ಶುಕ್ರವಾರ, 3 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶ್ರೀಲಂಕಾ: ಹಂಗಾಮಿ ಪ್ರಧಾನಿಯಾಗಿ ರಾಜಪಕ್ಸೆ ಜವಾಬ್ದಾರಿ ನಿರ್ವಹಣೆ

ನ್ಯಾಯಾಲಯದಿಂದ ತಡೆ, ಸಿರಿಸೇನಾಗೆ ಹಿನ್ನಡೆ
Last Updated 3 ಡಿಸೆಂಬರ್ 2018, 16:56 IST
ಅಕ್ಷರ ಗಾತ್ರ

ಕೊಲಂಬೊ: ಮಹಿಂದಾ ರಾಜಪಕ್ಸೆ ಅವರು ಶ್ರೀಲಂಕಾದ ಹಂಗಾಮಿ ಪ್ರಧಾನಿಯಾಗಿ ಜವಾಬ್ದಾರಿ ನಿರ್ವಹಣೆಗೆ ಶ್ರೀಲಂಕಾ ನ್ಯಾಯಾಲಯವು ತಡೆಯಾಜ್ಞೆ ನೀಡಿದೆ. ಈ ಬೆಳವಣಿಗೆಯಿಂದ ಶ್ರೀಲಂಕಾ ಅಧ್ಯಕ್ಷ ಮೈತ್ರಿಪಾಲ ಸಿರಿಸೇನಾ ಅವರಿಗೆ ತೀವ್ರ ಹಿನ್ನಡೆಯುಂಟಾಗಿದೆ.

‘ರಾಜಪಕ್ಸೆ ಮತ್ತು ಅವರ ಸಚಿವರ ಸಂಪುಟ ಅಧಿಕಾರ ಚಲಾಯಿಸುವಂತಿಲ್ಲ ಎಂದುಮೇಲ್ಮನವಿ ನ್ಯಾಯಾಲಯವು ಮಧ್ಯಂತರ ಆದೇಶ ಹೊರಡಿಸಿದೆ’ ಎಂದು ಕೊಲಂಬೊ ಗಜೆಟ್‌ ವರದಿ ಮಾಡಿದೆ.

ಹಿಂದಿನ ಪ್ರಧಾನಿ ರನಿಲ್‌ ವಿಕ್ರಮಸಿಂಘೆ ಅವರನ್ನು ಯಾವ ಆಧಾರದಲ್ಲಿ ವಜಾಗೊಳಿಲಾಗಿದೆ ಎಂದು ಪ್ರಶ್ನಿಸಿ, 122 ಸಂಸದರು ಸಲ್ಲಿಸಿದ್ದ ಅರ್ಜಿ ವಿಚಾರಣೆ ವೇಳೆ ನ್ಯಾಯಾಲಯ ಈ ಆದೇಶ ಪ್ರಕಟಿಸಿದೆ.

ಅಕ್ಟೋಬರ್‌ 22ರಂದು ಪ್ಧಾನಿ ರನಿಲ್‌ ವಿಕ್ರಮಸಿಂಘೆ ಅವರನ್ನು ವಜಾಗೊಳಿಸಿ ಮಹಿಂದಾ ರಾಜಪಕ್ಸೆ ಅವರ ಸ್ಥಾನಕ್ಕೆ ನೇಮಿಸಿ ಅಧ್ಯಕ್ಷ ಮೈತ್ರಿಪಾಲ ಸಿರಿಸೇನಾ ಆದೇಶ ಹೊರಡಿಸಿದ್ದರು. ಈ ಬೆಳವಣಿಗೆ ಬಳಿಕ ಶ್ರೀಲಂಕಾ ರಾಜಕೀಯದಲ್ಲಿ ಬಿಕ್ಕಟ್ಟು ತಲೆದೋರಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT