<p><strong>ಕೊಲಂಬೊ: </strong>ಶ್ರೀಲಂಕಾದ ಚುನಾವಣಾ ಆಯೋಗವು ಭಾನುವಾರ ಅಧ್ಯಕ್ಷ ರಾನಿಲ್ ವಿಕ್ರಮಸಿಂಘೆಗೆ ಅವರಿಗೆ ಪತ್ರ ಬರೆದಿದ್ದು, ಈಗಾಗಲೇ ವಿಳಂಬವಾಗಿರುವ ಸ್ಥಳೀಯ ಕೌನ್ಸಿಲ್ ಚುನಾವಣೆಗಳನ್ನು ನಡೆಸಲು ಅಗತ್ಯ ಹಣ ಬಿಡುಗಡೆ ಮಾಡುವಂತೆ ವಿನಂತಿಸಿದೆ.</p>.<p>ಪತ್ರ ಬರೆದ ವಿಚಾರವನ್ನು ಚುನಾವಣಾ ಆಯೋಗದ ಅಧ್ಯಕ್ಷ ನಿಮಲ್ ಜಿ ಪುಟ್ಟಿಹೇವಾ ಬಹಿರಂಗಪಡಿಸಿದ್ದಾರೆ.</p>.<p>ಈ ಹಿಂದೆ ಮಾರ್ಚ್ 9 ರಂದು ನಿಗದಿಯಾಗಿದ್ದ ಸ್ಥಳೀಯ ಸಂಸ್ಥೆಗಳ ಚುನಾವಣೆಯನ್ನು ದೇಶದ ಆರ್ಥಿಕ ಬಿಕ್ಕಟ್ಟಿನ ಹಿನ್ನೆಲೆಯಲ್ಲಿ ಹಲವು ಕಾರಣಗಳನ್ನು ಮುಂದೊಡ್ಡಿ ಏಪ್ರಿಲ್ 25 ಕ್ಕೆ ಮುಂದೂಡಲಾಗಿದೆ.</p>.<p>ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಹಣಕಾಸು ಸಚಿವಾಲಯದಿಂದ ಹಣ ಬಿಡುಗಡೆ ಮಾಡಿಲ್ಲ ಎಂದು ಖಜಾನೆ ಅಧಿಕಾರಿಗಳು ಕಳೆದ ತಿಂಗಳು ಚುನಾವಣಾ ಆಯೋಗಕ್ಕೆ ತಿಳಿಸಿದ್ದರು. ಈ ಹಿನ್ನೆಲೆಯಲ್ಲಿ ಪತ್ರ ಬರೆದು ಅನುದಾನ ಕೋರಲಾಗಿದೆ.</p>.<p>ಈ ತಿಂಗಳ ಆರಂಭದಲ್ಲಿ, ಖಜಾನೆ ಕಾರ್ಯದರ್ಶಿ ಮತ್ತು ಪೋಲೀಸ್ ಮುಖ್ಯಸ್ಥರಿಗೆ ಲಿಖಿತ ಮನವಿ ಮಾಡಿದ್ದ ಸರ್ಕಾರದ ಮುದ್ರಕರಾದ ಗಂಗಣಿ ಲಿಯಾನ, ಈಗಾಗಲೇ ವಿಳಂಬವಾಗಿರುವ ಸ್ಥಳೀಯ ಸಂಸ್ಥೆ ಚುನಾವಣೆಗಳನ್ನು ನಡೆಸುವಂತೆ ಮಾಡಿದ್ದರು.</p>.<p>ಅಂಚೆ ಮತದಾನಕ್ಕೆ ಮತಪತ್ರಗಳನ್ನು ಮುದ್ರಿಸಲು ಸಾಧ್ಯವಾಗದಿರುವುದರಿಂದ ಚುನಾವಣಾ ಆಯೋಗವು ಚುನಾವಣೆಯನ್ನು ಮುಂದೂಡುವಂತೆ ಆಗಿದೆ ಎಂದು ಲಿಯಾನ ಅವರ ಕಚೇರಿ ತಿಳಿಸಿತ್ತು.</p>.<p>ಚುನಾವಣೆ ನಡೆಸಲು ಅಡ್ಡಿಯಾಗಬಾರದು ಎಂದು ಶ್ರೀಲಂಕಾದ ಸುಪ್ರೀಂ ಕೋರ್ಟ್ ಸರ್ಕಾರಕ್ಕೆ ನಿರ್ದೇಶನ ನೀಡಿದೆ.</p>.<p>ನ್ಯಾಯಾಲಯದ ಆದೇಶದ ಮೇರೆಗೆ ಚುನಾವಣಾ ದಿನಾಂಕವನ್ನು ಏಪ್ರಿಲ್ 25ಕ್ಕೆ ನಿಗದಿಪಡಿಸಲಾಗಿದ್ದು, ಮಾರ್ಚ್ 18 ರಿಂದ 21 ರ ನಡುವೆ ಅಂಚೆ ಮತದಾನ ನಡೆಯಲಿದೆ.</p>.<p>ಪ್ರಸ್ತುತ ಪರಿಹಾರ ಪ್ಯಾಕೇಜ್ಗಾಗಿ ಐಎಂಎಫ್ನೊಂದಿಗೆ ಅಧ್ಯಕ್ಷ ವಿಕ್ರಮಸಿಂಘೆ ಮಾತುಕತೆ ನಡೆಸುತ್ತಿದ್ದಾರೆ. ದೇಶದ ಆರ್ಥಿಕ ವ್ಯವಸ್ಥೆ ಸದ್ಯ ಸರಿ ಇಲ್ಲದ ಹಿನ್ನೆಲೆಯಲ್ಲಿ ಚುನಾವಣೆ ಮೇಲೆ ವಿಕ್ರಮಸಿಂಘೆ ನಿರಾಸಕ್ತಿ ತೋರಿದ್ದಾರೆ.</p>.<p><strong>ಇವುಗಳನ್ನೂ ಓದಿ </strong></p>.<p><a href="https://www.prajavani.net/world-news/sri-lanka-uses-part-of-indian-financial-aid-to-buy-textbooks-for-4-million-students-1022877.html" itemprop="url">ಶ್ರೀಲಂಕಾ: ಪಠ್ಯಪುಸ್ತಕ ಮುದ್ರಣಕ್ಕೆ ಭಾರತದ ನೆರವು </a></p>.<p><a href="https://www.prajavani.net/world-news/sri-lanka-local-polls-date-to-be-announced-next-week-election-commission-1020296.html" itemprop="url">ಶ್ರೀಲಂಕಾ ಸ್ಥಳೀಯ ಸಂಸ್ಥೆಗಳಿಗೆ ಮುಂದಿನ ವಾರ ಚುನಾವಣಾ ದಿನಾಂಕ ಘೋಷಣೆ </a></p>.<p><a href="https://www.prajavani.net/world-news/sri-lanka-president-says-china-agrees-to-restructure-loans-1021471.html" itemprop="url">ಮರುಸಾಲ ಕೊಡಲು ಚೀನಾ ಒಪ್ಪಿದೆ: ಶ್ರೀಲಂಕಾ ಅಧ್ಯಕ್ಷ </a></p>.<p><a href="https://www.prajavani.net/world-news/sri-lanka-approves-adani-groups-two-wind-power-plants-in-north-1017858.html" itemprop="url">₹3,300 ಕೋಟಿಯ 2 ಪವನ ವಿದ್ಯುತ್ ಯೋಜನೆಗಳನ್ನು ‘ಅದಾನಿ’ಗೆ ನೀಡಿದ ಶ್ರೀಲಂಕಾ </a></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೊಲಂಬೊ: </strong>ಶ್ರೀಲಂಕಾದ ಚುನಾವಣಾ ಆಯೋಗವು ಭಾನುವಾರ ಅಧ್ಯಕ್ಷ ರಾನಿಲ್ ವಿಕ್ರಮಸಿಂಘೆಗೆ ಅವರಿಗೆ ಪತ್ರ ಬರೆದಿದ್ದು, ಈಗಾಗಲೇ ವಿಳಂಬವಾಗಿರುವ ಸ್ಥಳೀಯ ಕೌನ್ಸಿಲ್ ಚುನಾವಣೆಗಳನ್ನು ನಡೆಸಲು ಅಗತ್ಯ ಹಣ ಬಿಡುಗಡೆ ಮಾಡುವಂತೆ ವಿನಂತಿಸಿದೆ.</p>.<p>ಪತ್ರ ಬರೆದ ವಿಚಾರವನ್ನು ಚುನಾವಣಾ ಆಯೋಗದ ಅಧ್ಯಕ್ಷ ನಿಮಲ್ ಜಿ ಪುಟ್ಟಿಹೇವಾ ಬಹಿರಂಗಪಡಿಸಿದ್ದಾರೆ.</p>.<p>ಈ ಹಿಂದೆ ಮಾರ್ಚ್ 9 ರಂದು ನಿಗದಿಯಾಗಿದ್ದ ಸ್ಥಳೀಯ ಸಂಸ್ಥೆಗಳ ಚುನಾವಣೆಯನ್ನು ದೇಶದ ಆರ್ಥಿಕ ಬಿಕ್ಕಟ್ಟಿನ ಹಿನ್ನೆಲೆಯಲ್ಲಿ ಹಲವು ಕಾರಣಗಳನ್ನು ಮುಂದೊಡ್ಡಿ ಏಪ್ರಿಲ್ 25 ಕ್ಕೆ ಮುಂದೂಡಲಾಗಿದೆ.</p>.<p>ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಹಣಕಾಸು ಸಚಿವಾಲಯದಿಂದ ಹಣ ಬಿಡುಗಡೆ ಮಾಡಿಲ್ಲ ಎಂದು ಖಜಾನೆ ಅಧಿಕಾರಿಗಳು ಕಳೆದ ತಿಂಗಳು ಚುನಾವಣಾ ಆಯೋಗಕ್ಕೆ ತಿಳಿಸಿದ್ದರು. ಈ ಹಿನ್ನೆಲೆಯಲ್ಲಿ ಪತ್ರ ಬರೆದು ಅನುದಾನ ಕೋರಲಾಗಿದೆ.</p>.<p>ಈ ತಿಂಗಳ ಆರಂಭದಲ್ಲಿ, ಖಜಾನೆ ಕಾರ್ಯದರ್ಶಿ ಮತ್ತು ಪೋಲೀಸ್ ಮುಖ್ಯಸ್ಥರಿಗೆ ಲಿಖಿತ ಮನವಿ ಮಾಡಿದ್ದ ಸರ್ಕಾರದ ಮುದ್ರಕರಾದ ಗಂಗಣಿ ಲಿಯಾನ, ಈಗಾಗಲೇ ವಿಳಂಬವಾಗಿರುವ ಸ್ಥಳೀಯ ಸಂಸ್ಥೆ ಚುನಾವಣೆಗಳನ್ನು ನಡೆಸುವಂತೆ ಮಾಡಿದ್ದರು.