<p><strong>ಬ್ಯಾಂಕಾಕ್:</strong> ಥಾಯ್ಲೆಂಡ್ ಮತ್ತು ಮ್ಯಾನ್ಮಾರ್ ದೇಶಗಳಲ್ಲಿ ಭೂಕಂಪ ಸಂಭವಿಸಿದ್ದು, ಮೃತರು ಮತ್ತು ಗಾಯಗೊಂಡವರ ಸಂಖ್ಯೆ ಕ್ಷಣ ಕ್ಷಣಕ್ಕೂ ಏರಿಕೆಯಾಗುತ್ತಿರುವುದು ಆತಂಕಕ್ಕೆ ಕಾರಣವಾಗಿದೆ.</p><p>ಭೂಕಂಪದಿಂದಾಗಿ ಮ್ಯಾನ್ಮಾರ್ನಲ್ಲಿ ಮೃತಪಟ್ಟವರ ಸಂಖ್ಯೆ 1,002ಕ್ಕೆ ಏರಿಕೆಯಾಗಿದ್ದು, ಸಾವಿರಾರು ಜನರು ಗಾಯಗೊಂಡಿದ್ದಾರೆ ಎಂದು ಸರ್ಕಾರ ತಿಳಿಸಿದೆ.</p><p>ಥಾಯ್ಲೆಂಡ್ ಮತ್ತು ಮ್ಯಾನ್ಮಾರ್ ದೇಶಗಳಲ್ಲಿ ಶುಕ್ರವಾರ 7.7ರಷ್ಟು ತೀವ್ರತೆಯ ಭೂಕಂಪನ ಸಂಭವಿಸಿದ್ದು, ಜನರನ್ನು ಬೆಚ್ಚಿಬೀಳಿಸಿದೆ. </p><p>‘ಭೂಕಂಪದಿಂದಾಗಿ ರಸ್ತೆಗಳು, ಸೇತುವೆಗಳು ಮತ್ತು ಕಟ್ಟಡಗಳಂತಹ ಮೂಲಸೌಕರ್ಯಗಳು ಹಾನಿಗೊಳಗಾಗಿದ್ದು, ಜನರ ಸಾವುನೋವು ಮತ್ತು ಗಾಯಾಳುಗಳ ಸಂಖ್ಯೆ ಏರಿಕೆಯಾಗುತ್ತಿದೆ. ಭೂಕಂಪ ಪೀಡಿತ ಪ್ರದೇಶಗಳಲ್ಲಿ ರಕ್ಷಣಾ ಕಾರ್ಯಾಚರಣೆ ನಡೆಸಲಾಗುತ್ತಿದೆ’ ಎಂದು ಸರ್ಕಾರ ತಿಳಿಸಿದೆ. </p><p>ಭೂಕಂಪ ಪೀಡಿತ ಥಾಯ್ಲೆಂಡ್ ಮತ್ತು ಮ್ಯಾನ್ಮಾರ್ ದೇಶಗಳಿಗೆ ಭಾರತ, ಚೀನಾ, ರಷ್ಯಾ, ಅಮೆರಿಕ ಸೇರಿದಂತೆ ಹಲವು ರಾಷ್ಟ್ರಗಳು ನೆರವು ನೀಡುವುದಾಗಿ ಘೋಷಿಸಿವೆ. </p><p>ಥಾಯ್ಲೆಂಡ್ ರಾಜಧಾನಿ ಬ್ಯಾಂಕಾಕ್ನಲ್ಲಿ ನಿರ್ಮಾಣ ಹಂತದ 30 ಮಹಡಿಯ ಸರ್ಕಾರಿ ಕಟ್ಟಡ ನೆಲಕ್ಕುರುಳಿದೆ. ಮ್ಯಾನ್ಮಾರ್ ಸರ್ಕಾರವು 6 ವಲಯಗಳಲ್ಲಿ ತುರ್ತುಸ್ಥಿತಿ ಘೋಷಿಸಿದೆ. ಮ್ಯಾನ್ಮಾರ್ನ 2ನೇ ಅತಿದೊಡ್ಡ ನಗರವಾಗಿರುವ ಮ್ಯಾಂಡಲೆ ಭೂಕಂಪದ ಕೇಂದ್ರಬಿಂದುವಾಗಿದೆ. </p><p>ಅಮೆರಿಕದ ಭೂವಿಜ್ಞಾನ ಕೇಂದ್ರದ ಪ್ರಕಾರ, ಕೇಂದ್ರ ಬಿಂದುವಿನಲ್ಲಿ ಸುಮಾರು 10 ಕಿ.ಮೀ ಆಳದಲ್ಲಿ ಭೂಕಂಪನವಾಗಿದೆ. ಅದರ ತೀವ್ರತೆಯು ಕೇಂದ್ರಬಿಂದುವಿನಿಂದ 10 ಕಿ.ಮೀ ಪರಿಧಿಯಲ್ಲಿ ವ್ಯಕ್ತವಾಗಿದೆ ಎಂದು ಅಂದಾಜು ಮಾಡಿದೆ.