ಉಭಯ ದೇಶಗಳ ನಡುವೆ ವೃದ್ಧಿಯಾಗುತ್ತಿರುವ ಸಂಬಂಧಕ್ಕೆ ಈ ಪತ್ರವೇ ಸಾಕ್ಷಿ ಎಂದು ಶ್ವೇತಭವನದ ಮಾಧ್ಯಮ ಕಾರ್ಯದರ್ಶಿ ಸರಾ ಸ್ಯಾಂಡರ್ಸ್ ಹೇಳಿದ್ದಾರೆ. ಎರಡೂ ದೇಶಗಳ ನಾಯಕರ ಸಭೆ ಹಾಗೂ ಅದರ ದಿನಾಂಕ ನಿಗದಿ ಮಾಡುವುದೇ ಪತ್ರದ ಆದ್ಯತೆಯ ವಿಷಯ ಎಂದು ಅವರು ತಿಳಿಸಿದ್ದಾರೆ. ಮಾತುಕತೆ ನಡೆಸುವುದರ ಪರವಾಗಿ ಇರುವುದಾಗಿ ಅವರು ಸ್ಪಷ್ಟಪಡಿಸಿದ್ದಾರೆ.