ಅಧ್ಯಕ್ಷ ರಾನಿಲ್ ವಿಕ್ರಮಸಿಂಘೆ ಅವರ ಯುನೈಟೆಡ್ ನ್ಯಾಷನಲ್ ಪಕ್ಷದ ಪ್ರಧಾನ ಕಾರ್ಯದರ್ಶಿಯೊಬ್ಬರು, ಅಧ್ಯಕ್ಷೀಯ ಚುನಾವಣೆ ಹಾಗೂ ಸಾರ್ವತ್ರಿಕ ಚುನಾವಣೆಯನ್ನು ಎರಡು ವರ್ಷಗಳ ಅವಧಿಗೆ ಮುಂದೂಡಬೇಕೆಂಬ ಪ್ರಸ್ತಾವ ಮುಂದಿಟ್ಟಿದ್ದರು. ಈ ವಿಚಾರವಾಗಿ ಪ್ರತಿಕ್ರಿಯಿಸಿರುವ ಪ್ರಧಾನಿ ಗುಣವರ್ಧನ, ‘ಸಂವಿಧಾನದ ಪ್ರಕಾರ, ಗಡುವಿನ ಒಳಗೆ ಚುನಾವಣೆಯನ್ನು ನಡೆಸುವ ಅಧಿಕಾರ ಚುನಾವಣಾ ಆಯೋಗಕ್ಕೆ ಇದೆ. ನಿಬಂಧನೆಗಳ ಅನ್ವಯ ಚುನಾವಣೆಯನ್ನು ಮುಂದೂಡುವುದಕ್ಕಾಗಲೀ, ಬೇಗ ನಡೆಸುವುದಕ್ಕಾಗಲೀ ಅವಕಾಶವಿಲ್ಲ. ಅಧ್ಯಕ್ಷೀಯ ಚುನಾವಣೆಯ ಬಳಿಕ ಯಥಾಪ್ರಕಾರ ಸಾರ್ವತ್ರಿಕ ಚುನಾವಣೆ ಹಾಗೂ ಸ್ಥಳೀಯ ಸಂಸ್ಥೆಗಳ ಚುನಾವಣೆಗಳು ನಡೆಯಲಿವೆ’ ಎಂದಿದ್ದಾರೆ.