರ ವಹಿಸಿದೆ’ ಎಂದು ಶ್ರೀಲಂಕಾದ ಅಧ್ಯಕ್ಷ ಅನುರಾ ಕುಮಾರ ದಿಸ್ಸನಾಯಕೆ ಅವರ ಕಚೇರಿ ಮಂಗಳವಾರ ತಿಳಿಸಿದೆ.</p><p>‘ಪ್ರಧಾನಿ ನರೇಂದ್ರ ಮೋದಿ ಅವರು ಅನುರಾ ಕುಮಾರ ದಿಸ್ಸನಾಯಕೆ ಅವರ ಜೊತೆ ಮಾತನಾಡಿ ಚಂಡಮಾರುತದಿಂದಾದ ಅವಘಡಗಳಲ್ಲಿ ಮೃತರಿಗೆ ಸಂತಾಪ ಸೂಚಿಸಿದ್ದಾರೆ. ಈ ಕಷ್ಟದ ಸಮಯದಲ್ಲಿ ಭಾರತವು ಶ್ರೀಲಂಕಾ ಮತ್ತು ಅದರ ಜನರೊಂದಿಗೆ ದೃಢವಾಗಿ ನಿಲ್ಲುತ್ತದೆ ಎಂದು ಪುನರುಚ್ಚರಿಸಿದ್ದಾರೆ’ ಎಂದು ಹೇಳಿದೆ. </p><p>ದ್ವೀಪ ರಾಷ್ಟ್ರವು ವ್ಯಾಪಕ ಪ್ರವಾಹ ಭೂಕುಸಿತ ಮತ್ತು ಮೂಲಸೌಕರ್ಯ ನಾಶದಿಂದ ಸಂಕಷ್ಟಕ್ಕೆ ಸಿಲುಕಿದೆ. ಹಲವು ಜಿಲ್ಲೆಗಳು ಪ್ರತ್ಯೇಕಗೊಂಡಿವೆ. ಭಾರತವು ‘ಸಾಗರ ಬಂಧು’ ಕಾರ್ಯಾಚರಣೆಯಡಿ ಎನ್ಡಿಆರ್ಎಫ್ನ 80 ಸಿಬ್ಬಂದಿಯನ್ನು ದ್ವೀಪ ರಾಷ್ಟ್ರಕ್ಕೆ ಕಳುಹಿಸಿದೆ. </p>.<div><div class="bigfact-title">ಇಂಡೊನೇಷ್ಯಾ: ಮೃತರ ಸಂಖ್ಯೆ 753ಕ್ಕೆ ಏರಿಕೆ</div><div class="bigfact-description"> ಇಂಡೊನೇಷ್ಯಾದ ಸುಮಾತ್ರ ದ್ವೀಪದಲ್ಲಿ ಉಂಟಾದ ಪ್ರವಾಹ ಹಾಗೂ ಭೂಕುಸಿತದಿಂದ ಮೃತಪಟ್ಟವರ ಸಂಖ್ಯೆ 753ಕ್ಕೆ ಏರಿಕೆಯಾಗಿದೆ. 504 ಮಂದಿ ನಾಪತ್ತೆಯಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ.</div></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>