ಶುಕ್ರವಾರ, 3 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶ್ರೀಲಂಕಾ ಸ್ಫೋಟ: ಹತ್ತು ದಿನ ಹಿಂದೆಯೇ ಎಚ್ಚರಿಕೆ ನೀಡಿದ್ದ ಪೊಲೀಸ್ ಮುಖ್ಯಸ್ಥ

Last Updated 21 ಏಪ್ರಿಲ್ 2019, 11:23 IST
ಅಕ್ಷರ ಗಾತ್ರ

ಕೊಲಂಬೊ:ಶ್ರೀಲಂಕಾದಲ್ಲಿ ಸರಣಿ ಬಾಂಬ್ ದಾಳಿ ನಡೆಯುವ ಸಾಧ್ಯತೆ ಬಗ್ಗೆ ಅಲ್ಲಿನ ಪೊಲೀಸ್ ಮುಖ್ಯಸ್ಥರು ಹತ್ತು ದಿನಗಳ ಹಿಂದೆಯೇ ಎಚ್ಚರಿಕೆ ನೀಡಿದ್ದರು ಎನ್ನಲಾಗಿದೆ.

ದೇಶದ ಪ್ರಮುಖ ಚರ್ಚ್‌ಗಳ ಮೇಲೆ ದಾಳಿ ಆತ್ಮಾಹುತಿ ದಾಳಿಗೆ ಸಂಚು ಹೂಡಿರುವ ಸಾಧ್ಯತೆ ಇದೆ ಎಂದು ಗುಪ್ತಚರ ಮಾಹಿತಿ ಆಧರಿಸಿ ಪೊಲೀಸ್ ಮುಖ್ಯಸ್ಥ ಪುಜುತ್ ಜಯಸುಂದರ ಅವರು ಅಧಿಕಾರಿಗಳಿಗೆ ಎಚ್ಚರಿಕೆ ಸಂದೇಶ ಕಳುಹಿಸಿದ್ದರು. ಈ ಕುರಿತು ದಾಖಲೆಗಳು ಲಭ್ಯವಾಗಿವೆ ಎಂದು ಎಎಫ್‌ಪಿ ಸುದ್ದಿಸಂಸ್ಥೆ ವರದಿ ಮಾಡಿದೆ.

‘ಪ್ರಮುಖ ಚರ್ಚ್‌ಗಳು ಮತ್ತು ಭಾರತೀಯ ರಾಯಭಾರ ಕಚೇರಿಗಳನ್ನು ಗುರಿಯಾಗಿಸಿ ಆತ್ಮಾಹುತಿ ದಾಳಿ ನಡೆಸಲು ಎನ್‌ಟಿಜೆ (ನ್ಯಾಷನಲ್ ತೌಹೀತ್ ಜಮಾ ಅತ್) ಸಂಘಟನೆ ಸಂಚು ರೂಪಿಸುತ್ತಿದೆ ಎಂಬುದಾಗಿ ವಿದೇಶಿ ಗುಪ್ತಚರ ಸಂಸ್ಥೆಯೊಂದು ಸುಳಿವು ನೀಡಿದೆ’ ಎಂದು ಎಚ್ಚರಿಕೆ ಸಂದೇಶದಲ್ಲಿ ಉಲ್ಲೇಖಿಸಲಾಗಿತ್ತು.

ಎನ್‌ಟಿಜೆಯು ಮೂಲಭೂತವಾದಿ ಮುಸ್ಲಿಂ ಸಂಘಟನೆಯಾಗಿದೆ.ಕಳೆದ ವರ್ಷ ಶ್ರೀಲಂಕಾದ ಹಲವೆಡೆ ಬೌದ್ಧ ಪ್ರತಿಮೆಗಳನ್ನು ನಾಶಪಡಿಸಿದ ಆರೋಪವೂ ಈ ಸಂಘಟನೆ ಮೇಲಿದೆ.

ಈವರೆಗೂ ಯಾವುದೇ ಸಂಘಟನೆಯು ಶ್ರೀಲಂಕಾ ಸರಣಿ ಬಾಂಬ್ ದಾಳಿಯ ಹೊಣೆಹೊತ್ತಿಲ್ಲ.

ಇನ್ನಷ್ಟು...

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT