<p><strong>ವಾಷಿಂಗ್ಟನ್</strong> : ಅಮೆರಿಕದಲ್ಲಿ ಹಿಂದೂಗಳ ವಿರುದ್ಧ ದಾಳಿಗಳು ಗಣನೀಯವಾಗಿ ಹೆಚ್ಚಾಗುತ್ತಿದ್ದು, ‘ಹಿಂದೂಗಳ ವಿರೋಧ ಸಂಘಟಿತ ದಾಳಿಯ ಆರಂಭ’ದಂತಿದೆ ಎಂದು ಭಾರತೀಯ– ಅಮೆರಿಕನ್ ಕಾಂಗ್ರೆಸ್ಸಿಗ ಶ್ರೀ ಥಾನೇದಾರ್ ಹೇಳಿದ್ದಾರೆ.</p>.<p>ದ್ವೇಷದ ಅಪರಾಧಗಳ ವಿರುದ್ಧ ಭಾರತೀಯ ಸಮುದಾಯದ ಸದಸ್ಯರು ಒಂದಾಗಿರುವಂತೆ ಅವರು ಸೋಮವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ.</p>.<p>‘ಅಮೆರಿಕದಲ್ಲಿ ಹಿಂದೂ ಧರ್ಮ ಮತ್ತು ಧರ್ಮೀಯರ ಮೇಲೆ ದಾಳಿಗಳು ಹೆಚ್ಚಾಗಿರುವುದನ್ನು ನಾನು ಗಮನಿಸಿದ್ದೇನೆ. ಹಿಂದೂಗಳ ಬಗ್ಗೆ ತಪ್ಪು ಮಾಹಿತಿಗಳನ್ನು ಆನ್ಲೈನ್ ಮೂಲಕ ಬಿತ್ತರಿಸಲಾಗುತ್ತಿದೆ’ ಎಂದು ಅವರು ಕಳವಳ ವ್ಯಕ್ತಪಡಿಸಿದರು. </p>.<p>ಇತ್ತೀಚೆಗೆ ಹಿಂದೂ ದೇವಾಲಯಗಳು ಮತ್ತು ಪೂಜಾ ಸ್ಥಳಗಳ ಮೇಲಿನ ದಾಳಿಯನ್ನು ಖಂಡಿಸಿ ಭಾರತೀಯ–ಅಮೆರಿಕನ್ ಕಾಂಗ್ರೆಸ್ ಸದಸ್ಯರಾದ ಶ್ರೀ ಥಾನೇದಾರ್, ರೋ ಖನ್ನಾ, ರಾಜಾ ಕೃಷ್ಣಮೂರ್ತಿ, ಅಮಿ ಬೇರಾ, ಪ್ರಮೀಳಾ ಜೈಪಾಲ್ ಅವರು ತನಿಖೆಗೆ ಆಗ್ರಹಿಸಿ ನ್ಯಾಯಾಂಗ ಇಲಾಖೆಗೆ ಪತ್ರ ಬರೆದಿದ್ದರು.</p>.<p>‘ಈ ದಾಳಿಗಳಿಗೆ ಸಂಬಂಧಿಸಿದಂತೆ ಯಾರ ವಿರುದ್ಧವೂ ಕ್ರಮ ತೆಗೆದುಕೊಂಡಿಲ್ಲ ಮತ್ತು ಯಾರನ್ನೂ ಬಂಧಿಸಿಲ್ಲ’ ಎಂದು ಅವರು ಬೇಸರ ವ್ಯಕ್ತಪಡಿಸಿದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ವಾಷಿಂಗ್ಟನ್</strong> : ಅಮೆರಿಕದಲ್ಲಿ ಹಿಂದೂಗಳ ವಿರುದ್ಧ ದಾಳಿಗಳು ಗಣನೀಯವಾಗಿ ಹೆಚ್ಚಾಗುತ್ತಿದ್ದು, ‘ಹಿಂದೂಗಳ ವಿರೋಧ ಸಂಘಟಿತ ದಾಳಿಯ ಆರಂಭ’ದಂತಿದೆ ಎಂದು ಭಾರತೀಯ– ಅಮೆರಿಕನ್ ಕಾಂಗ್ರೆಸ್ಸಿಗ ಶ್ರೀ ಥಾನೇದಾರ್ ಹೇಳಿದ್ದಾರೆ.</p>.<p>ದ್ವೇಷದ ಅಪರಾಧಗಳ ವಿರುದ್ಧ ಭಾರತೀಯ ಸಮುದಾಯದ ಸದಸ್ಯರು ಒಂದಾಗಿರುವಂತೆ ಅವರು ಸೋಮವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ.</p>.<p>‘ಅಮೆರಿಕದಲ್ಲಿ ಹಿಂದೂ ಧರ್ಮ ಮತ್ತು ಧರ್ಮೀಯರ ಮೇಲೆ ದಾಳಿಗಳು ಹೆಚ್ಚಾಗಿರುವುದನ್ನು ನಾನು ಗಮನಿಸಿದ್ದೇನೆ. ಹಿಂದೂಗಳ ಬಗ್ಗೆ ತಪ್ಪು ಮಾಹಿತಿಗಳನ್ನು ಆನ್ಲೈನ್ ಮೂಲಕ ಬಿತ್ತರಿಸಲಾಗುತ್ತಿದೆ’ ಎಂದು ಅವರು ಕಳವಳ ವ್ಯಕ್ತಪಡಿಸಿದರು. </p>.<p>ಇತ್ತೀಚೆಗೆ ಹಿಂದೂ ದೇವಾಲಯಗಳು ಮತ್ತು ಪೂಜಾ ಸ್ಥಳಗಳ ಮೇಲಿನ ದಾಳಿಯನ್ನು ಖಂಡಿಸಿ ಭಾರತೀಯ–ಅಮೆರಿಕನ್ ಕಾಂಗ್ರೆಸ್ ಸದಸ್ಯರಾದ ಶ್ರೀ ಥಾನೇದಾರ್, ರೋ ಖನ್ನಾ, ರಾಜಾ ಕೃಷ್ಣಮೂರ್ತಿ, ಅಮಿ ಬೇರಾ, ಪ್ರಮೀಳಾ ಜೈಪಾಲ್ ಅವರು ತನಿಖೆಗೆ ಆಗ್ರಹಿಸಿ ನ್ಯಾಯಾಂಗ ಇಲಾಖೆಗೆ ಪತ್ರ ಬರೆದಿದ್ದರು.</p>.<p>‘ಈ ದಾಳಿಗಳಿಗೆ ಸಂಬಂಧಿಸಿದಂತೆ ಯಾರ ವಿರುದ್ಧವೂ ಕ್ರಮ ತೆಗೆದುಕೊಂಡಿಲ್ಲ ಮತ್ತು ಯಾರನ್ನೂ ಬಂಧಿಸಿಲ್ಲ’ ಎಂದು ಅವರು ಬೇಸರ ವ್ಯಕ್ತಪಡಿಸಿದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>