ಇನ್ನು ಶ್ರೀಲಂಕಾದ ಪ್ರಧಾನಿ ಮಹಿಂದ ರಾಜಪಕ್ಸೆ, ‘ರಂಬುಕ್ಕಾನದಲ್ಲಿ ನಡೆದ ದುರಂತದಿಂದ ತೀವ್ರ ಯಾತನೆಗೆ ಒಳಗಾಗಿದ್ದೇನೆ. ಶ್ರೀಲಂಕಾದ ಪೊಲೀಸರು ಕಟ್ಟುನಿಟ್ಟಾದ, ನಿಷ್ಪಕ್ಷಪಾತ ತನಿಖೆಯನ್ನು ನಡೆಸುತ್ತಾರೆ ಎಂಬ ನಂಬಿಕೆ ನನಗಿದೆ. ಎಲ್ಲ ಪ್ರತಿಭಟನಕಾರರು ಸಮಾನ ಗೌರವ ಮತ್ತು ಪ್ರಾಮಾಣಿಕತೆಯಿಂದ ತಮ್ಮ ನಾಗರಿಕ ಹಕ್ಕುಗಳನ್ನು ಕಾಯ್ದುಕೊಳ್ಳಲು ವಿನಂತಿಸುತ್ತೇನೆ’ ಎಂದು ಹೇಳಿದರು.