<p><strong>ಇಸ್ಲಾಮಾಬಾದ್:</strong> ಬಲೂಚಿಸ್ತಾನ ಪ್ರಾಂತ್ಯದ ಖುಜ್ದಾರ್ ಜಿಲ್ಲೆಯಲ್ಲಿ ಶಾಲಾ ವಾಹನದ ಮೇಲೆ ನಡೆದ ಆತ್ಮಾಹುತಿ ದಾಳಿಯಲ್ಲಿ 3 ಮಕ್ಕಳು ಸೇರಿದಂತೆ 5 ಜನರು ಮೃತಪಟ್ಟಿದ್ದು, ಹಲವರಿಗೆ ಗಂಭೀರ ಗಾಯವಾಗಿರುವ ಘಟನೆಯು ಬುಧವಾರ ಜರುಗಿದೆ ಎಂದು ಪಾಕಿಸ್ತಾನ ಸೇನಾ ವಕ್ತಾರರು ತಿಳಿಸಿದ್ದಾರೆ.</p><p>ಶಾಲಾ ಮಕ್ಕಳನ್ನು ಗುರಿಯಾಗಿಸಿಕೊಂಡು ದಾಳಿ ನಡೆಸಲಾಗಿದ್ದು, 38 ಜನರಿಗೆ ಗಂಭೀರ ಗಾಯವಾಗಿದೆ. ಇದು ‘ಹೇಡಿತನ’ ಹಾಗೂ ‘ಭಯಾನಕ’ ದಾಳಿಯಾಗಿದೆ ಎಂದರು. </p><p>ವಾಹನದ ಮೂಲಕ ಸಾಗಿಸಬಹುದಾದ ಸುಧಾರಿತ ಸ್ಫೋಟಕ ಸಾಧನ(ವಿಬಿಐಇಡಿ)ವನ್ನು ಘಟನೆಯಲ್ಲಿ ಬಳಸಲಾಗಿದೆ. ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ತಿಳಿಸಿದರು. </p>.Operation Haroof: ಪಾಕಿಸ್ತಾನದಲ್ಲಿ 51 ಕಡೆ 71 ಬಾರಿ ದಾಳಿ ಮಾಡಿದ ಬಲೂಚ್ ಸೇನೆ.<p>ಘಟನೆಯನ್ನು ಪಾಕಿಸ್ತಾನ ಪ್ರಧಾನಿ ಶೆಹಬಾಜ್ ಶರೀಫ್ ಖಂಡಿಸಿದ್ದು, ‘ಅಮಾಯಕ ಮಕ್ಕಳು ಹಾಗೂ ಶಿಕ್ಷಕರ ಮೇಲಿನ ದಾಳಿಯು ನೋವುಂಟು ಮಾಡಿದೆ. ಘಟನೆಗೆ ಕಾರಣವಾದವರನ್ನು ಬಂಧಿಸಿ, ಸಂತ್ರಸ್ತರಿಗೆ ನ್ಯಾಯಕೊಡಿಸುವುದಾಗಿ’ ತಿಳಿಸಿದ್ದಾರೆ. </p><p>ಇದುವರೆಗೂ ಯಾವುದೇ ಉಗ್ರ ಸಂಘಟನೆಗಳು ಕೂಡ ದಾಳಿಯ ಹೊಣೆ ಹೊತ್ತಿಲ್ಲ.</p>.Video | ‘ಬೂಕರ್’ ಶಾರ್ಟ್ಲಿಸ್ಟ್ಗೆ ಕನ್ನಡದ ಬಾನು.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಇಸ್ಲಾಮಾಬಾದ್:</strong> ಬಲೂಚಿಸ್ತಾನ ಪ್ರಾಂತ್ಯದ ಖುಜ್ದಾರ್ ಜಿಲ್ಲೆಯಲ್ಲಿ ಶಾಲಾ ವಾಹನದ ಮೇಲೆ ನಡೆದ ಆತ್ಮಾಹುತಿ ದಾಳಿಯಲ್ಲಿ 3 ಮಕ್ಕಳು ಸೇರಿದಂತೆ 5 ಜನರು ಮೃತಪಟ್ಟಿದ್ದು, ಹಲವರಿಗೆ ಗಂಭೀರ ಗಾಯವಾಗಿರುವ ಘಟನೆಯು ಬುಧವಾರ ಜರುಗಿದೆ ಎಂದು ಪಾಕಿಸ್ತಾನ ಸೇನಾ ವಕ್ತಾರರು ತಿಳಿಸಿದ್ದಾರೆ.</p><p>ಶಾಲಾ ಮಕ್ಕಳನ್ನು ಗುರಿಯಾಗಿಸಿಕೊಂಡು ದಾಳಿ ನಡೆಸಲಾಗಿದ್ದು, 38 ಜನರಿಗೆ ಗಂಭೀರ ಗಾಯವಾಗಿದೆ. ಇದು ‘ಹೇಡಿತನ’ ಹಾಗೂ ‘ಭಯಾನಕ’ ದಾಳಿಯಾಗಿದೆ ಎಂದರು. </p><p>ವಾಹನದ ಮೂಲಕ ಸಾಗಿಸಬಹುದಾದ ಸುಧಾರಿತ ಸ್ಫೋಟಕ ಸಾಧನ(ವಿಬಿಐಇಡಿ)ವನ್ನು ಘಟನೆಯಲ್ಲಿ ಬಳಸಲಾಗಿದೆ. ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ತಿಳಿಸಿದರು. </p>.Operation Haroof: ಪಾಕಿಸ್ತಾನದಲ್ಲಿ 51 ಕಡೆ 71 ಬಾರಿ ದಾಳಿ ಮಾಡಿದ ಬಲೂಚ್ ಸೇನೆ.<p>ಘಟನೆಯನ್ನು ಪಾಕಿಸ್ತಾನ ಪ್ರಧಾನಿ ಶೆಹಬಾಜ್ ಶರೀಫ್ ಖಂಡಿಸಿದ್ದು, ‘ಅಮಾಯಕ ಮಕ್ಕಳು ಹಾಗೂ ಶಿಕ್ಷಕರ ಮೇಲಿನ ದಾಳಿಯು ನೋವುಂಟು ಮಾಡಿದೆ. ಘಟನೆಗೆ ಕಾರಣವಾದವರನ್ನು ಬಂಧಿಸಿ, ಸಂತ್ರಸ್ತರಿಗೆ ನ್ಯಾಯಕೊಡಿಸುವುದಾಗಿ’ ತಿಳಿಸಿದ್ದಾರೆ. </p><p>ಇದುವರೆಗೂ ಯಾವುದೇ ಉಗ್ರ ಸಂಘಟನೆಗಳು ಕೂಡ ದಾಳಿಯ ಹೊಣೆ ಹೊತ್ತಿಲ್ಲ.</p>.Video | ‘ಬೂಕರ್’ ಶಾರ್ಟ್ಲಿಸ್ಟ್ಗೆ ಕನ್ನಡದ ಬಾನು.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>