ಸೋಮವಾರ, 20 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶ್ರೀಲಂಕಾ: ಸರ್ವ ಪಕ್ಷಗಳ ಸರ್ಕಾರ ರಚನೆಗೆ ರಾನಿಲ್ ಕರೆ ನೀಡುವ ನಿರೀಕ್ಷೆ

Last Updated 17 ಏಪ್ರಿಲ್ 2023, 15:51 IST
ಅಕ್ಷರ ಗಾತ್ರ

ಕೊಲಂಬೊ: ತೀವ್ರ ಆರ್ಥಿಕ ಬಿಕ್ಕಟ್ಟು ಎದುರಿಸುತ್ತಿರುವ ಶ್ರೀಲಂಕಾದಲ್ಲಿ ಸರ್ವ ಪಕ್ಷಗಳ ಸರ್ಕಾರ ರಚಿಸುವ ಸಂಬಂಧ ಅಧ್ಯಕ್ಷ ರಾನಿಲ್‌ ವಿಕ್ರಮಸಿಂಘೆ ಅವರು ಮತ್ತೊಮ್ಮೆ ಕರೆ ನೀಡುವ ನಿರೀಕ್ಷೆ ಇದೆ ಎಂದು ವಿರೋಧ ಪಕ್ಷದ ಹಿರಿಯ ನಾಯಕ ಮಾನೊ ಗಣೇಸನ್‌ ಸೋಮವಾರ ತಿಳಿಸಿದರು.

ಅಂತರರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) ನೆರವು ಕಾರ್ಯಕ್ರಮದ ಕುರಿತು ಏ.25ರಂದು ಸಂಸತ್‌ನಲ್ಲಿ ಚರ್ಚೆ ನಡೆಸುವ ವೇಳೆ ಅವರು ಈ ಪ್ರಸ್ತಾವ ಇಡುವ ಸಾಧ್ಯತೆ ಇದೆ ಎಂದು ಹೇಳಿದರು.

‘ಆರ್ಥಿಕ ಬಿಕ್ಕಟ್ಟು ಪರಿಹಾರಕ್ಕಾಗಿ ಪಕ್ಷ ಭೇದ ಮರೆತು ಎಲ್ಲ ರಾಜಕೀಯ ಪಕ್ಷಗಳು ಒಂದಾಗಬೇಕು’ ಎಂದು ರಾನಿಲ್ ವಿಕ್ರಮಸಿಂಘೆ ಅವರು ಕಳೆದ ವರ್ಷ ಜುಲೈನಲ್ಲಿ ಕರೆ ನೀಡಿದ್ದರು.

ದೇಶವು ಬಿಕ್ಕಟ್ಟಿನಿಂದ ಹೊರಬರಲು ₹24,608 ಕೋಟಿ ನೆರವು ನೀಡುವುದಾಗಿ ಐಎಂಎಫ್‌ ಮಾರ್ಚ್‌ನಲ್ಲಿ ತಿಳಿಸಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT