<p><strong>ಬ್ಯಾಂಕಾಕ್</strong>: ಐದು ತಿಂಗಳಿಗೂ ಹೆಚ್ಚು ಕಾಲ ಬಂಧನದಲ್ಲಿದ್ದ ಕಾಂಬೋಡಿಯಾದ 18 ಯುದ್ಧ ಕೈದಿಗಳನ್ನು ಥಾಯ್ಲೆಂಡ್ ಬುಧವಾರ ಬಿಡುಗಡೆ ಮಾಡಿತು. ಗಡಿ ಸಂಘರ್ಷವನ್ನು ಕೊನೆಗೊಳಿಸಲು ಉಭಯ ದೇಶಗಳು ಕದನ ವಿರಾಮ ಒಪ್ಪಂದಕ್ಕೆ ಸಹಿ ಹಾಕಿವೆ. </p>.<p>ಥಾಯ್ಲೆಂಡ್ನ ಛಾಂಥಬುರಿ ಹಾಗೂ ಕಾಂಬೋಡಿಯಾದ ಪೈಲಿನ್ ಪ್ರಾಂತ್ಯಗಳ ಗಡಿಯಲ್ಲಿನ ಚೆಕ್ ಪಾಯಿಂಟ್ನಲ್ಲಿ ಎರಡೂ ದೇಶಗಳ ರಕ್ಷಣಾ ಸಚಿವರು ಕದನ ವಿರಾಮ ಒಪ್ಪಂದಕ್ಕೆ ಸಹಿ ಹಾಕಿದರು. </p>.<p>‘ಕಾಂಬೋಡಿಯಾದ 18 ಸೈನಿಕರನ್ನು ಸ್ವದೇಶಕ್ಕೆ ವಾಪಸ್ ಕಳುಹಿಸುವುದು, ಸದ್ಭಾವನೆ, ವಿಶ್ವಾಸ ಹಾಗೂ ಅಂತರರಾಷ್ಟ್ರೀಯ ಮಾನವೀಯ ತತ್ವಗಳಿಗೆ ಬದ್ಧವಾಗಿದೆ. ಉಭಯ ದೇಶಗಳ ನಡುವೆ ಶಾಂತಿ ಮತ್ತು ಸ್ಥಿರತೆಯನ್ನು ಸೃಷ್ಟಿಸುತ್ತದೆ’ ಎಂದು ಥಾಯ್ಲೆಂಡ್ನ ವಿದೇಶಾಂಗ ಸಚಿವಾಲಯ ತಿಳಿಸಿದೆ. </p>.<p>ಮೇ 28ರಂದು ‘ಎಮರಾಲ್ಡ್ ಟ್ರಯಾಂಗಲ್’ ಎಂಬ ಪ್ರದೇಶದಲ್ಲಿ ಎರಡೂ ಸೇನೆಗಳ ನಡುವೆ ಸಂಘರ್ಷ ನಡೆದಿತ್ತು. ಆ ಪ್ರದೇಶದ ಒಡೆತನದ ಬಗ್ಗೆ ಎರಡೂ ರಾಷ್ಟ್ರಗಳು ಹಕ್ಕು ಸಾಧಿಸುತ್ತಿವೆ. ಸಂಘರ್ಷದಲ್ಲಿ ಕಾಂಬೋಡಿಯಾದ ಒಬ್ಬ ಸೈನಿಕ ಹತನಾಗಿದ್ದ. ಬಳಿಕ ಉದ್ವಿಗ್ನ ಪರಿಸ್ಥಿತಿ ಉಂಟಾಗಿತ್ತು. ಕಳೆದ ಜುಲೈನಲ್ಲಿ ಎರಡೂ ದೇಶಗಳ ನಡುವೆ ಐದು ದಿನ ತೀವ್ರ ಸಂಘರ್ಷ ನಡೆದಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬ್ಯಾಂಕಾಕ್</strong>: ಐದು ತಿಂಗಳಿಗೂ ಹೆಚ್ಚು ಕಾಲ ಬಂಧನದಲ್ಲಿದ್ದ ಕಾಂಬೋಡಿಯಾದ 18 ಯುದ್ಧ ಕೈದಿಗಳನ್ನು ಥಾಯ್ಲೆಂಡ್ ಬುಧವಾರ ಬಿಡುಗಡೆ ಮಾಡಿತು. ಗಡಿ ಸಂಘರ್ಷವನ್ನು ಕೊನೆಗೊಳಿಸಲು ಉಭಯ ದೇಶಗಳು ಕದನ ವಿರಾಮ ಒಪ್ಪಂದಕ್ಕೆ ಸಹಿ ಹಾಕಿವೆ. </p>.<p>ಥಾಯ್ಲೆಂಡ್ನ ಛಾಂಥಬುರಿ ಹಾಗೂ ಕಾಂಬೋಡಿಯಾದ ಪೈಲಿನ್ ಪ್ರಾಂತ್ಯಗಳ ಗಡಿಯಲ್ಲಿನ ಚೆಕ್ ಪಾಯಿಂಟ್ನಲ್ಲಿ ಎರಡೂ ದೇಶಗಳ ರಕ್ಷಣಾ ಸಚಿವರು ಕದನ ವಿರಾಮ ಒಪ್ಪಂದಕ್ಕೆ ಸಹಿ ಹಾಕಿದರು. </p>.<p>‘ಕಾಂಬೋಡಿಯಾದ 18 ಸೈನಿಕರನ್ನು ಸ್ವದೇಶಕ್ಕೆ ವಾಪಸ್ ಕಳುಹಿಸುವುದು, ಸದ್ಭಾವನೆ, ವಿಶ್ವಾಸ ಹಾಗೂ ಅಂತರರಾಷ್ಟ್ರೀಯ ಮಾನವೀಯ ತತ್ವಗಳಿಗೆ ಬದ್ಧವಾಗಿದೆ. ಉಭಯ ದೇಶಗಳ ನಡುವೆ ಶಾಂತಿ ಮತ್ತು ಸ್ಥಿರತೆಯನ್ನು ಸೃಷ್ಟಿಸುತ್ತದೆ’ ಎಂದು ಥಾಯ್ಲೆಂಡ್ನ ವಿದೇಶಾಂಗ ಸಚಿವಾಲಯ ತಿಳಿಸಿದೆ. </p>.<p>ಮೇ 28ರಂದು ‘ಎಮರಾಲ್ಡ್ ಟ್ರಯಾಂಗಲ್’ ಎಂಬ ಪ್ರದೇಶದಲ್ಲಿ ಎರಡೂ ಸೇನೆಗಳ ನಡುವೆ ಸಂಘರ್ಷ ನಡೆದಿತ್ತು. ಆ ಪ್ರದೇಶದ ಒಡೆತನದ ಬಗ್ಗೆ ಎರಡೂ ರಾಷ್ಟ್ರಗಳು ಹಕ್ಕು ಸಾಧಿಸುತ್ತಿವೆ. ಸಂಘರ್ಷದಲ್ಲಿ ಕಾಂಬೋಡಿಯಾದ ಒಬ್ಬ ಸೈನಿಕ ಹತನಾಗಿದ್ದ. ಬಳಿಕ ಉದ್ವಿಗ್ನ ಪರಿಸ್ಥಿತಿ ಉಂಟಾಗಿತ್ತು. ಕಳೆದ ಜುಲೈನಲ್ಲಿ ಎರಡೂ ದೇಶಗಳ ನಡುವೆ ಐದು ದಿನ ತೀವ್ರ ಸಂಘರ್ಷ ನಡೆದಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>