<p><strong>ಕೈರೊ</strong>: ಸುಡಾನ್ನ ವಿವಿಧೆಡೆ ಧಾರಾಕಾರ ಮಳೆಯಾಗುತ್ತಿದೆ. ದಾರ್ಫೂರ್ ಪ್ರದೇಶದಲ್ಲಿ ಭಾನುವಾರ ಸಂಭವಿಸಿದ ಭೂಕುಸಿತದಲ್ಲಿ ಒಂದು ಸಾವಿರಕ್ಕೂ ಹೆಚ್ಚು ಜನರು ಮೃತಪಟ್ಟಿದ್ದಾರೆ ಎನ್ನಲಾಗಿದೆ.</p>.<p>ಮರ್ರಾ ಪರ್ವತ ಪ್ರದೇಶದಲ್ಲಿನ ತಾರಾಸಿನ್ ಗ್ರಾಮವು ಸಂಪೂರ್ಣ ನಾಶವಾಗಿದೆ. ಹಳ್ಳಿಯ ಜನರೆಲ್ಲರೂ ಭೂಕುಸಿತದಲ್ಲಿ ಸಿಲುಕಿ ಮೃತಪಟ್ಟಿದ್ದು, ಒಬ್ಬರು ಮಾತ್ರ ಬದುಕುಳಿದಿದ್ದಾರೆ ಎಂದು ಈ ಪ್ರದೇಶದ ಮೇಲೆ ನಿಯಂತ್ರಣ ಹೊಂದಿರುವ ಬಂಡುಕೋರರ ಗುಂಪು ಸುಡಾನ್ ಲಿಬರೇಷನ್ ಮೂವ್ಮೆಂಟ್ ಆರ್ಮಿ ತಿಳಿಸಿದೆ.</p>.<p>ಭೂಕುಸಿತದ ಮಣ್ಣಿನಡಿ ಸಿಲುಕಿರುವವರ ರಕ್ಷಣೆಗಾಗಿ ಶೋಧ ನಡೆದಿದೆ. ಮಂಗಳವಾರ ಸಂಜೆ ವೇಳೆಗೆ 100 ಮಂದಿಯ ಶವಗಳು ಸಿಕ್ಕಿವೆ ಎಂದು ಬಂಡುಕೋರರ ಗುಂಪಿನ ವಕ್ತಾರ ಮೊಹಮದ್ ಅಬ್ದುಲ್–ರಹಮಾನ್ ಅಲ್–ನಯರ್ ಹೇಳಿದ್ದಾರೆ.</p>.<p>ಮರ್ರಾ ಪರ್ವತ ಶ್ರೇಣಿಯಲ್ಲಿ ತಾರಾಸಿನ್ ಗ್ರಾಮವಿದ್ದು, ದುರಂತದ ಸ್ಥಳಕ್ಕೆ ತೆರಳುವುದು ಕಷ್ಟವಾಗಿದೆ. ರಕ್ಷಣಾ ಕಾರ್ಯಾಚರಣೆಗೂ ಇದರಿಂದ ಅಡ್ಡಿಯಾಗಿದೆ ಎನ್ನಲಾಗಿದೆ.</p>.<p>ಮುನ್ನೂರರಿಂದ ಒಂದು ಸಾವಿರಕ್ಕೂ ಹೆಚ್ಚು ಜನರು ಭೂಕುಸಿತದ ದುರಂತದಲ್ಲಿ ತಮ್ಮ ಪ್ರಾಣ ಕಳೆದುಕೊಂಡಿರಬಹುದು ಎಂದು ಸುಡಾನ್ನಲ್ಲಿ ವಿಶ್ವಸಂಸ್ಥೆಯ ಮಾನವೀಯ ಸಂಯೋಜಕರಾದ ಲುಕಾ ರೆಂಡಾ ಸ್ಥಳೀಯ ಮೂಲಗಳನ್ನು ಉಲ್ಲೇಖಿಸಿ ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೈರೊ</strong>: ಸುಡಾನ್ನ ವಿವಿಧೆಡೆ ಧಾರಾಕಾರ ಮಳೆಯಾಗುತ್ತಿದೆ. ದಾರ್ಫೂರ್ ಪ್ರದೇಶದಲ್ಲಿ ಭಾನುವಾರ ಸಂಭವಿಸಿದ ಭೂಕುಸಿತದಲ್ಲಿ ಒಂದು ಸಾವಿರಕ್ಕೂ ಹೆಚ್ಚು ಜನರು ಮೃತಪಟ್ಟಿದ್ದಾರೆ ಎನ್ನಲಾಗಿದೆ.</p>.<p>ಮರ್ರಾ ಪರ್ವತ ಪ್ರದೇಶದಲ್ಲಿನ ತಾರಾಸಿನ್ ಗ್ರಾಮವು ಸಂಪೂರ್ಣ ನಾಶವಾಗಿದೆ. ಹಳ್ಳಿಯ ಜನರೆಲ್ಲರೂ ಭೂಕುಸಿತದಲ್ಲಿ ಸಿಲುಕಿ ಮೃತಪಟ್ಟಿದ್ದು, ಒಬ್ಬರು ಮಾತ್ರ ಬದುಕುಳಿದಿದ್ದಾರೆ ಎಂದು ಈ ಪ್ರದೇಶದ ಮೇಲೆ ನಿಯಂತ್ರಣ ಹೊಂದಿರುವ ಬಂಡುಕೋರರ ಗುಂಪು ಸುಡಾನ್ ಲಿಬರೇಷನ್ ಮೂವ್ಮೆಂಟ್ ಆರ್ಮಿ ತಿಳಿಸಿದೆ.</p>.<p>ಭೂಕುಸಿತದ ಮಣ್ಣಿನಡಿ ಸಿಲುಕಿರುವವರ ರಕ್ಷಣೆಗಾಗಿ ಶೋಧ ನಡೆದಿದೆ. ಮಂಗಳವಾರ ಸಂಜೆ ವೇಳೆಗೆ 100 ಮಂದಿಯ ಶವಗಳು ಸಿಕ್ಕಿವೆ ಎಂದು ಬಂಡುಕೋರರ ಗುಂಪಿನ ವಕ್ತಾರ ಮೊಹಮದ್ ಅಬ್ದುಲ್–ರಹಮಾನ್ ಅಲ್–ನಯರ್ ಹೇಳಿದ್ದಾರೆ.</p>.<p>ಮರ್ರಾ ಪರ್ವತ ಶ್ರೇಣಿಯಲ್ಲಿ ತಾರಾಸಿನ್ ಗ್ರಾಮವಿದ್ದು, ದುರಂತದ ಸ್ಥಳಕ್ಕೆ ತೆರಳುವುದು ಕಷ್ಟವಾಗಿದೆ. ರಕ್ಷಣಾ ಕಾರ್ಯಾಚರಣೆಗೂ ಇದರಿಂದ ಅಡ್ಡಿಯಾಗಿದೆ ಎನ್ನಲಾಗಿದೆ.</p>.<p>ಮುನ್ನೂರರಿಂದ ಒಂದು ಸಾವಿರಕ್ಕೂ ಹೆಚ್ಚು ಜನರು ಭೂಕುಸಿತದ ದುರಂತದಲ್ಲಿ ತಮ್ಮ ಪ್ರಾಣ ಕಳೆದುಕೊಂಡಿರಬಹುದು ಎಂದು ಸುಡಾನ್ನಲ್ಲಿ ವಿಶ್ವಸಂಸ್ಥೆಯ ಮಾನವೀಯ ಸಂಯೋಜಕರಾದ ಲುಕಾ ರೆಂಡಾ ಸ್ಥಳೀಯ ಮೂಲಗಳನ್ನು ಉಲ್ಲೇಖಿಸಿ ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>