<p><strong>ಪೋರ್ಟ್ ಸುಡಾನ್:</strong> ಸುಡಾನ್ನ ಡಾರ್ಫುರ್ ಪ್ರದೇಶದಲ್ಲಿ ಭಾರೀ ಭೂಕುಸಿತ ಸಂಭವಿಸಿದ್ದು, ಪರಿಣಾಮ 1,000ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ್ದಾರೆ. ಈ ಭೂಕುಸಿತ ಇಡೀ ಗ್ರಾಮವನ್ನೇ ಸರ್ವನಾಶ ಮಾಡಿದೆ. ಆದರೆ, ಅದೃಷ್ಟವೆಂಬಂತೆ ವ್ಯಕ್ತಿಯೊಬ್ಬರು ಮಾತ್ರ ಬದುಕುಳಿದಿದ್ದಾರೆ.</p><p>ಭಾರೀ ಮಳೆಯ ಬಳಿಕ ಭಾನುವಾರ ಸಂಭವಿಸಿದ ದುರಂತದಲ್ಲಿ ಮರ್ರಾ ಪರ್ವತ ಪ್ರದೇಶದಲ್ಲಿರುವ ತಾರಾಸಿನ್ ಗ್ರಾಮ ಸಂಪೂರ್ಣವಾಗಿ ನಾಶವಾಗಿದೆ ಎಂದು ಸುಡಾನ್ ವಿಮೋಚನಾ ಸೇನೆ (Sudan Liberation Movement) ತನ್ನ ಹೇಳಿಕೆಯಲ್ಲಿ ತಿಳಿಸಿದೆ. </p>. ಪಂಜಾಬ್ನಲ್ಲಿ ಪ್ರವಾಹ ಸಂತ್ರಸ್ತರ ನೆರವಿಗೆ ಮುಂದಾದ ದೆಹಲಿ ಶಾಸಕ ಹರೀಶ್ ಖುರಾನಾ.<p>ಮಾಹಿತಿ ಪ್ರಕಾರ, ಸುಡಾನ್ನ ಡಾರ್ಫುರ್ ಗ್ರಾಮದ 1,000ಕ್ಕೂ ಹೆಚ್ಚು ನಿವಾಸಿಗಳು ಮೃತಪಟ್ಟಿದ್ದಾರೆ. ಅದರಲ್ಲಿ ವ್ಯಕ್ತಿಯೊಬ್ಬರು ಮಾತ್ರ ಬದುಕುಳಿದಿದ್ದಾರೆ ಎಂದು ವರದಿಯಾಗಿದೆ. </p><p>ಇನ್ನು, ಬೃಹತ್ ಭೂಕುಸಿತ ಉಂಟಾದ ಪರಿಣಾಮ ನೂರಾರು ಜನರು ಮಣ್ಣಿನ ಅವಶೇಷಗಳ ಅಡಿಯಲ್ಲಿ ಸಿಲುಕಿರುವವರ ರಕ್ಷಣೆಗಾಗಿ ಸುಡಾನ್ ವಿಮೋಚನಾ ಸೇನೆ (ಎಸ್ಎಲ್ಎಂ) ವಿಶ್ವಸಂಸ್ಥೆ ಸಂಸ್ಥೆಗಳಿಗೆ ಮನವಿ ಮಾಡಿದೆ. </p>.ಬೀದರ್ | ಮಾಂಜ್ರಾ ನದಿಯಲ್ಲಿ ಪ್ರವಾಹ: ಹೊಲಗಳಿಗೆ ನುಗ್ಗಿದ ನೀರು.<p>ಈ ಹಿಂದೆ 2018ರಲ್ಲಿ ಟೌಕೋಲಿಯಲ್ಲಿ ಸಂಭವಿಸಿದ ಭೂಕುಸಿತದಲ್ಲಿ ಕನಿಷ್ಠ 20 ಜನರು ಮೃತಪಟ್ಟಿದ್ದರು. ಆದರೆ, ಈಗ ಸುಡಾನ್ನ ಡಾರ್ಫುರ್ ಪ್ರದೇಶದಲ್ಲಿ ಭಾರೀ ಭೂಕುಸಿತ ಸಂಭವಿಸಿದ್ದು, ಪರಿಣಾಮ 1,000ಕ್ಕೂ ಹೆಚ್ಚು ಮಂದಿ ಜೀವ ಕಳೆದುಕೊಂಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಪೋರ್ಟ್ ಸುಡಾನ್:</strong> ಸುಡಾನ್ನ ಡಾರ್ಫುರ್ ಪ್ರದೇಶದಲ್ಲಿ ಭಾರೀ ಭೂಕುಸಿತ ಸಂಭವಿಸಿದ್ದು, ಪರಿಣಾಮ 1,000ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ್ದಾರೆ. ಈ ಭೂಕುಸಿತ ಇಡೀ ಗ್ರಾಮವನ್ನೇ ಸರ್ವನಾಶ ಮಾಡಿದೆ. ಆದರೆ, ಅದೃಷ್ಟವೆಂಬಂತೆ ವ್ಯಕ್ತಿಯೊಬ್ಬರು ಮಾತ್ರ ಬದುಕುಳಿದಿದ್ದಾರೆ.</p><p>ಭಾರೀ ಮಳೆಯ ಬಳಿಕ ಭಾನುವಾರ ಸಂಭವಿಸಿದ ದುರಂತದಲ್ಲಿ ಮರ್ರಾ ಪರ್ವತ ಪ್ರದೇಶದಲ್ಲಿರುವ ತಾರಾಸಿನ್ ಗ್ರಾಮ ಸಂಪೂರ್ಣವಾಗಿ ನಾಶವಾಗಿದೆ ಎಂದು ಸುಡಾನ್ ವಿಮೋಚನಾ ಸೇನೆ (Sudan Liberation Movement) ತನ್ನ ಹೇಳಿಕೆಯಲ್ಲಿ ತಿಳಿಸಿದೆ. </p>. ಪಂಜಾಬ್ನಲ್ಲಿ ಪ್ರವಾಹ ಸಂತ್ರಸ್ತರ ನೆರವಿಗೆ ಮುಂದಾದ ದೆಹಲಿ ಶಾಸಕ ಹರೀಶ್ ಖುರಾನಾ.<p>ಮಾಹಿತಿ ಪ್ರಕಾರ, ಸುಡಾನ್ನ ಡಾರ್ಫುರ್ ಗ್ರಾಮದ 1,000ಕ್ಕೂ ಹೆಚ್ಚು ನಿವಾಸಿಗಳು ಮೃತಪಟ್ಟಿದ್ದಾರೆ. ಅದರಲ್ಲಿ ವ್ಯಕ್ತಿಯೊಬ್ಬರು ಮಾತ್ರ ಬದುಕುಳಿದಿದ್ದಾರೆ ಎಂದು ವರದಿಯಾಗಿದೆ. </p><p>ಇನ್ನು, ಬೃಹತ್ ಭೂಕುಸಿತ ಉಂಟಾದ ಪರಿಣಾಮ ನೂರಾರು ಜನರು ಮಣ್ಣಿನ ಅವಶೇಷಗಳ ಅಡಿಯಲ್ಲಿ ಸಿಲುಕಿರುವವರ ರಕ್ಷಣೆಗಾಗಿ ಸುಡಾನ್ ವಿಮೋಚನಾ ಸೇನೆ (ಎಸ್ಎಲ್ಎಂ) ವಿಶ್ವಸಂಸ್ಥೆ ಸಂಸ್ಥೆಗಳಿಗೆ ಮನವಿ ಮಾಡಿದೆ. </p>.ಬೀದರ್ | ಮಾಂಜ್ರಾ ನದಿಯಲ್ಲಿ ಪ್ರವಾಹ: ಹೊಲಗಳಿಗೆ ನುಗ್ಗಿದ ನೀರು.<p>ಈ ಹಿಂದೆ 2018ರಲ್ಲಿ ಟೌಕೋಲಿಯಲ್ಲಿ ಸಂಭವಿಸಿದ ಭೂಕುಸಿತದಲ್ಲಿ ಕನಿಷ್ಠ 20 ಜನರು ಮೃತಪಟ್ಟಿದ್ದರು. ಆದರೆ, ಈಗ ಸುಡಾನ್ನ ಡಾರ್ಫುರ್ ಪ್ರದೇಶದಲ್ಲಿ ಭಾರೀ ಭೂಕುಸಿತ ಸಂಭವಿಸಿದ್ದು, ಪರಿಣಾಮ 1,000ಕ್ಕೂ ಹೆಚ್ಚು ಮಂದಿ ಜೀವ ಕಳೆದುಕೊಂಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>