<p><strong>ಪೆಶಾವರ್</strong>: ಕದನ ವಿರಾಮದ ಹೊರತಾಗಿಯೂ ಪಾಕಿಸ್ತಾನದ ಖೈಬರ್ ಪಖ್ತುಂಖ್ವಾ ಪ್ರಾಂತ್ಯದ ಕುರ್ರಮ್ ಜಿಲ್ಲೆಯಲ್ಲಿ ಸುನ್ನಿ ಹಾಗೂ ಶಿಯಾ ಮುಸ್ಲಿಂ ಪಂಗಡಗಳ ನಡುವೆ ಸಂಘರ್ಷ ಮುಂದುವರಿದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಸಂಘರ್ಷ ನಿಯಂತ್ರಣಕ್ಕೆ ಅಧಿಕಾರಿಗಳ ಪ್ರಯತ್ನ ಮುಂದುವರಿದಿದ್ದು, ಸಾವಿನ ಸಂಖ್ಯೆ 130 ದಾಟಿದೆ.</p>.ಸಂಘರ್ಷ ಶಮನಕ್ಕೆ ಯತ್ನಿಸಿ: ಜಿ20 ರಾಷ್ಟ್ರಗಳಿಗೆ ಪ್ರಧಾನಿ ಮೋದಿ ಕರೆ .<p>ಅಫ್ಗಾನಿಸ್ತಾನ ಗಡಿಯಲ್ಲಿರುವ ಕುರ್ರಮ್ ಜಿಲ್ಲೆಯಲ್ಲಿ ಕಳೆದ ಹಲವು ದಶಕಗಳಿಂದ ಈ ಸಂಘರ್ಷ ನಡೆಯುತ್ತಲೇ ಬಂದಿದೆ. ಒಂದು ತಿಂಗಳ ಹಿಂದೆ ಸಂಘರ್ಷ ತಾರಕಕ್ಕೇರಿದ್ದು, ಡಜನ್ಗೂ ಅಧಿಕ ಮಂದಿ ಪ್ರಾಣ ಕಳೆದುಕೊಂಡಿದ್ದರು.</p><p>ಕಳೆದ ಹತ್ತು ದಿನಗಳಲ್ಲಿ ಸಂಘರ್ಷದಿಂದಾಗಿ 133 ಮಂದಿ ಸಾವಿಗೀಡಾಗಿದ್ದಾರೆ ಎಂದು ಜಿಲ್ಲಾ ಆಡಳಿತಾಧಿಕಾರಿ ವಾಜಿದ್ ಹುಸೇನ್ ಮಾಹಿತಿ ನೀಡಿದ್ದಾರೆ.</p><p>ಉಭಯ ಪಂಗಡಗಳ ನಡುವ ಸಂಘರ್ಷ ನಿಯಂತ್ರಣಕ್ಕೆ ಜಿಲ್ಲಾ ಆಡಳಿತ ಹಾಗೂ ಸಂಬಂಧಪಟ್ಟ ಅಧಿಕಾರಿಗಳು ಪ್ರಯತ್ನ ಪಡುತ್ತಿದ್ದು, ಅದು ಸಫಲವಾಗಿಲ್ಲ ಎಂದು ಅವರು ಹೇಳಿದ್ದಾರೆ.</p>.ಪಾಕಿಸ್ತಾನ | ಖೈಬರ್ ಪಖ್ತುಂಖ್ವಾದಲ್ಲಿ ಸುನ್ನಿ–ಶಿಯಾ ಗುಂಪು ಘರ್ಷಣೆ: 13 ಸಾವು .<p>ಉಭಯ ಪಂಗಡಗಳ ನಡುವೆ ಕಳೆದ ಭಾನುವಾರ ಪಾಕಿಸ್ತಾನ ಸರ್ಕಾರವು ಕದನ ವಿರಾಮ ಒಪ್ಪಂದ ಏರ್ಪಡಿಸಿತ್ತು. ಆದರೆ ಅದು ಫಲ ಕೊಟ್ಟಿಲ್ಲ. </p><p>ಶಿಯಾಗಳ ಮೇಲೆ ಬಂಧೂಕುಧಾರಿಯೊಬ್ಬ ಗುಂಡು ಹಾರಿಸಿ ಕೊಂದ 43 ಮಂದಿ ಸೇರಿ, ಒಟ್ಟು 97 ಜನ ಸಾವಿಗೀಡಾಗಿದ್ದಾರೆ ಎಂದು ಪ್ರಾಂತೀಯ ಅಧಿಕಾರಿಗಳು ತಿಳಿಸಿದ್ದಾರೆ. ಇನ್ನುಳಿದವರು ಪ್ರತೀಕಾರದ ದಾಳಿಯಲ್ಲಿ ಪ್ರಾಣ ಕಳೆದುಕೊಂಡಿದ್ದಾರೆ.</p><p>ಖೈಬರ್ ಪಖ್ತುಂಖ್ವಾ ಪ್ರಾಂತ್ಯದ ಮುಖ್ಯಮಂತ್ರಿ ಅಲಿ ಅಮಿನ್ ಖಾನ್ ಗಂದಪುರ ಶನಿವಾರ ಸ್ಥಳಕ್ಕೆ ಭೇಟಿ ನೀಡಿ, ಉಭಯ ಪಂಗಡದ ಹಿರಿಯರು ಹಾಗೂ ನಾಯಕರೊಂದಿಗೆ ಮಾತುಕತೆ ನಡೆಸಿದ್ದರು.</p>.ವಿದೇಶ ವಿದ್ಯಮಾನ: ಮತ್ತೊಂದು ಅಂತಃಕಲಹದ ಹೊಸ್ತಿಲಲ್ಲಿ ಪಾಕಿಸ್ತಾನ?.<p>‘ಯಾರಾದರೂ ಶಸ್ತ್ರಾಸ್ತ್ರ ಎತ್ತಿಕೊಂಡರೆ ಅವರನ್ನು ಭಯೋತ್ಪಾದಕರು ಎಂದು ಪರಿಗಣಿಸಲಾಗುವುದು’ ಎಂದು ಅವರು ಎಚ್ಚರಿಕೆ ನೀಡಿದ್ದಾಗಿ ಅವರ ಕಚೇರಿಯ ಪ್ರಕಟಣೆ ತಿಳಿಸಿತ್ತು. ಸ್ಥಳದಲ್ಲಿ ಭದ್ರತಾ ಪಡೆಗಳು ಪಹರೆ ಕಾಯಲಿವೆ ಎಂದೂ ತಿಳಿಸಿತ್ತು.</p><p>ಕುರ್ರಮ್ನ ಪ್ರಮುಖ ನಗರ ಪರಾಚಿಬಾರ್ ಹಾಗೂ ಪೇಶಾವರ್ ಅನ್ನು ಸಂಪರ್ಕಿಸುವ ಮುಖ್ಯ ರಸ್ತೆ ಬಂದ್ ಮಾಡಲಾಗಿದ್ದು, ಗಾಯಾಳುಗಳನ್ನು ಹಾಗೂ ರೋಗಿಗಳನ್ನು ಆಸ್ಪತ್ರೆಗೆ ಸಾಗಿಸಲು ಸಮಸ್ಯೆಯಾಗುತ್ತಿದೆ ಎಂದು ಸ್ಥಳೀಯರು ಹೇಳಿದ್ದಾರೆ.</p>.ಪಾಕಿಸ್ತಾನ | ವಾಹನದ ಮೇಲೆ ಉಗ್ರರ ದಾಳಿ: 50 ಜನ ಸಾವು.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಪೆಶಾವರ್</strong>: ಕದನ ವಿರಾಮದ ಹೊರತಾಗಿಯೂ ಪಾಕಿಸ್ತಾನದ ಖೈಬರ್ ಪಖ್ತುಂಖ್ವಾ ಪ್ರಾಂತ್ಯದ ಕುರ್ರಮ್ ಜಿಲ್ಲೆಯಲ್ಲಿ ಸುನ್ನಿ ಹಾಗೂ ಶಿಯಾ ಮುಸ್ಲಿಂ ಪಂಗಡಗಳ ನಡುವೆ ಸಂಘರ್ಷ ಮುಂದುವರಿದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಸಂಘರ್ಷ ನಿಯಂತ್ರಣಕ್ಕೆ ಅಧಿಕಾರಿಗಳ ಪ್ರಯತ್ನ ಮುಂದುವರಿದಿದ್ದು, ಸಾವಿನ ಸಂಖ್ಯೆ 130 ದಾಟಿದೆ.</p>.ಸಂಘರ್ಷ ಶಮನಕ್ಕೆ ಯತ್ನಿಸಿ: ಜಿ20 ರಾಷ್ಟ್ರಗಳಿಗೆ ಪ್ರಧಾನಿ ಮೋದಿ ಕರೆ .<p>ಅಫ್ಗಾನಿಸ್ತಾನ ಗಡಿಯಲ್ಲಿರುವ ಕುರ್ರಮ್ ಜಿಲ್ಲೆಯಲ್ಲಿ ಕಳೆದ ಹಲವು ದಶಕಗಳಿಂದ ಈ ಸಂಘರ್ಷ ನಡೆಯುತ್ತಲೇ ಬಂದಿದೆ. ಒಂದು ತಿಂಗಳ ಹಿಂದೆ ಸಂಘರ್ಷ ತಾರಕಕ್ಕೇರಿದ್ದು, ಡಜನ್ಗೂ ಅಧಿಕ ಮಂದಿ ಪ್ರಾಣ ಕಳೆದುಕೊಂಡಿದ್ದರು.</p><p>ಕಳೆದ ಹತ್ತು ದಿನಗಳಲ್ಲಿ ಸಂಘರ್ಷದಿಂದಾಗಿ 133 ಮಂದಿ ಸಾವಿಗೀಡಾಗಿದ್ದಾರೆ ಎಂದು ಜಿಲ್ಲಾ ಆಡಳಿತಾಧಿಕಾರಿ ವಾಜಿದ್ ಹುಸೇನ್ ಮಾಹಿತಿ ನೀಡಿದ್ದಾರೆ.