<p><strong>ಒಟ್ಟಾವ(ಕೆನಡಾ):</strong> ಕೆನಡಾದ ಮನಿಟೊಬಾ ಪ್ರದೇಶದಲ್ಲಿ ಸಂಭವಿಸಿದ ವಿಮಾನ ಅಪಘಾತದಲ್ಲಿ ಭಾರತ ಮೂಲದ ತರಬೇತಿ ನಿರತ ಪೈಲಟ್ ಸೇರಿ ಇಬ್ಬರು ಮೃತಪಟ್ಟಿದ್ದಾರೆ ಎಂದು ಟೊರೆಂಟೊದ ಭಾರತದ ರಾಯಭಾರ ಕಚೇರಿ ತಿಳಿಸಿದೆ.</p><p>ಮೃತ ಪೈಲಟ್ ಅನ್ನು ಶ್ರೀಹರಿ ಸುಕೇಶ್ ಎಂದು ಗುರುತಿಸಲಾಗಿದ್ದು, ಶ್ರೀಹರಿ ಹಾರಿಸುತ್ತಿದ್ದ ಸಿಂಗಲ್ ಎಂಜಿನ್ ವಿಮಾನಕ್ಕೆ ಕೆನಡಾದ ಯುವಕನೊಬ್ಬ ಚಲಾಯಿಸುತ್ತಿದ್ದ ಅದೇ ಮಾದರಿಯ ಮತ್ತೊಂದು ವಿಮಾನವು ಆಕಾಶದಲ್ಲಿ ಡಿಕ್ಕಿ ಹೊಡೆದು ದುರಂತ ಸಂಭವಿಸಿದೆ. </p><p>ದುಃಖಿತ ಕುಟುಂಬ, ಪೈಲಟ್ ತರಬೇತಿ ಶಾಲೆ ಮತ್ತು ಸ್ಥಳೀಯ ಪೊಲೀಸರೊಂದಿಗೆ ಸಂಪರ್ಕದಲ್ಲಿದ್ದು, ಅಗತ್ಯವಿರುವ ಎಲ್ಲಾ ಸಹಾಯವನ್ನು ಒದಗಿಸಲಾಗಿದೆ ಎಂದು ಬುಧವಾರ ಭಾರತದ ಕಾನ್ಸುಲೇಟ್ ಜನರಲ್ ಹೇಳಿದ್ದಾರೆ.</p><p>ಇಬ್ಬರೂ ತರಬೇತಿ ನಿರತ ಪೈಲಟ್ಗಳು ಟೇಕ್ಆಫ್ ಮತ್ತು ಲ್ಯಾಂಡಿಂಗ್ ಅಭ್ಯಾಸ ಮಾಡುತ್ತಿದ್ದರು. ಲ್ಯಾಂಡಿಂಗ್ ಸ್ಟ್ರಿಪ್ ಸಮೀಪಿಸುತ್ತಿದ್ದಾಗ ವಿಮಾನಗಳು ಡಿಕ್ಕಿ ಆಗಿವೆ ಎಂದು ಸಿಬಿಸಿ ವರದಿ ತಿಳಿಸಿದೆ. </p><p>ಈ ಭೀಕರ ದುರಂತದ ಸಂಬಂಧ ಮಾಹಿತಿ ಕಲೆ ಹಾಕುತ್ತಿದ್ದು, ತನಿಖೆ ನಡೆಸಲಾಗುವುದು ಎಂದು ಕೆನಡಾ ಅಧಿಕಾರಿಗಳು ತಿಳಿಸಿದ್ದಾರೆ.</p> .<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಒಟ್ಟಾವ(ಕೆನಡಾ):</strong> ಕೆನಡಾದ ಮನಿಟೊಬಾ ಪ್ರದೇಶದಲ್ಲಿ ಸಂಭವಿಸಿದ ವಿಮಾನ ಅಪಘಾತದಲ್ಲಿ ಭಾರತ ಮೂಲದ ತರಬೇತಿ ನಿರತ ಪೈಲಟ್ ಸೇರಿ ಇಬ್ಬರು ಮೃತಪಟ್ಟಿದ್ದಾರೆ ಎಂದು ಟೊರೆಂಟೊದ ಭಾರತದ ರಾಯಭಾರ ಕಚೇರಿ ತಿಳಿಸಿದೆ.</p><p>ಮೃತ ಪೈಲಟ್ ಅನ್ನು ಶ್ರೀಹರಿ ಸುಕೇಶ್ ಎಂದು ಗುರುತಿಸಲಾಗಿದ್ದು, ಶ್ರೀಹರಿ ಹಾರಿಸುತ್ತಿದ್ದ ಸಿಂಗಲ್ ಎಂಜಿನ್ ವಿಮಾನಕ್ಕೆ ಕೆನಡಾದ ಯುವಕನೊಬ್ಬ ಚಲಾಯಿಸುತ್ತಿದ್ದ ಅದೇ ಮಾದರಿಯ ಮತ್ತೊಂದು ವಿಮಾನವು ಆಕಾಶದಲ್ಲಿ ಡಿಕ್ಕಿ ಹೊಡೆದು ದುರಂತ ಸಂಭವಿಸಿದೆ. </p><p>ದುಃಖಿತ ಕುಟುಂಬ, ಪೈಲಟ್ ತರಬೇತಿ ಶಾಲೆ ಮತ್ತು ಸ್ಥಳೀಯ ಪೊಲೀಸರೊಂದಿಗೆ ಸಂಪರ್ಕದಲ್ಲಿದ್ದು, ಅಗತ್ಯವಿರುವ ಎಲ್ಲಾ ಸಹಾಯವನ್ನು ಒದಗಿಸಲಾಗಿದೆ ಎಂದು ಬುಧವಾರ ಭಾರತದ ಕಾನ್ಸುಲೇಟ್ ಜನರಲ್ ಹೇಳಿದ್ದಾರೆ.</p><p>ಇಬ್ಬರೂ ತರಬೇತಿ ನಿರತ ಪೈಲಟ್ಗಳು ಟೇಕ್ಆಫ್ ಮತ್ತು ಲ್ಯಾಂಡಿಂಗ್ ಅಭ್ಯಾಸ ಮಾಡುತ್ತಿದ್ದರು. ಲ್ಯಾಂಡಿಂಗ್ ಸ್ಟ್ರಿಪ್ ಸಮೀಪಿಸುತ್ತಿದ್ದಾಗ ವಿಮಾನಗಳು ಡಿಕ್ಕಿ ಆಗಿವೆ ಎಂದು ಸಿಬಿಸಿ ವರದಿ ತಿಳಿಸಿದೆ. </p><p>ಈ ಭೀಕರ ದುರಂತದ ಸಂಬಂಧ ಮಾಹಿತಿ ಕಲೆ ಹಾಕುತ್ತಿದ್ದು, ತನಿಖೆ ನಡೆಸಲಾಗುವುದು ಎಂದು ಕೆನಡಾ ಅಧಿಕಾರಿಗಳು ತಿಳಿಸಿದ್ದಾರೆ.</p> .<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>