<p><strong>ಹುವಾಲಿಯೆನ್ ಕೌಂಟಿ (ತೈವಾನ್): </strong>ತೈವಾನ್ ಪೂರ್ವ ಕರಾವಳಿಯಲ್ಲಿ ಶುಕ್ರವಾರ ಸಂಭವಿಸಿದ್ದ ಅಪಘಾತದಲ್ಲಿ ಮೃತಪಟ್ಟವರ ಸಂಖ್ಯೆ 51ಕ್ಕೆ ಏರಿಕೆಯಾಗಿದೆ. ಈ ದುರಂತದಲ್ಲಿ 146 ಮಂದಿಗೆ ಗಾಯಗಳಾಗಿವೆ ಎಂದು ರೈಲ್ವೆ ಇಲಾಖೆ ತಿಳಿಸಿದೆ.</p>.<p>ಟೊರೊಕೊ ಜಾರ್ಜ್ ಪ್ರದೇಶದಲ್ಲಿ ಶುಕ್ರವಾರ ರೈಲು ಸುರಂಗದಿಂದ ಹೊರ ಬರುತ್ತಿದ್ದಾಗ, ನಿರ್ಮಾಣ ಚಟುವಟಿಕೆಗಳಿಗೆ ನಿಯೋಜನೆಗೊಂಡಿದ್ದ ಲಾರಿಯೊಂದು ಸೇತುವೆಯಿಂದ ರೈಲ್ವೆ ಹಳಿಯ ಮೇಲೆ ಉರುಳಿತು. ಪರಿಣಾಮವಾಗಿ ರೈಲು ಹಳಿ ತಪ್ಪಿ ಅಪಘಾತಕ್ಕೀಡಾಯಿತು. ರೈಲಿನಲ್ಲಿ 494 ಪ್ರಯಾಣಿಕರಿದ್ದರು.</p>.<p>ಈ ಅಪಘಾತಕ್ಕೆ ಸಂಬಂಧಿಸಿದಂತೆ ತನಿಖಾಧಿಕಾರಿಗಳು ಲಾರಿ ಮಾಲೀಕನನ್ನು ವಿಚಾರಣೆಗೆ ಒಳಪಡಿಸಿದ್ದಾರೆ.</p>.<p>ಲಾರಿ ರೈಲು ಹಳಿ ಮೇಲೆ ಬಿದ್ದಾಗ, ಅದರೊಳಗೆ ಯಾರೂ ಇರಲಿಲ್ಲ. ಈ ಹಿನ್ನೆಲೆಯಲ್ಲಿ ತನಿಖಾಧಿಕಾರಿಗಳು ಲಾರಿ ಮಾಲೀಕನನ್ನು ಪ್ರಶ್ನೆಗೆ ಒಳಪಡಿಸಿದ್ದಾರೆ. ‘ಟ್ರಕ್ನ ತುರ್ತು ಬ್ರೇಕ್ ಸರಿಯಾಗಿ ಕೆಲಸ ಮಾಡುತ್ತಿರಲಿಲ್ಲ‘ ಎಂದು ಸರ್ಕಾರದ ವಿಪತ್ತು ಪರಿಹಾರ ಕೇಂದ್ರ ತಿಳಿಸಿದೆ.</p>.<p>ತೈವಾನ್ ಅಧ್ಯಕ್ಷ ತ್ಸಾಯ್ ಇಂಗ್–ವೆನ್ ಅವರು ಅಪಘಾತ ಸಂಭವಿಸಿರುವ ಸ್ಥಳಕ್ಕೆಶನಿವಾರ ಭೇಟಿ ನೀಡಲಿದ್ದಾರೆ.</p>.<p>ಅಪಘಾತ ಸಂಭವಿಸಿದ ರೈಲಿನ ಕೆಲವು ಬೋಗಿಗಳು ಸುರಂಗದಲ್ಲಿ ಸಿಲುಕಿದ್ದರಿಂದ, ರೈಲಿನೊಳಗೆ ಕುಳಿತಿದ್ದ ಪ್ರಯಾಣಿಕರು ತೀವ್ರವಾಗಿ ಗಾಯಗೊಂಡಿದ್ದರು. ಇನ್ನೂ ಕೆಲವು ಪ್ರಯಾಣಿಕರು ರೈಲಿನ ಕಿಟಕಿಗಳನ್ನು ಮುರಿದು ಹೊರಗೆ ಜಿಗಿದು, ರೈಲಿನ ಚಾವಣಿ ಮೇಲೆ ಏರಿ ಸುರಕ್ಷಿತವಾಗಿ ಹೊರ ಬಂದಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹುವಾಲಿಯೆನ್ ಕೌಂಟಿ (ತೈವಾನ್): </strong>ತೈವಾನ್ ಪೂರ್ವ ಕರಾವಳಿಯಲ್ಲಿ ಶುಕ್ರವಾರ ಸಂಭವಿಸಿದ್ದ ಅಪಘಾತದಲ್ಲಿ ಮೃತಪಟ್ಟವರ ಸಂಖ್ಯೆ 51ಕ್ಕೆ ಏರಿಕೆಯಾಗಿದೆ. ಈ ದುರಂತದಲ್ಲಿ 146 ಮಂದಿಗೆ ಗಾಯಗಳಾಗಿವೆ ಎಂದು ರೈಲ್ವೆ ಇಲಾಖೆ ತಿಳಿಸಿದೆ.</p>.<p>ಟೊರೊಕೊ ಜಾರ್ಜ್ ಪ್ರದೇಶದಲ್ಲಿ ಶುಕ್ರವಾರ ರೈಲು ಸುರಂಗದಿಂದ ಹೊರ ಬರುತ್ತಿದ್ದಾಗ, ನಿರ್ಮಾಣ ಚಟುವಟಿಕೆಗಳಿಗೆ ನಿಯೋಜನೆಗೊಂಡಿದ್ದ ಲಾರಿಯೊಂದು ಸೇತುವೆಯಿಂದ ರೈಲ್ವೆ ಹಳಿಯ ಮೇಲೆ ಉರುಳಿತು. ಪರಿಣಾಮವಾಗಿ ರೈಲು ಹಳಿ ತಪ್ಪಿ ಅಪಘಾತಕ್ಕೀಡಾಯಿತು. ರೈಲಿನಲ್ಲಿ 494 ಪ್ರಯಾಣಿಕರಿದ್ದರು.</p>.<p>ಈ ಅಪಘಾತಕ್ಕೆ ಸಂಬಂಧಿಸಿದಂತೆ ತನಿಖಾಧಿಕಾರಿಗಳು ಲಾರಿ ಮಾಲೀಕನನ್ನು ವಿಚಾರಣೆಗೆ ಒಳಪಡಿಸಿದ್ದಾರೆ.</p>.<p>ಲಾರಿ ರೈಲು ಹಳಿ ಮೇಲೆ ಬಿದ್ದಾಗ, ಅದರೊಳಗೆ ಯಾರೂ ಇರಲಿಲ್ಲ. ಈ ಹಿನ್ನೆಲೆಯಲ್ಲಿ ತನಿಖಾಧಿಕಾರಿಗಳು ಲಾರಿ ಮಾಲೀಕನನ್ನು ಪ್ರಶ್ನೆಗೆ ಒಳಪಡಿಸಿದ್ದಾರೆ. ‘ಟ್ರಕ್ನ ತುರ್ತು ಬ್ರೇಕ್ ಸರಿಯಾಗಿ ಕೆಲಸ ಮಾಡುತ್ತಿರಲಿಲ್ಲ‘ ಎಂದು ಸರ್ಕಾರದ ವಿಪತ್ತು ಪರಿಹಾರ ಕೇಂದ್ರ ತಿಳಿಸಿದೆ.</p>.<p>ತೈವಾನ್ ಅಧ್ಯಕ್ಷ ತ್ಸಾಯ್ ಇಂಗ್–ವೆನ್ ಅವರು ಅಪಘಾತ ಸಂಭವಿಸಿರುವ ಸ್ಥಳಕ್ಕೆಶನಿವಾರ ಭೇಟಿ ನೀಡಲಿದ್ದಾರೆ.</p>.<p>ಅಪಘಾತ ಸಂಭವಿಸಿದ ರೈಲಿನ ಕೆಲವು ಬೋಗಿಗಳು ಸುರಂಗದಲ್ಲಿ ಸಿಲುಕಿದ್ದರಿಂದ, ರೈಲಿನೊಳಗೆ ಕುಳಿತಿದ್ದ ಪ್ರಯಾಣಿಕರು ತೀವ್ರವಾಗಿ ಗಾಯಗೊಂಡಿದ್ದರು. ಇನ್ನೂ ಕೆಲವು ಪ್ರಯಾಣಿಕರು ರೈಲಿನ ಕಿಟಕಿಗಳನ್ನು ಮುರಿದು ಹೊರಗೆ ಜಿಗಿದು, ರೈಲಿನ ಚಾವಣಿ ಮೇಲೆ ಏರಿ ಸುರಕ್ಷಿತವಾಗಿ ಹೊರ ಬಂದಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>