</p><p>ಉಭಯ ಪಂಗಡಗಳ ನಡುವ ಸಂಘರ್ಷ ನಿಯಂತ್ರಣಕ್ಕೆ ಜಿಲ್ಲಾ ಆಡಳಿತ ಹಾಗೂ ಸಂಬಂಧಪಟ್ಟ ಅಧಿಕಾರಿಗಳು ಪ್ರಯತ್ನ ಪಡುತ್ತಿದ್ದು, ಅದು ಸಫಲವಾಗಿಲ್ಲ ಎಂದು ಅವರು ಹೇಳಿದ್ದಾರೆ.</p>.ಪಾಕಿಸ್ತಾನ | ಖೈಬರ್ ಪಖ್ತುಂಖ್ವಾದಲ್ಲಿ ಸುನ್ನಿ–ಶಿಯಾ ಗುಂಪು ಘರ್ಷಣೆ: 13 ಸಾವು .<p>ಉಭಯ ಪಂಗಡಗಳ ನಡುವೆ ಕಳೆದ ಭಾನುವಾರ ಪಾಕಿಸ್ತಾನ ಸರ್ಕಾರವು ಕದನ ವಿರಾಮ ಒಪ್ಪಂದ ಏರ್ಪಡಿಸಿತ್ತು. ಆದರೆ ಅದು ಫಲ ಕೊಟ್ಟಿಲ್ಲ. </p><p>ಶಿಯಾಗಳ ಮೇಲೆ ಬಂಧೂಕುಧಾರಿಯೊಬ್ಬ ಗುಂಡು ಹಾರಿಸಿ ಕೊಂದ 43 ಮಂದಿ ಸೇರಿ, ಒಟ್ಟು 97 ಜನ ಸಾವಿಗೀಡಾಗಿದ್ದಾರೆ ಎಂದು ಪ್ರಾಂತೀಯ ಅಧಿಕಾರಿಗಳು ತಿಳಿಸಿದ್ದಾರೆ. ಇನ್ನುಳಿದವರು ಪ್ರತೀಕಾರದ ದಾಳಿಯಲ್ಲಿ ಪ್ರಾಣ ಕಳೆದುಕೊಂಡಿದ್ದಾರೆ.</p><p>ಖೈಬರ್ ಪಖ್ತುಂಖ್ವಾ ಪ್ರಾಂತ್ಯದ ಮುಖ್ಯಮಂತ್ರಿ ಅಲಿ ಅಮಿನ್ ಖಾನ್ ಗಂದಪುರ ಶನಿವಾರ ಸ್ಥಳಕ್ಕೆ ಭೇಟಿ ನೀಡಿ, ಉಭಯ ಪಂಗಡದ ಹಿರಿಯರು ಹಾಗೂ ನಾಯಕರೊಂದಿಗೆ ಮಾತುಕತೆ ನಡೆಸಿದ್ದರು.</p>.ವಿದೇಶ ವಿದ್ಯಮಾನ: ಮತ್ತೊಂದು ಅಂತಃಕಲಹದ ಹೊಸ್ತಿಲಲ್ಲಿ ಪಾಕಿಸ್ತಾನ?.<p>‘ಯಾರಾದರೂ ಶಸ್ತ್ರಾಸ್ತ್ರ ಎತ್ತಿಕೊಂಡರೆ ಅವರನ್ನು ಭಯೋತ್ಪಾದಕರು ಎಂದು ಪರಿಗಣಿಸಲಾಗುವುದು’ ಎಂದು ಅವರು ಎಚ್ಚರಿಕೆ ನೀಡಿದ್ದಾಗಿ ಅವರ ಕಚೇರಿಯ ಪ್ರಕಟಣೆ ತಿಳಿಸಿತ್ತು. ಸ್ಥಳದಲ್ಲಿ ಭದ್ರತಾ ಪಡೆಗಳು ಪಹರೆ ಕಾಯಲಿವೆ ಎಂದೂ ತಿಳಿಸಿತ್ತು.</p><p>ಕುರ್ರಮ್ನ ಪ್ರಮುಖ ನಗರ ಪರಾಚಿಬಾರ್ ಹಾಗೂ ಪೇಶಾವರ್ ಅನ್ನು ಸಂಪರ್ಕಿಸುವ ಮುಖ್ಯ ರಸ್ತೆ ಬಂದ್ ಮಾಡಲಾಗಿದ್ದು, ಗಾಯಾಳುಗಳನ್ನು ಹಾಗೂ ರೋಗಿಗಳನ್ನು ಆಸ್ಪತ್ರೆಗೆ ಸಾಗಿಸಲು ಸಮಸ್ಯೆಯಾಗುತ್ತಿದೆ ಎಂದು ಸ್ಥಳೀಯರು ಹೇಳಿದ್ದಾರೆ.</p>.ಪಾಕಿಸ್ತಾನ | ವಾಹನದ ಮೇಲೆ ಉಗ್ರರ ದಾಳಿ: 50 ಜನ ಸಾವು.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>