<p>ಬೀಜಿಂಗ್ (ಪಿಟಿಐ): ತೀಸ್ತಾ ನದಿ ಪುನರುಜ್ಜೀವನ ಯೋಜನೆಯನ್ನು ಬೆಂಬಲಿಸುವಂತೆ ಹಾಗೂ ಈ ಯೋಜನೆಯಲ್ಲಿ ಭಾಗಿಯಾಗುವಂತೆ ಬಾಂಗ್ಲಾದೇಶವು ಚೀನಾಕ್ಕೆ ಮನವಿ ಮಾಡಿರುವುದು ಭಾರತದ ಕಳವಳಕ್ಕೆ ಕಾರಣವಾಗಿದೆ.</p>.<p>ಬಾಂಗ್ಲಾದೇಶದ ಪ್ರಧಾನಿ ತಾರಿಕ್ ರೆಹಮಾನ್ ಸದ್ಯ ಚೀನಾ ಪ್ರವಾಸದಲ್ಲಿದ್ದು, ತೀಸ್ತಾ ನದಿ ಸಮಗ್ರ ನಿರ್ವಹಣೆ ಮತ್ತು ಪುನರುಜ್ಜೀವನ ಯೋಜನೆಗೆ (ಟಿಆರ್ಸಿಎಂಆರ್ಪಿ) ಚೀನಾದ ಆರ್ಥಿಕ ನೆರವು ಕೋರಿದ್ದಾರೆ.</p>.<p>ಬಾಂಗ್ಲಾದೇಶದ ವಿದೇಶಾಂಗ ಸಚಿವ ಖಲೀಲುರ್ ರೆಹಮಾನ್ ಮತ್ತು ಚೀನಾದ ವಿದೇಶಾಂಗ ಸಚಿವ ವಾಂಗ್ ಯಿ ಅವರು ಬುಧವಾರ ಬೀಜಿಂಗ್ನಲ್ಲಿ ತೀಸ್ತಾ ನದಿ ಪುನರುಜ್ಜೀವನ ಯೋಜನೆ ಬಗ್ಗೆ ಮಾತುಕತೆ ನಡೆಸಿದ್ದಾರೆ ಎಂದು ಬಾಂಗ್ಲಾದೇಶದ ಸರ್ಕಾರಿ ಸ್ವಾಮ್ಯದ ಬಿಎಸ್ಎಸ್ ಸುದ್ದಿಸಂಸ್ಥೆ ವರದಿ ಮಾಡಿದೆ.</p>.<p>ಸಿಕ್ಕಿಂನಲ್ಲಿ ಹುಟ್ಟಿ, ಪಶ್ಚಿಮ ಬಂಗಾಳದ ಮೂಲಕ ಬಾಂಗ್ಲಾದತ್ತ ಹರಿದು ನಂತರ ಬ್ರಹ್ಮಪುತ್ರ ನದಿಯನ್ನು ಸೇರುವ ತೀಸ್ತಾ ನದಿಯನ್ನು ಸಂರಕ್ಷಿಸುವ ಯೋಜನೆ ಇದಾಗಿದೆ. ಆದರೆ, ಚೀನಾ ಈ ಯೋಜನೆಯನ್ನು ಅನುಷ್ಠಾನಗೊಳಿಸಿದರೆ ಅದು ದೇಶದ ಭದ್ರತೆಯ ದೃಷ್ಟಿಯಿಂದ ಒಳಿತಲ್ಲ ಹಾಗೂ ತೀಸ್ತಾ ನದಿ ನೀರು ಹಂಚಿಕೆಗೆ ಸಂಬಂಧಿಸಿದಂತೆ ನನೆಗುದಿಗೆ ಬಿದ್ದಿರುವ ಭಾರತ–ಬಾಂಗ್ಲಾ ಮಾತುಕತೆ ಮೇಲೂ ವ್ಯತಿರಿಕ್ತ ಪರಿಣಾಮ ಬೀರಲಿದೆ ಎನ್ನುವ ಕಳವಳ ಭಾರತದ್ದು.</p>.<p>ಖಲೀಲುರ್ ರೆಹಮಾನ್ ಜತೆಗೆ ಚೀನಾದ ವಿದೇಶಾಂಗ ಸಚಿವ ವಾಂಗ್ ಯಿ ನಡೆಸಿದ ಮಾತುಕತೆಯಲ್ಲಿ, ಬಾಂಗ್ಲಾದೇಶದ ಮೂಲಸೌಕರ್ಯ, ಸಾರಿಗೆ, ಉದ್ಯಮ ಕ್ಷೇತ್ರಗಳಲ್ಲಿ ದೀರ್ಘಾವಧಿ ಪಾಲುದಾರಿಕೆ– ಹೂಡಿಕೆಗೆ ಸಹಮತ ವ್ಯಕ್ತಪಡಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260508-51-1452951528</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಬೀಜಿಂಗ್ (ಪಿಟಿಐ): ತೀಸ್ತಾ ನದಿ ಪುನರುಜ್ಜೀವನ ಯೋಜನೆಯನ್ನು ಬೆಂಬಲಿಸುವಂತೆ ಹಾಗೂ ಈ ಯೋಜನೆಯಲ್ಲಿ ಭಾಗಿಯಾಗುವಂತೆ ಬಾಂಗ್ಲಾದೇಶವು ಚೀನಾಕ್ಕೆ ಮನವಿ ಮಾಡಿರುವುದು ಭಾರತದ ಕಳವಳಕ್ಕೆ ಕಾರಣವಾಗಿದೆ.