<p><strong>ಕಠ್ಮಂಡು</strong>: ನೇಪಾಳದ ಮಧ್ಯಂತರ ಸರ್ಕಾರದ ಪ್ರಧಾನಿ ಸುಶೀಲಾ ಕಾರ್ಕಿ ಅವರು ಗುರುವಾರ ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ದೂರವಾಣಿ ಸಂಭಾಷಣೆ ನಡೆಸಿದ್ದಾರೆ.</p>.<p>ನೇಪಾಳದ ಪ್ರಧಾನಿಯಾಗಿ ಅಧಿಕಾರ ವಹಿಸಿಕೊಂಡ ಬಳಿಕ ಕಾರ್ಕಿ, ವಿದೇಶದ ಮುಖ್ಯಸ್ಥರೊಂದಿಗೆ ನಡೆಸಿದ ಮೊದಲ ದೂರವಾಣಿ ಸಂಭಾಷಣೆ ಇದಾಗಿದೆ.</p>.<p>‘ನೇಪಾಳದ ಮೊದಲ ಮಹಿಳಾ ಪ್ರಧಾನಿಯಾಗಿ ಅಧಿಕಾರ ವಹಿಸಿಕೊಂಡಿರುವ ಕಾರ್ಕಿ ಅವರನ್ನು ಪ್ರಧಾನಿ ಮೋದಿ ಅಭಿನಂದಿಸಿದ್ದಾರೆ’ ಎಂದು ನೇಪಾಳದ ವಿದೇಶಾಂಗ ಸಚಿವಾಲಯ ಹೇಳಿಕೆಯಲ್ಲಿ ತಿಳಿಸಿದೆ.</p>.<p>ಸಂಭಾಷಣೆ ವೇಳೆ ಪ್ರಧಾನಿ ಕಾರ್ಕಿ ಅವರು ‘ಸಾರ್ವತ್ರಿಕ ಚುನಾವಣೆ ನಡೆಸುವುದು ಮಧ್ಯಂತರ ಸರ್ಕಾರದ ಪ್ರಮುಖ ಆದ್ಯತೆಯಾಗಿ ಉಳಿಯುತ್ತದೆ. ಜವಾಬ್ದಾರಿಯುತ, ಭ್ರಷ್ಟಾಚಾರ ಮುಕ್ತ ಮತ್ತು ಯುವ ಜನರ ಆಕಾಂಕ್ಷೆಗಳನ್ನು ಈಡೇರಿಸುವ ಆಡಳಿತ ನೀಡುವ ದೃಢನಿಶ್ಚಯ ಕೈಗೊಂಡಿದ್ದೇವೆ’ ಎಂದು ಮೋದಿ ಅವರಿಗೆ ತಿಳಿಸಿದ್ದಾರೆ.</p>.<p>ನೇಪಾಳ ಸರ್ಕಾರದ ಆದ್ಯತೆಗಳಿಗೆ ಅನುಗುಣವಾಗಿ ಭಾರತವು ಸಂಪೂರ್ಣ ಸಹಕಾರ ನೀಡಲಿದೆ ಎಂದು ಮೋದಿ ಭರವಸೆ ನೀಡಿರುವುದಾಗಿ ಪ್ರಕಟಣೆ ತಿಳಿಸಿದೆ. </p>.<p>‘ಎರಡೂ ದೇಶಗಳ ಜನರ ಹಿತಾಸಕ್ತಿ ಕಾಪಾಡಲು ದ್ವಿಪಕ್ಷೀಯ ಸಹಕಾರ ಮತ್ತು ಪಾಲುದಾರಿಕೆಯನ್ನು ಮುಂದುವರಿಸಲು ಇಬ್ಬರೂ ಪ್ರಧಾನ ಮಂತ್ರಿಗಳು ತಮ್ಮ ಬದ್ಧತೆಯನ್ನು ಪುನರುಚ್ಚರಿಸಿದ್ದಾರೆ’ ಎಂದು ಹೇಳಿದೆ. </p>.<p>ಪ್ರಧಾನಿ ಕೆ.ಪಿ. ಶರ್ಮಾ ಓಲಿ ಅವರು ‘ಜೆನ್–ಝಿ’ ಪ್ರತಿಭಟನೆಯಿಂದಾಗಿ ರಾಜೀನಾಮೆ ನೀಡಿದ್ದರು. ಆ ಬಳಿಕ ನೇಪಾಳದಲ್ಲಿ ಮಧ್ಯಂತರ ಸರ್ಕಾರ ಅಸ್ತಿತ್ವಕ್ಕೆ ಬಂದಿದ್ದು, 73 ವರ್ಷದ ಸುಶೀಲಾ ಅವರು ಪ್ರಧಾನಿಯಾಗಿ ಅಧಿಕಾರ ವಹಿಸಿಕೊಂಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಠ್ಮಂಡು</strong>: ನೇಪಾಳದ ಮಧ್ಯಂತರ ಸರ್ಕಾರದ ಪ್ರಧಾನಿ ಸುಶೀಲಾ ಕಾರ್ಕಿ ಅವರು ಗುರುವಾರ ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ದೂರವಾಣಿ ಸಂಭಾಷಣೆ ನಡೆಸಿದ್ದಾರೆ.