2009ರಲ್ಲಿ ಶ್ರೀಲಂಕಾ ಆಡಳಿತದ ಜೊತೆಗಿನ ಯುದ್ಧ ಕೊನೆಗೊಂಡ ನಂತರ ಜೈಲುಶಿಕ್ಷೆಗೊಳಗಾದ ಎಲ್ಟಿಟಿಇ ಸದಸ್ಯರನ್ನು ರಾಜಕೀಯ ಕೈದಿಗಳು ಎಂದು ಪರಿಗಣಿಸಲು ಸರ್ಕಾರ ನಿರಾಕರಿಸಿದೆ. ಕೆಲವರಿಗೆ ಅಧಿಕೃತವಾಗಿ ಶಿಕ್ಷೆ ವಿಧಿಸದೆ, ಭಯೋತ್ಪಾದನೆ ವಿರೋಧಿ ಕಾನೂನಿನಡಿ ಬಹಳ ಕಾಲದಿಂದಲೂ ಜೈಲಿನಲ್ಲಿ ಇರಿಸಲಾಗಿದೆ ಎಂಬುದು ತಮಿಳು ಸಮುದಾಯದ ಆರೋಪ.