ಈ ಮೂಲಕ ಪ್ರತಿಪಕ್ಷಗಳು ಒಗ್ಗೂಡಿ ಹಾಕಿದ್ದ ಅಭ್ಯರ್ಥಿಯನ್ನು ರಾಜಪಕ್ಸ ಕುಟುಂಬ ಪರಾಜಿತಗೊಳಿಸಿದೆ. ವಿದೇಶಿ ವಿನಿಮಯ ಕೊರತೆಯಿಂದ ದೇಶ ಎದುರಿಸುತ್ತಿರುವ ಬಿಕ್ಕಟ್ಟನ್ನು ಸರಿಯಾಗಿ ನಿಭಾಯಿಸದ ಕಾರಣಕ್ಕೆ ದೇಶದಾದ್ಯಂತ ಪ್ರತಿಭಟನೆ ನಡೆಯುತ್ತಿರುವ ನಡುವೆಯೇ ಈ ಬೆಳವಣಿಗೆ ನಡೆದಿದ್ದು, ರಾಜಪಕ್ಸ ಕುಟುಂಬಕ್ಕೆ ಸಿಕ್ಕ ದೊಡ್ಡ ಜಯ ಎಂದೇ ಹೇಳಲಾಗುತ್ತಿದೆ.