<p><strong>ವಾಷಿಂಗ್ಟನ್</strong>: ಹಾರ್ಮುಜ್ ಜಲಸಂಧಿಯನ್ನು ಇರಾನ್ ಸಂಪೂರ್ಣವಾಗಿ ಸ್ಥಗಿತಗೊಳಿಸಿದರೆ ಇರಾನ್ಗೆ ವಿನಾಶದ ದಿನಗಳು ಎದುರಾಗಲಿವೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಎಚ್ಚರಿಕೆ ನೀಡಿದ್ದಾರೆ.</p><p>ಇರಾನ್ ಒಂದು ವೇಳೆ ಹಾರ್ಮುಜ್ ಜಲಸಂಧಿ ಮೂಲಕ ಸರಬರಾಜು ಆಗುವ ಕಚ್ಚಾ ತೈಲವನ್ನು ಸಂಪೂರ್ಣವಾಗಿ ನಿಲ್ಲಿಸಿದರೆ, ಇಲ್ಲಿಯವರೆಗೆ ಅನುಭವಿಸಿದ್ದಕ್ಕಿಂತ ಇಪ್ಪತ್ತು ಪಟ್ಟು ದಾಳಿಯನ್ನು ಎದುರಿಸಬೇಕಾಗುತ್ತದೆ ಎಂದು ಟ್ರಂಪ್ ಸಾಮಾಜಿಕ ಮಾಧ್ಯಮ ‘ಟ್ರೂತ್’ ಪೋಸ್ಟ್ನಲ್ಲಿ ಬರೆದುಕೊಂಡಿದ್ದಾರೆ.</p>.ಬಾರಾಮತಿ ವಿಮಾನ ದುರಂತ: ಪೈಲಟ್ ಮೇಲೆ ಆರೋಪ ಹೊರಿಸಲು VK ಸಿಂಗ್ ಯತ್ನ; ರೋಹಿತ್.ಮತಾಂತರ ನಿಷೇಧ ಕಾಯ್ದೆ ವಾಪಸ್ ಪಡೆಯದ ಸರ್ಕಾರ: ಕರ್ನಾಟಕ ಕ್ರೈಸ್ತ ಸಂಘಟನೆ . <p>ಹಾರ್ಮುಜ್ ಜಲಸಂಧಿ ಮಾರ್ಗವನ್ನು ಸ್ಥಗಿತಗೊಳಿಸಲು ಮುಂದಾದರೆ ಇರಾನ್ಗೆ ವಿನಾಶದ ದಿನಗಳು ಎದುರಾಗಲಿವೆ. ನಮ್ಮ ದಾಳಿಗಳು ಎಷ್ಟು ಪ್ರಬಲವಾಗಿರುತ್ತದೆ ಎಂದರೆ ಇರಾನ್ ಮತ್ತೆ ಒಂದು ರಾಷ್ಟ್ರವಾಗಿ ತಲೆ ಎತ್ತಲು ಅಸಾಧ್ಯವಾಗುತ್ತದೆ ಎಂದು ಹೇಳಿದ್ದಾರೆ.</p><p>ತೈಲ ಪೂರೈಕೆಗಾಗಿ ಈ ಮಾರ್ಗವನ್ನು ಹೆಚ್ಚು ಅವಲಂಬಿಸಿರುವ ದೇಶಗಳಿಗೆ ಹಾರ್ಮುಜ್ ಜಲಸಂಧಿಯ ಮಾರ್ಗ ತೆರೆದಿಡುವುದರಿಂದ ಪ್ರಯೋಜನವಾಗುತ್ತದೆ ಎಂದು ಟ್ರಂಪ್ ತಿಳಿಸಿದ್ದಾರೆ.</p><p>ಹಾರ್ಮುಜ್ ಜಲಸಂಧಿ ಮೂಲಕ ಸೌದಿ ಅರೇಬಿಯಾ, ಇರಾಕ್, ಯುಎಇಯಿಂದ ಭಾರತಕ್ಕೆ ಕಚ್ಚಾ ತೈಲ ಮತ್ತು ಎಲ್ಎನ್ಜಿ ಪೂರೈಕೆಯಾಗುತ್ತಿದೆ. ಈ ಮಾರ್ಗದಲ್ಲಿ ಹಡಗುಗಳ ಸಂಚಾರ ಸ್ಥಗಿತಗೊಂಡರೆ ಕಚ್ಚಾ ತೈಲದ ಬೆಲೆ ಏರಿಕೆಯಾಗಲಿದೆ. ಇದು ಹಣದುಬ್ಬರದ ಹೆಚ್ಚಳಕ್ಕೂ ಕಾರಣವಾಗಲಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ವಾಷಿಂಗ್ಟನ್</strong>: ಹಾರ್ಮುಜ್ ಜಲಸಂಧಿಯನ್ನು ಇರಾನ್ ಸಂಪೂರ್ಣವಾಗಿ ಸ್ಥಗಿತಗೊಳಿಸಿದರೆ ಇರಾನ್ಗೆ ವಿನಾಶದ ದಿನಗಳು ಎದುರಾಗಲಿವೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಎಚ್ಚರಿಕೆ ನೀಡಿದ್ದಾರೆ.</p><p>ಇರಾನ್ ಒಂದು ವೇಳೆ ಹಾರ್ಮುಜ್ ಜಲಸಂಧಿ ಮೂಲಕ ಸರಬರಾಜು ಆಗುವ ಕಚ್ಚಾ ತೈಲವನ್ನು ಸಂಪೂರ್ಣವಾಗಿ ನಿಲ್ಲಿಸಿದರೆ, ಇಲ್ಲಿಯವರೆಗೆ ಅನುಭವಿಸಿದ್ದಕ್ಕಿಂತ ಇಪ್ಪತ್ತು ಪಟ್ಟು ದಾಳಿಯನ್ನು ಎದುರಿಸಬೇಕಾಗುತ್ತದೆ ಎಂದು ಟ್ರಂಪ್ ಸಾಮಾಜಿಕ ಮಾಧ್ಯಮ ‘ಟ್ರೂತ್’ ಪೋಸ್ಟ್ನಲ್ಲಿ ಬರೆದುಕೊಂಡಿದ್ದಾರೆ.</p>.ಬಾರಾಮತಿ ವಿಮಾನ ದುರಂತ: ಪೈಲಟ್ ಮೇಲೆ ಆರೋಪ ಹೊರಿಸಲು VK ಸಿಂಗ್ ಯತ್ನ; ರೋಹಿತ್.ಮತಾಂತರ ನಿಷೇಧ ಕಾಯ್ದೆ ವಾಪಸ್ ಪಡೆಯದ ಸರ್ಕಾರ: ಕರ್ನಾಟಕ ಕ್ರೈಸ್ತ ಸಂಘಟನೆ . <p>ಹಾರ್ಮುಜ್ ಜಲಸಂಧಿ ಮಾರ್ಗವನ್ನು ಸ್ಥಗಿತಗೊಳಿಸಲು ಮುಂದಾದರೆ ಇರಾನ್ಗೆ ವಿನಾಶದ ದಿನಗಳು ಎದುರಾಗಲಿವೆ. ನಮ್ಮ ದಾಳಿಗಳು ಎಷ್ಟು ಪ್ರಬಲವಾಗಿರುತ್ತದೆ ಎಂದರೆ ಇರಾನ್ ಮತ್ತೆ ಒಂದು ರಾಷ್ಟ್ರವಾಗಿ ತಲೆ ಎತ್ತಲು ಅಸಾಧ್ಯವಾಗುತ್ತದೆ ಎಂದು ಹೇಳಿದ್ದಾರೆ.</p><p>ತೈಲ ಪೂರೈಕೆಗಾಗಿ ಈ ಮಾರ್ಗವನ್ನು ಹೆಚ್ಚು ಅವಲಂಬಿಸಿರುವ ದೇಶಗಳಿಗೆ ಹಾರ್ಮುಜ್ ಜಲಸಂಧಿಯ ಮಾರ್ಗ ತೆರೆದಿಡುವುದರಿಂದ ಪ್ರಯೋಜನವಾಗುತ್ತದೆ ಎಂದು ಟ್ರಂಪ್ ತಿಳಿಸಿದ್ದಾರೆ.</p><p>ಹಾರ್ಮುಜ್ ಜಲಸಂಧಿ ಮೂಲಕ ಸೌದಿ ಅರೇಬಿಯಾ, ಇರಾಕ್, ಯುಎಇಯಿಂದ ಭಾರತಕ್ಕೆ ಕಚ್ಚಾ ತೈಲ ಮತ್ತು ಎಲ್ಎನ್ಜಿ ಪೂರೈಕೆಯಾಗುತ್ತಿದೆ. ಈ ಮಾರ್ಗದಲ್ಲಿ ಹಡಗುಗಳ ಸಂಚಾರ ಸ್ಥಗಿತಗೊಂಡರೆ ಕಚ್ಚಾ ತೈಲದ ಬೆಲೆ ಏರಿಕೆಯಾಗಲಿದೆ. ಇದು ಹಣದುಬ್ಬರದ ಹೆಚ್ಚಳಕ್ಕೂ ಕಾರಣವಾಗಲಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>