</p>.<p>ನೇಪಾಳದ ಪ್ರಧಾನಿಯಾಗಿ ಅಧಿಕಾರ ವಹಿಸಿಕೊಂಡ ಬಳಿಕ ಕಾರ್ಕಿ, ವಿದೇಶದ ಮುಖ್ಯಸ್ಥರೊಂದಿಗೆ ನಡೆಸಿದ ಮೊದಲ ದೂರವಾಣಿ ಸಂಭಾಷಣೆ ಇದಾಗಿದೆ.</p>.<p>‘ನೇಪಾಳದ ಮೊದಲ ಮಹಿಳಾ ಪ್ರಧಾನಿಯಾಗಿ ಅಧಿಕಾರ ವಹಿಸಿಕೊಂಡಿರುವ ಕಾರ್ಕಿ ಅವರನ್ನು ಪ್ರಧಾನಿ ಮೋದಿ ಅಭಿನಂದಿಸಿದ್ದಾರೆ’ ಎಂದು ನೇಪಾಳದ ವಿದೇಶಾಂಗ ಸಚಿವಾಲಯ ಹೇಳಿಕೆಯಲ್ಲಿ ತಿಳಿಸಿದೆ.</p>.<p>ಸಂಭಾಷಣೆ ವೇಳೆ ಪ್ರಧಾನಿ ಕಾರ್ಕಿ ಅವರು ‘ಸಾರ್ವತ್ರಿಕ ಚುನಾವಣೆ ನಡೆಸುವುದು ಮಧ್ಯಂತರ ಸರ್ಕಾರದ ಪ್ರಮುಖ ಆದ್ಯತೆಯಾಗಿ ಉಳಿಯುತ್ತದೆ. ಜವಾಬ್ದಾರಿಯುತ, ಭ್ರಷ್ಟಾಚಾರ ಮುಕ್ತ ಮತ್ತು ಯುವ ಜನರ ಆಕಾಂಕ್ಷೆಗಳನ್ನು ಈಡೇರಿಸುವ ಆಡಳಿತ ನೀಡುವ ದೃಢನಿಶ್ಚಯ ಕೈಗೊಂಡಿದ್ದೇವೆ’ ಎಂದು ಮೋದಿ ಅವರಿಗೆ ತಿಳಿಸಿದ್ದಾರೆ.</p>.<p>ನೇಪಾಳ ಸರ್ಕಾರದ ಆದ್ಯತೆಗಳಿಗೆ ಅನುಗುಣವಾಗಿ ಭಾರತವು ಸಂಪೂರ್ಣ ಸಹಕಾರ ನೀಡಲಿದೆ ಎಂದು ಮೋದಿ ಭರವಸೆ ನೀಡಿರುವುದಾಗಿ ಪ್ರಕಟಣೆ ತಿಳಿಸಿದೆ. </p>.<p>‘ಎರಡೂ ದೇಶಗಳ ಜನರ ಹಿತಾಸಕ್ತಿ ಕಾಪಾಡಲು ದ್ವಿಪಕ್ಷೀಯ ಸಹಕಾರ ಮತ್ತು ಪಾಲುದಾರಿಕೆಯನ್ನು ಮುಂದುವರಿಸಲು ಇಬ್ಬರೂ ಪ್ರಧಾನ ಮಂತ್ರಿಗಳು ತಮ್ಮ ಬದ್ಧತೆಯನ್ನು ಪುನರುಚ್ಚರಿಸಿದ್ದಾರೆ’ ಎಂದು ಹೇಳಿದೆ. </p>.<p>ಪ್ರಧಾನಿ ಕೆ.ಪಿ. ಶರ್ಮಾ ಓಲಿ ಅವರು ‘ಜೆನ್–ಝಿ’ ಪ್ರತಿಭಟನೆಯಿಂದಾಗಿ ರಾಜೀನಾಮೆ ನೀಡಿದ್ದರು. ಆ ಬಳಿಕ ನೇಪಾಳದಲ್ಲಿ ಮಧ್ಯಂತರ ಸರ್ಕಾರ ಅಸ್ತಿತ್ವಕ್ಕೆ ಬಂದಿದ್ದು, 73 ವರ್ಷದ ಸುಶೀಲಾ ಅವರು ಪ್ರಧಾನಿಯಾಗಿ ಅಧಿಕಾರ ವಹಿಸಿಕೊಂಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>