<p><strong>ಕೊಲಂಬೊ:</strong>ಆರ್ಥಿಕ ಬಿಕ್ಕಟ್ಟಿಗೆ ಸಿಲುಕಿರುವ ಶ್ರೀಲಂಕಾದಲ್ಲಿ ಗುರುವಾರ ಕರ್ಫ್ಯೂ ತೆರವುಗೊಳಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.</p>.<p>ಆದರೆ ದೇಶ ಬಿಟ್ಟು ಪರಾರಿಯಾಗಿರುವ ಶ್ರೀಲಂಕಾದ ಅಧ್ಯಕ್ಷ ಗೊಟಬಯ ರಾಜಪಕ್ಸ ಇನ್ನೂ ರಾಜೀನಾಮೆ ನೀಡದಿರುವುದು ಜನರ ಆಕ್ರೋಶಕ್ಕೆ ಕಾರಣವಾಗಿದೆ.</p>.<p>ಇದನ್ನೂ ಓದಿ:<a href="https://www.prajavani.net/world-news/gotabaya-rajapaksa-still-in-maldives-awaits-private-jet-to-depart-for-singapore-954235.html" itemprop="url">ಮಾಲ್ಡೀವ್ಸ್ನಲ್ಲಿ ಗೊಟಬಯ: ಖಾಸಗಿ ವಿಮಾನಕ್ಕಾಗಿ ಕಾಯುತ್ತಿರುವ ಶ್ರೀಲಂಕಾ ಅಧ್ಯಕ್ಷ </a></p>.<p>ಜುಲೈ 13ರಂದು ರಾಜೀನಾಮೆ ನೀಡುವುದಾಗಿ ಗೊಟಬಯ ಘೋಷಿಸಿದ್ದರು. ಆದರೆ ಬುಧವಾರ ಮುಂಜಾನೆ ಲಂಕಾ ವಾಯುಪಡೆಯ ವಿಮಾನದಲ್ಲಿ ಮಾಲ್ಡೀವ್ಸ್ಗೆ ಪಲಾಯನ ಮಾಡಿದ್ದರು.</p>.<p>ಭದ್ರತಾ ದೃಷ್ಟಿಯಿಂದ ಗೊಟಬಯ ಮಾಲ್ಡೀವ್ಸ್ ಬಿಟ್ಟು ಸಿಂಗಪುರಕ್ಕೆ ತೆರಳಲಿದ್ದು, ಆ ನಂತರ ರಾಜೀನಾಮೆ ಸಲ್ಲಿಸಲಿದ್ದಾರೆ ಎಂದು ವರದಿಯಾಗಿದೆ.</p>.<p>ದೇಶ ತೊರೆಯುವ ಮೊದಲು ಅಧ್ಯಕ್ಷ ಗೊಟಬಯ ಅವರು, ರಾನಿಲ್ ವಿಕ್ರಮಸಿಂಘೆ ಅವರನ್ನು ಪ್ರಭಾರಿ ಅಧ್ಯಕ್ಷರನ್ನಾಗಿ ನೇಮಕ ಮಾಡಿದ್ದರು.</p>.<p>ರಾಜೀನಾಮೆಗೆ ತೀವ್ರ ಒತ್ತಡದ ನಡುವೆ ಸೂಕ್ತ ವ್ಯಕ್ತಿಯನ್ನು ಪ್ರಧಾನಿ ಸ್ಥಾನಕ್ಕೆ ನಿರ್ದೇಶನ ಮಾಡುವಂತೆ ಸ್ಪೀಕರ್ ಮಹಿಂದಾ ಯಪಾ ಅಬೆವರ್ಧನ ಅವರಿಗೆ ಪ್ರಧಾನಿ ರಾನಿಲ್ ಪ್ರಕಟಣೆ ಮೂಲಕ ತಿಳಿಸಿದ್ದಾರೆ.</p>.<p>ಈ ನಡುವೆ ಪ್ರತಿಭಟನಾಕಾರರು ಲಂಕಾ ಅಧ್ಯಕ್ಷ ಹಾಗೂ ಪ್ರಧಾನಿ ರಾಜೀನಾಮೆಗೆ ಪಟ್ಟು ಹಿಡಿದಿದ್ದಾರೆ. ದೇಶದೆಲ್ಲೆಡೆ ಪ್ರತಿಭಟನೆ ತೀವ್ರ ಸ್ವರೂಪ ಪಡೆದಿದೆ.</p>.<p>ರಾಜಪಕ್ಸ ದೇಶದಿಂದ ಪಲಾಯನ ಮಾಡಿದ ನಂತರ ಬುಧವಾರ ಮಧ್ಯಾಹ್ನದಿಂದ ಭದ್ರತಾ ಪಡೆಗಳೊಂದಿಗೆ ನಡೆದ ಸಂಘರ್ಷದಲ್ಲಿ ಕನಿಷ್ಠ 84 ಮಂದಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೊಲಂಬೊ:</strong>ಆರ್ಥಿಕ ಬಿಕ್ಕಟ್ಟಿಗೆ ಸಿಲುಕಿರುವ ಶ್ರೀಲಂಕಾದಲ್ಲಿ ಗುರುವಾರ ಕರ್ಫ್ಯೂ ತೆರವುಗೊಳಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.