</p><p>ಮೊದಲಿಗೆ 7.7 ತೀವ್ರತೆಯ ಭೂಕಂಪನವಾಗಿದ್ದು, 11 ನಿಮಿಷದ ತರುವಾಯ ಮತ್ತೆ 6.4 ತೀವ್ರತೆಯ ಭೂಕಂಪ ಸಂಭವಿಸಿರುವುದು ದಾಖಲಾಗಿದೆ. 7.7 ತೀವ್ರತೆಯು ಹೆಚ್ಚು ಪ್ರಬಲವಾದುದು ಎಂದು ಕೇಂದ್ರವು ವಿಶ್ಲೇಷಿಸಿದೆ. </p><p>ಭೂಕಂಪದ ಅನುಭವವಾದಂತೆ ಬ್ಯಾಂಕಾಕ್ ನಗರದಲ್ಲಿ ಎಚ್ಚರಿಕೆ ಗಂಟೆಯನ್ನು ಮೊಳಗಿಸಲಾಯಿತು. ಬ್ಯಾಂಕಾಕ್ನ ಒಟ್ಟು ಜನಸಂಖ್ಯೆ 1.7 ಕೋಟಿಗೂ ಹೆಚ್ಚಿದ್ದು, ಹೆಚ್ಚಿನವರು ಬಹುಮಹಡಿ ವಸತಿ ಸಂಕೀರ್ಣಗಳಲ್ಲಿಯೇ ವಾಸವಿದ್ದಾರೆ.</p>.ಭೂಕಂಪ ಪೀಡಿತ ಮ್ಯಾನ್ಮಾರ್ಗೆ 15 ಟನ್ ಪರಿಹಾರ ಸಾಮಗ್ರಿಗಳನ್ನು ಕಳುಹಿಸಿದ ಭಾರತ.ಥಾಯ್ಲೆಂಡ್ನಲ್ಲಿ ಭೂಕಂಪ: ಬ್ಯಾಂಕಾಕ್ ಪ್ರವಾಸದಲ್ಲಿದ್ದ ಹಾವೇರಿಯ ಐವರು ಸುರಕ್ಷಿತ.Earthquake: ಮ್ಯಾನ್ಮಾರ್, ಥಾಯ್ಲೆಂಡ್ ತತ್ತರ.ಮ್ಯಾನ್ಮಾರ್, ಥಾಯ್ಲೆಂಡ್ ಭೂಕಂಪ: ನೆರವಿಗೆ ಭಾರತ ಸಿದ್ಧ; ಪ್ರಧಾನಿ ಮೋದಿ ಅಭಯ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬ್ಯಾಂಕಾಕ್:</strong> ಥಾಯ್ಲೆಂಡ್ ಮತ್ತು ಮ್ಯಾನ್ಮಾರ್ ದೇಶಗಳಲ್ಲಿ ಭೂಕಂಪ ಸಂಭವಿಸಿದ್ದು, ಮೃತರು ಮತ್ತು ಗಾಯಗೊಂಡವರ ಸಂಖ್ಯೆ ಕ್ಷಣ ಕ್ಷಣಕ್ಕೂ ಏರಿಕೆಯಾಗುತ್ತಿರುವುದು ಆತಂಕಕ್ಕೆ ಕಾರಣವಾಗಿದೆ.</p><p>ಭೂಕಂಪದಿಂದಾಗಿ ಮ್ಯಾನ್ಮಾರ್ನಲ್ಲಿ ಮೃತಪಟ್ಟವರ ಸಂಖ್ಯೆ 1,002ಕ್ಕೆ ಏರಿಕೆಯಾಗಿದ್ದು, ಸಾವಿರಾರು ಜನರು ಗಾಯಗೊಂಡಿದ್ದಾರೆ ಎಂದು ಸರ್ಕಾರ ತಿಳಿಸಿದೆ.</p><p>ಥಾಯ್ಲೆಂಡ್ ಮತ್ತು ಮ್ಯಾನ್ಮಾರ್ ದೇಶಗಳಲ್ಲಿ ಶುಕ್ರವಾರ 7.7ರಷ್ಟು ತೀವ್ರತೆಯ ಭೂಕಂಪನ ಸಂಭವಿಸಿದ್ದು, ಜನರನ್ನು ಬೆಚ್ಚಿಬೀಳಿಸಿದೆ. </p><p>‘ಭೂಕಂಪದಿಂದಾಗಿ ರಸ್ತೆಗಳು, ಸೇತುವೆಗಳು ಮತ್ತು ಕಟ್ಟಡಗಳಂತಹ ಮೂಲಸೌಕರ್ಯಗಳು ಹಾನಿಗೊಳಗಾಗಿದ್ದು, ಜನರ ಸಾವುನೋವು ಮತ್ತು ಗಾಯಾಳುಗಳ ಸಂಖ್ಯೆ ಏರಿಕೆಯಾಗುತ್ತಿದೆ. ಭೂಕಂಪ ಪೀಡಿತ ಪ್ರದೇಶಗಳಲ್ಲಿ ರಕ್ಷಣಾ ಕಾರ್ಯಾಚರಣೆ ನಡೆಸಲಾಗುತ್ತಿದೆ’ ಎಂದು ಸರ್ಕಾರ ತಿಳಿಸಿದೆ. </p><p>ಭೂಕಂಪ ಪೀಡಿತ ಥಾಯ್ಲೆಂಡ್ ಮತ್ತು ಮ್ಯಾನ್ಮಾರ್ ದೇಶಗಳಿಗೆ ಭಾರತ, ಚೀನಾ, ರಷ್ಯಾ, ಅಮೆರಿಕ ಸೇರಿದಂತೆ ಹಲವು ರಾಷ್ಟ್ರಗಳು ನೆರವು ನೀಡುವುದಾಗಿ ಘೋಷಿಸಿವೆ. </p><p>ಥಾಯ್ಲೆಂಡ್ ರಾಜಧಾನಿ ಬ್ಯಾಂಕಾಕ್ನಲ್ಲಿ ನಿರ್ಮಾಣ ಹಂತದ 30 ಮಹಡಿಯ ಸರ್ಕಾರಿ ಕಟ್ಟಡ ನೆಲಕ್ಕುರುಳಿದೆ. ಮ್ಯಾನ್ಮಾರ್ ಸರ್ಕಾರವು 6 ವಲಯಗಳಲ್ಲಿ ತುರ್ತುಸ್ಥಿತಿ ಘೋಷಿಸಿದೆ. ಮ್ಯಾನ್ಮಾರ್ನ 2ನೇ ಅತಿದೊಡ್ಡ ನಗರವಾಗಿರುವ ಮ್ಯಾಂಡಲೆ ಭೂಕಂಪದ ಕೇಂದ್ರಬಿಂದುವಾಗಿದೆ. </p><p>ಅಮೆರಿಕದ ಭೂವಿಜ್ಞಾನ ಕೇಂದ್ರದ ಪ್ರಕಾರ, ಕೇಂದ್ರ ಬಿಂದುವಿನಲ್ಲಿ ಸುಮಾರು 10 ಕಿ.ಮೀ ಆಳದಲ್ಲಿ ಭೂಕಂಪನವಾಗಿದೆ. ಅದರ ತೀವ್ರತೆಯು ಕೇಂದ್ರಬಿಂದುವಿನಿಂದ 10 ಕಿ.ಮೀ ಪರಿಧಿಯಲ್ಲಿ ವ್ಯಕ್ತವಾಗಿದೆ ಎಂದು ಅಂದಾಜು ಮಾಡಿದೆ.</p><p>ಮೊದಲಿಗೆ 7.7 ತೀವ್ರತೆಯ ಭೂಕಂಪನವಾಗಿದ್ದು, 11 ನಿಮಿಷದ ತರುವಾಯ ಮತ್ತೆ 6.4 ತೀವ್ರತೆಯ ಭೂಕಂಪ ಸಂಭವಿಸಿರುವುದು ದಾಖಲಾಗಿದೆ. 7.7 ತೀವ್ರತೆಯು ಹೆಚ್ಚು ಪ್ರಬಲವಾದುದು ಎಂದು ಕೇಂದ್ರವು ವಿಶ್ಲೇಷಿಸಿದೆ. </p><p>ಭೂಕಂಪದ ಅನುಭವವಾದಂತೆ ಬ್ಯಾಂಕಾಕ್ ನಗರದಲ್ಲಿ ಎಚ್ಚರಿಕೆ ಗಂಟೆಯನ್ನು ಮೊಳಗಿಸಲಾಯಿತು. ಬ್ಯಾಂಕಾಕ್ನ ಒಟ್ಟು ಜನಸಂಖ್ಯೆ 1.7 ಕೋಟಿಗೂ ಹೆಚ್ಚಿದ್ದು, ಹೆಚ್ಚಿನವರು ಬಹುಮಹಡಿ ವಸತಿ ಸಂಕೀರ್ಣಗಳಲ್ಲಿಯೇ ವಾಸವಿದ್ದಾರೆ.</p>.ಭೂಕಂಪ ಪೀಡಿತ ಮ್ಯಾನ್ಮಾರ್ಗೆ 15 ಟನ್ ಪರಿಹಾರ ಸಾಮಗ್ರಿಗಳನ್ನು ಕಳುಹಿಸಿದ ಭಾರತ.ಥಾಯ್ಲೆಂಡ್ನಲ್ಲಿ ಭೂಕಂಪ: ಬ್ಯಾಂಕಾಕ್ ಪ್ರವಾಸದಲ್ಲಿದ್ದ ಹಾವೇರಿಯ ಐವರು ಸುರಕ್ಷಿತ.Earthquake: ಮ್ಯಾನ್ಮಾರ್, ಥಾಯ್ಲೆಂಡ್ ತತ್ತರ.ಮ್ಯಾನ್ಮಾರ್, ಥಾಯ್ಲೆಂಡ್ ಭೂಕಂಪ: ನೆರವಿಗೆ ಭಾರತ ಸಿದ್ಧ; ಪ್ರಧಾನಿ ಮೋದಿ ಅಭಯ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>