</p>.<p>ಬಾಂಗ್ಲಾದೇಶದ ಪ್ರಧಾನಿ ತಾರಿಕ್ ರೆಹಮಾನ್ ಸದ್ಯ ಚೀನಾ ಪ್ರವಾಸದಲ್ಲಿದ್ದು, ತೀಸ್ತಾ ನದಿ ಸಮಗ್ರ ನಿರ್ವಹಣೆ ಮತ್ತು ಪುನರುಜ್ಜೀವನ ಯೋಜನೆಗೆ (ಟಿಆರ್ಸಿಎಂಆರ್ಪಿ) ಚೀನಾದ ಆರ್ಥಿಕ ನೆರವು ಕೋರಿದ್ದಾರೆ.</p>.<p>ಬಾಂಗ್ಲಾದೇಶದ ವಿದೇಶಾಂಗ ಸಚಿವ ಖಲೀಲುರ್ ರೆಹಮಾನ್ ಮತ್ತು ಚೀನಾದ ವಿದೇಶಾಂಗ ಸಚಿವ ವಾಂಗ್ ಯಿ ಅವರು ಬುಧವಾರ ಬೀಜಿಂಗ್ನಲ್ಲಿ ತೀಸ್ತಾ ನದಿ ಪುನರುಜ್ಜೀವನ ಯೋಜನೆ ಬಗ್ಗೆ ಮಾತುಕತೆ ನಡೆಸಿದ್ದಾರೆ ಎಂದು ಬಾಂಗ್ಲಾದೇಶದ ಸರ್ಕಾರಿ ಸ್ವಾಮ್ಯದ ಬಿಎಸ್ಎಸ್ ಸುದ್ದಿಸಂಸ್ಥೆ ವರದಿ ಮಾಡಿದೆ.</p>.<p>ಸಿಕ್ಕಿಂನಲ್ಲಿ ಹುಟ್ಟಿ, ಪಶ್ಚಿಮ ಬಂಗಾಳದ ಮೂಲಕ ಬಾಂಗ್ಲಾದತ್ತ ಹರಿದು ನಂತರ ಬ್ರಹ್ಮಪುತ್ರ ನದಿಯನ್ನು ಸೇರುವ ತೀಸ್ತಾ ನದಿಯನ್ನು ಸಂರಕ್ಷಿಸುವ ಯೋಜನೆ ಇದಾಗಿದೆ. ಆದರೆ, ಚೀನಾ ಈ ಯೋಜನೆಯನ್ನು ಅನುಷ್ಠಾನಗೊಳಿಸಿದರೆ ಅದು ದೇಶದ ಭದ್ರತೆಯ ದೃಷ್ಟಿಯಿಂದ ಒಳಿತಲ್ಲ ಹಾಗೂ ತೀಸ್ತಾ ನದಿ ನೀರು ಹಂಚಿಕೆಗೆ ಸಂಬಂಧಿಸಿದಂತೆ ನನೆಗುದಿಗೆ ಬಿದ್ದಿರುವ ಭಾರತ–ಬಾಂಗ್ಲಾ ಮಾತುಕತೆ ಮೇಲೂ ವ್ಯತಿರಿಕ್ತ ಪರಿಣಾಮ ಬೀರಲಿದೆ ಎನ್ನುವ ಕಳವಳ ಭಾರತದ್ದು.</p>.<p>ಖಲೀಲುರ್ ರೆಹಮಾನ್ ಜತೆಗೆ ಚೀನಾದ ವಿದೇಶಾಂಗ ಸಚಿವ ವಾಂಗ್ ಯಿ ನಡೆಸಿದ ಮಾತುಕತೆಯಲ್ಲಿ, ಬಾಂಗ್ಲಾದೇಶದ ಮೂಲಸೌಕರ್ಯ, ಸಾರಿಗೆ, ಉದ್ಯಮ ಕ್ಷೇತ್ರಗಳಲ್ಲಿ ದೀರ್ಘಾವಧಿ ಪಾಲುದಾರಿಕೆ– ಹೂಡಿಕೆಗೆ ಸಹಮತ ವ್ಯಕ್ತಪಡಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260508-51-1452951528</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>