</p>.<p>ಆದರೆ ದೇಶ ಬಿಟ್ಟು ಪರಾರಿಯಾಗಿರುವ ಶ್ರೀಲಂಕಾದ ಅಧ್ಯಕ್ಷ ಗೊಟಬಯ ರಾಜಪಕ್ಸ ಇನ್ನೂ ರಾಜೀನಾಮೆ ನೀಡದಿರುವುದು ಜನರ ಆಕ್ರೋಶಕ್ಕೆ ಕಾರಣವಾಗಿದೆ.</p>.<p>ಇದನ್ನೂ ಓದಿ:<a href="https://www.prajavani.net/world-news/gotabaya-rajapaksa-still-in-maldives-awaits-private-jet-to-depart-for-singapore-954235.html" itemprop="url">ಮಾಲ್ಡೀವ್ಸ್ನಲ್ಲಿ ಗೊಟಬಯ: ಖಾಸಗಿ ವಿಮಾನಕ್ಕಾಗಿ ಕಾಯುತ್ತಿರುವ ಶ್ರೀಲಂಕಾ ಅಧ್ಯಕ್ಷ </a></p>.<p>ಜುಲೈ 13ರಂದು ರಾಜೀನಾಮೆ ನೀಡುವುದಾಗಿ ಗೊಟಬಯ ಘೋಷಿಸಿದ್ದರು. ಆದರೆ ಬುಧವಾರ ಮುಂಜಾನೆ ಲಂಕಾ ವಾಯುಪಡೆಯ ವಿಮಾನದಲ್ಲಿ ಮಾಲ್ಡೀವ್ಸ್ಗೆ ಪಲಾಯನ ಮಾಡಿದ್ದರು.</p>.<p>ಭದ್ರತಾ ದೃಷ್ಟಿಯಿಂದ ಗೊಟಬಯ ಮಾಲ್ಡೀವ್ಸ್ ಬಿಟ್ಟು ಸಿಂಗಪುರಕ್ಕೆ ತೆರಳಲಿದ್ದು, ಆ ನಂತರ ರಾಜೀನಾಮೆ ಸಲ್ಲಿಸಲಿದ್ದಾರೆ ಎಂದು ವರದಿಯಾಗಿದೆ.</p>.<p>ದೇಶ ತೊರೆಯುವ ಮೊದಲು ಅಧ್ಯಕ್ಷ ಗೊಟಬಯ ಅವರು, ರಾನಿಲ್ ವಿಕ್ರಮಸಿಂಘೆ ಅವರನ್ನು ಪ್ರಭಾರಿ ಅಧ್ಯಕ್ಷರನ್ನಾಗಿ ನೇಮಕ ಮಾಡಿದ್ದರು.</p>.<p>ರಾಜೀನಾಮೆಗೆ ತೀವ್ರ ಒತ್ತಡದ ನಡುವೆ ಸೂಕ್ತ ವ್ಯಕ್ತಿಯನ್ನು ಪ್ರಧಾನಿ ಸ್ಥಾನಕ್ಕೆ ನಿರ್ದೇಶನ ಮಾಡುವಂತೆ ಸ್ಪೀಕರ್ ಮಹಿಂದಾ ಯಪಾ ಅಬೆವರ್ಧನ ಅವರಿಗೆ ಪ್ರಧಾನಿ ರಾನಿಲ್ ಪ್ರಕಟಣೆ ಮೂಲಕ ತಿಳಿಸಿದ್ದಾರೆ.</p>.<p>ಈ ನಡುವೆ ಪ್ರತಿಭಟನಾಕಾರರು ಲಂಕಾ ಅಧ್ಯಕ್ಷ ಹಾಗೂ ಪ್ರಧಾನಿ ರಾಜೀನಾಮೆಗೆ ಪಟ್ಟು ಹಿಡಿದಿದ್ದಾರೆ. ದೇಶದೆಲ್ಲೆಡೆ ಪ್ರತಿಭಟನೆ ತೀವ್ರ ಸ್ವರೂಪ ಪಡೆದಿದೆ.</p>.<p>ರಾಜಪಕ್ಸ ದೇಶದಿಂದ ಪಲಾಯನ ಮಾಡಿದ ನಂತರ ಬುಧವಾರ ಮಧ್ಯಾಹ್ನದಿಂದ ಭದ್ರತಾ ಪಡೆಗಳೊಂದಿಗೆ ನಡೆದ ಸಂಘರ್ಷದಲ್ಲಿ ಕನಿಷ್ಠ 84 ಮಂದಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>