</p>.<p>ಅಂಚೆ ಮತದಾನಕ್ಕೆ ಮತಪತ್ರಗಳನ್ನು ಮುದ್ರಿಸಲು ಸಾಧ್ಯವಾಗದಿರುವುದರಿಂದ ಚುನಾವಣಾ ಆಯೋಗವು ಚುನಾವಣೆಯನ್ನು ಮುಂದೂಡುವಂತೆ ಆಗಿದೆ ಎಂದು ಲಿಯಾನ ಅವರ ಕಚೇರಿ ತಿಳಿಸಿತ್ತು.</p>.<p>ಚುನಾವಣೆ ನಡೆಸಲು ಅಡ್ಡಿಯಾಗಬಾರದು ಎಂದು ಶ್ರೀಲಂಕಾದ ಸುಪ್ರೀಂ ಕೋರ್ಟ್ ಸರ್ಕಾರಕ್ಕೆ ನಿರ್ದೇಶನ ನೀಡಿದೆ.</p>.<p>ನ್ಯಾಯಾಲಯದ ಆದೇಶದ ಮೇರೆಗೆ ಚುನಾವಣಾ ದಿನಾಂಕವನ್ನು ಏಪ್ರಿಲ್ 25ಕ್ಕೆ ನಿಗದಿಪಡಿಸಲಾಗಿದ್ದು, ಮಾರ್ಚ್ 18 ರಿಂದ 21 ರ ನಡುವೆ ಅಂಚೆ ಮತದಾನ ನಡೆಯಲಿದೆ.</p>.<p>ಪ್ರಸ್ತುತ ಪರಿಹಾರ ಪ್ಯಾಕೇಜ್ಗಾಗಿ ಐಎಂಎಫ್ನೊಂದಿಗೆ ಅಧ್ಯಕ್ಷ ವಿಕ್ರಮಸಿಂಘೆ ಮಾತುಕತೆ ನಡೆಸುತ್ತಿದ್ದಾರೆ. ದೇಶದ ಆರ್ಥಿಕ ವ್ಯವಸ್ಥೆ ಸದ್ಯ ಸರಿ ಇಲ್ಲದ ಹಿನ್ನೆಲೆಯಲ್ಲಿ ಚುನಾವಣೆ ಮೇಲೆ ವಿಕ್ರಮಸಿಂಘೆ ನಿರಾಸಕ್ತಿ ತೋರಿದ್ದಾರೆ.</p>.<p><strong>ಇವುಗಳನ್ನೂ ಓದಿ </strong></p>.<p><a href="https://www.prajavani.net/world-news/sri-lanka-uses-part-of-indian-financial-aid-to-buy-textbooks-for-4-million-students-1022877.html" itemprop="url">ಶ್ರೀಲಂಕಾ: ಪಠ್ಯಪುಸ್ತಕ ಮುದ್ರಣಕ್ಕೆ ಭಾರತದ ನೆರವು </a></p>.<p><a href="https://www.prajavani.net/world-news/sri-lanka-local-polls-date-to-be-announced-next-week-election-commission-1020296.html" itemprop="url">ಶ್ರೀಲಂಕಾ ಸ್ಥಳೀಯ ಸಂಸ್ಥೆಗಳಿಗೆ ಮುಂದಿನ ವಾರ ಚುನಾವಣಾ ದಿನಾಂಕ ಘೋಷಣೆ </a></p>.<p><a href="https://www.prajavani.net/world-news/sri-lanka-president-says-china-agrees-to-restructure-loans-1021471.html" itemprop="url">ಮರುಸಾಲ ಕೊಡಲು ಚೀನಾ ಒಪ್ಪಿದೆ: ಶ್ರೀಲಂಕಾ ಅಧ್ಯಕ್ಷ </a></p>.<p><a href="https://www.prajavani.net/world-news/sri-lanka-approves-adani-groups-two-wind-power-plants-in-north-1017858.html" itemprop="url">₹3,300 ಕೋಟಿಯ 2 ಪವನ ವಿದ್ಯುತ್ ಯೋಜನೆಗಳನ್ನು ‘ಅದಾನಿ’ಗೆ ನೀಡಿದ ಶ್ರೀಲಂಕಾ </a></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>