<p><strong>ಢಾಕಾ:</strong> ಬಾಂಗ್ಲಾದೇಶದಲ್ಲಿನ ಮಧ್ಯಂತರ ಸರ್ಕಾರದ ವಿರುದ್ಧ ಅಸಮಾಧಾನ ಹೆಚ್ಚಾಗುತ್ತಿದ್ದು, ಸಹಸ್ರಾರು ವಿದ್ಯಾರ್ಥಿಗಳು ಮತ್ತು ಯುವ ಜನರು ಬಾಂಗ್ಲಾದೇಶ ರಾಷ್ಟ್ರೀಯವಾದಿ ಪಕ್ಷದ (ಬಿಎನ್ಪಿ) ನೇತೃತ್ವದಲ್ಲಿ ಬುಧವಾರ ಢಾಕಾದಲ್ಲಿ ರ್ಯಾಲಿ ನಡೆಸಿದರು.</p>.<p>ಮಾಜಿ ಪ್ರಧಾನಿ ಖಲೀದಾ ಜಿಯಾ ನೇತೃತ್ವದ ಬಿಎನ್ಪಿಯ ಕಾರ್ಯಕರ್ತರು, ವಿದ್ಯಾರ್ಥಿಗಳು ಪಕ್ಷದ ಪ್ರಧಾನ ಕಚೇರಿಯ ಹೊರಗಿನ ಬೀದಿಗಳಲ್ಲಿ ಜಮಾಯಿಸಿ ಪ್ರತಿಭಟಿಸಿದರು.</p>.<p>ಮಧ್ಯಂತರ ಸರ್ಕಾರದ ನಾಯಕ ಮುಹಮ್ಮದ್ ಯೂನಸ್ ಅವರು ರಾಜೀನಾಮೆ ನೀಡುವುದಾಗಿ ಬೆದರಿಕೆ ಹಾಕಿದ ಬಳಿಕ ಮತ್ತು ಡಿಸೆಂಬರ್ನಲ್ಲಿ ಚುನಾವಣೆ ನಡೆಸಲು ಸೇನಾ ಮುಖ್ಯಸ್ಥರು ಬೆಂಬಲ ವ್ಯಕ್ತಪಡಿಸಿದ ಬೆನ್ನಲ್ಲೆ ಈ ಪ್ರತಿಭಟನಾ ರ್ಯಾಲಿ ನಡೆದಿದೆ.</p>.<p>ಹಲವು ವರ್ಷಗಳಿಂದ ಅನಾರೋಗ್ಯದಿಂದ ಬಳಲುತ್ತಿರುವ ಜಿಯಾ, ನಾಲ್ಕು ತಿಂಗಳು ಲಂಡನ್ನಲ್ಲಿ ಚಿಕಿತ್ಸೆ ಪಡೆದ ಬಳಿಕ ಇತ್ತೀಚೆಗಷ್ಟೇ ಬಾಂಗ್ಲಾಕ್ಕೆ ಮರಳಿದ್ದಾರೆ. ಇದರ ಬೆನ್ನಲ್ಲೇ ಬಿಎನ್ಪಿ, ಚುನಾವಣೆ ನಡೆಸುವಂತೆ ಮಧ್ಯಂತರ ಸರ್ಕಾರದ ಮೇಲೆ ಒತ್ತಡ ಹೇರುತ್ತಿದೆ.</p>.<p>ಬಾಂಗ್ಲಾದಲ್ಲಿ 2024ರ ಆಗಸ್ಟ್ನಲ್ಲಿ ಕ್ಷಿಪ್ರಕ್ರಾಂತಿ ನಡೆದು, ಶೇಖ್ ಹಸೀನಾ ಅವರ ಸರ್ಕಾರ ಪತನಗೊಂಡ ನಂತರ ಯೂನಸ್ ಅವರು ಮುಖ್ಯ ಸಲಹೆಗಾರರಾಗಿ ನೇಮಕವಾಗಿದ್ದರು. ಹಸೀನಾ ಅವರು ಸದ್ಯ ಭಾರತದ ಆಶ್ರಯದಲ್ಲಿದ್ದಾರೆ. ಅವರ ಪಕ್ಷವಾದ ಅವಾಮಿ ಲೀಗ್ ಅನ್ನು ಮಧ್ಯಂತರ ಸರ್ಕಾರ ನಿಷೇಧಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಢಾಕಾ:</strong> ಬಾಂಗ್ಲಾದೇಶದಲ್ಲಿನ ಮಧ್ಯಂತರ ಸರ್ಕಾರದ ವಿರುದ್ಧ ಅಸಮಾಧಾನ ಹೆಚ್ಚಾಗುತ್ತಿದ್ದು, ಸಹಸ್ರಾರು ವಿದ್ಯಾರ್ಥಿಗಳು ಮತ್ತು ಯುವ ಜನರು ಬಾಂಗ್ಲಾದೇಶ ರಾಷ್ಟ್ರೀಯವಾದಿ ಪಕ್ಷದ (ಬಿಎನ್ಪಿ) ನೇತೃತ್ವದಲ್ಲಿ ಬುಧವಾರ ಢಾಕಾದಲ್ಲಿ ರ್ಯಾಲಿ ನಡೆಸಿದರು.</p>.<p>ಮಾಜಿ ಪ್ರಧಾನಿ ಖಲೀದಾ ಜಿಯಾ ನೇತೃತ್ವದ ಬಿಎನ್ಪಿಯ ಕಾರ್ಯಕರ್ತರು, ವಿದ್ಯಾರ್ಥಿಗಳು ಪಕ್ಷದ ಪ್ರಧಾನ ಕಚೇರಿಯ ಹೊರಗಿನ ಬೀದಿಗಳಲ್ಲಿ ಜಮಾಯಿಸಿ ಪ್ರತಿಭಟಿಸಿದರು.</p>.<p>ಮಧ್ಯಂತರ ಸರ್ಕಾರದ ನಾಯಕ ಮುಹಮ್ಮದ್ ಯೂನಸ್ ಅವರು ರಾಜೀನಾಮೆ ನೀಡುವುದಾಗಿ ಬೆದರಿಕೆ ಹಾಕಿದ ಬಳಿಕ ಮತ್ತು ಡಿಸೆಂಬರ್ನಲ್ಲಿ ಚುನಾವಣೆ ನಡೆಸಲು ಸೇನಾ ಮುಖ್ಯಸ್ಥರು ಬೆಂಬಲ ವ್ಯಕ್ತಪಡಿಸಿದ ಬೆನ್ನಲ್ಲೆ ಈ ಪ್ರತಿಭಟನಾ ರ್ಯಾಲಿ ನಡೆದಿದೆ.</p>.<p>ಹಲವು ವರ್ಷಗಳಿಂದ ಅನಾರೋಗ್ಯದಿಂದ ಬಳಲುತ್ತಿರುವ ಜಿಯಾ, ನಾಲ್ಕು ತಿಂಗಳು ಲಂಡನ್ನಲ್ಲಿ ಚಿಕಿತ್ಸೆ ಪಡೆದ ಬಳಿಕ ಇತ್ತೀಚೆಗಷ್ಟೇ ಬಾಂಗ್ಲಾಕ್ಕೆ ಮರಳಿದ್ದಾರೆ. ಇದರ ಬೆನ್ನಲ್ಲೇ ಬಿಎನ್ಪಿ, ಚುನಾವಣೆ ನಡೆಸುವಂತೆ ಮಧ್ಯಂತರ ಸರ್ಕಾರದ ಮೇಲೆ ಒತ್ತಡ ಹೇರುತ್ತಿದೆ.</p>.<p>ಬಾಂಗ್ಲಾದಲ್ಲಿ 2024ರ ಆಗಸ್ಟ್ನಲ್ಲಿ ಕ್ಷಿಪ್ರಕ್ರಾಂತಿ ನಡೆದು, ಶೇಖ್ ಹಸೀನಾ ಅವರ ಸರ್ಕಾರ ಪತನಗೊಂಡ ನಂತರ ಯೂನಸ್ ಅವರು ಮುಖ್ಯ ಸಲಹೆಗಾರರಾಗಿ ನೇಮಕವಾಗಿದ್ದರು. ಹಸೀನಾ ಅವರು ಸದ್ಯ ಭಾರತದ ಆಶ್ರಯದಲ್ಲಿದ್ದಾರೆ. ಅವರ ಪಕ್ಷವಾದ ಅವಾಮಿ ಲೀಗ್ ಅನ್ನು ಮಧ್ಯಂತರ ಸರ್ಕಾರ ನಿಷೇಧಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>