<p><strong>ಕೊಲಂಬೊ:</strong> ತನ್ನ ಜಲಪ್ರದೇಶದಲ್ಲಿ ಮೀನುಗಾರಿಕೆ ಮಾಡುತ್ತಿದ್ದ ಎಂಟು ಭಾರತೀಯ ಮೀನುಗಾರರನ್ನು ಬಂಧಿಸಿದ್ದಾಗಿ ಶ್ರೀಲಂಕಾ ಜಲಸೇನೆ ಭಾನುವಾರ ಹೇಳಿದೆ. ಅಲ್ಲದೆ ಅವರಿಂದ ಎರಡು ದೋಣಿಗಳನ್ನು ಜಪ್ತಿ ಮಾಡಿದ್ದಾಗಿ ಮಾಹಿತಿ ನೀಡಿದೆ.</p><p>ಮನ್ನಾರ್ನ ಉತ್ತರ ಭಾಗದಲ್ಲಿ ಶನಿವಾರ ನಡೆಸಿದ ವಿಶೇಷ ಕಾರ್ಯಾಚರಣೆ ವೇಳೆ ಬಂಧಿಸಲಾಗಿದೆ ಎಂದು ಜಲಸೇನೆಯ ಪತ್ರಿಕಾ ಪ್ರಕಟಣೆಯಲ್ಲಿ ಹೇಳಲಾಗಿದೆ.</p>.ಶ್ರೀಲಂಕಾ: ದೋಣಿ ತಂಗುದಾಣ ಅಭಿವೃದ್ಧಿಗೆ ಭಾರತ ₹8 ಕೋಟಿ ನೆರವು.<p>ಇದರೊಂದಿಗೆ ಒಟ್ಟು 18 ಭಾರತೀಯ ಮೀನುಗಾರರನ್ನು ಬಂಧಿಸಿದಂತಾಗಿದೆ. ಜಪ್ತಿ ಮಾಡಿದ ದೋಣಿಗಳ ಸಂಖ್ಯೆ 3ಕ್ಕೆ ಏರಿಕೆಯಾಗಿದೆ ಎಂದು ಪ್ರಕಟಣೆ ತಿಳಿಸಿದೆ.</p><p>‘ಶ್ರೀಲಂಕಾದ ಜಲ ಪ್ರದೇಶದಲ್ಲಿ ಅಕ್ರಮವಾಗಿ ಮೀನುಗಾರಿಕೆ ಮಾಡುತ್ತಿದ್ದ ಭಾರತದ ಮೀನುಗಾರಿಕಾ ದೋಣಿಗಳನ್ನು ಪತ್ತೆ ಮಾಡಲಾಯಿತು. ಕಾರ್ಯಾಚರಣೆಯಲ್ಲಿ 2 ಭಾರತೀಯ ಮೀನುಗಾರಿಕಾ ಬೋಟ್ಗಳನ್ನು ಜಪ್ತಿ ಮಾಡಿ 8 ಭಾರತೀಯ ಮೀನುಗಾರರನ್ನು ಬಂಧಿಸಲಾಗಿದೆ’ ಎಂದು ಪ್ರಕಟಣೆಯಲ್ಲಿ ಉಲ್ಲೇಖವಿದೆ.</p>.ಶ್ರೀಲಂಕಾ: ಮಾನವ ಹಕ್ಕುಗಳ ಆಯೋಗದ ಅಧ್ಯಕ್ಷರ ನಿರಾಶ್ರಿತರ ಭೇಟಿಗೆ ನಿರಾಕರಣೆ.<p>ಬಂಧಿತ ಮೀನುಗಾರರು ಹಾಗೂ ಅವರ ದೋಣಿಗಳನ್ನು ಇರಾನ್ವಟಿವು ದ್ವೀಪಕ್ಕೆ ಕರೆತರಲಾಗಿದ್ದು, ಮುಂದಿನ ಕಾನೂನು ಪ್ರಕ್ರಿಯೆಗಳಿಗೆ ಅವರನ್ನು ಕಿಲಿನೊಚ್ಚಿಯ ಸಹಾಯಕ ಮೀನುಗಾರಿಕೆ ನಿರ್ದೇಶನಾಲಯಕ್ಕೆ ಹಸ್ತಾಂತರಿಸಲಾಗುವುದು ಎಂದು ಅದು ಹೇಳಿದೆ.</p> .ಶ್ರೀಲಂಕಾ: ಅಭಿವೃದ್ಧಿ ಚಟುವಟಿಕೆಗಳಿಗಾಗಿ ಭಾರತದಿಂದ ₹230 ಕೋಟಿ ನೆರವು.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೊಲಂಬೊ:</strong> ತನ್ನ ಜಲಪ್ರದೇಶದಲ್ಲಿ ಮೀನುಗಾರಿಕೆ ಮಾಡುತ್ತಿದ್ದ ಎಂಟು ಭಾರತೀಯ ಮೀನುಗಾರರನ್ನು ಬಂಧಿಸಿದ್ದಾಗಿ ಶ್ರೀಲಂಕಾ ಜಲಸೇನೆ ಭಾನುವಾರ ಹೇಳಿದೆ. ಅಲ್ಲದೆ ಅವರಿಂದ ಎರಡು ದೋಣಿಗಳನ್ನು ಜಪ್ತಿ ಮಾಡಿದ್ದಾಗಿ ಮಾಹಿತಿ ನೀಡಿದೆ.</p><p>ಮನ್ನಾರ್ನ ಉತ್ತರ ಭಾಗದಲ್ಲಿ ಶನಿವಾರ ನಡೆಸಿದ ವಿಶೇಷ ಕಾರ್ಯಾಚರಣೆ ವೇಳೆ ಬಂಧಿಸಲಾಗಿದೆ ಎಂದು ಜಲಸೇನೆಯ ಪತ್ರಿಕಾ ಪ್ರಕಟಣೆಯಲ್ಲಿ ಹೇಳಲಾಗಿದೆ.</p>.ಶ್ರೀಲಂಕಾ: ದೋಣಿ ತಂಗುದಾಣ ಅಭಿವೃದ್ಧಿಗೆ ಭಾರತ ₹8 ಕೋಟಿ ನೆರವು.<p>ಇದರೊಂದಿಗೆ ಒಟ್ಟು 18 ಭಾರತೀಯ ಮೀನುಗಾರರನ್ನು ಬಂಧಿಸಿದಂತಾಗಿದೆ. ಜಪ್ತಿ ಮಾಡಿದ ದೋಣಿಗಳ ಸಂಖ್ಯೆ 3ಕ್ಕೆ ಏರಿಕೆಯಾಗಿದೆ ಎಂದು ಪ್ರಕಟಣೆ ತಿಳಿಸಿದೆ.</p><p>‘ಶ್ರೀಲಂಕಾದ ಜಲ ಪ್ರದೇಶದಲ್ಲಿ ಅಕ್ರಮವಾಗಿ ಮೀನುಗಾರಿಕೆ ಮಾಡುತ್ತಿದ್ದ ಭಾರತದ ಮೀನುಗಾರಿಕಾ ದೋಣಿಗಳನ್ನು ಪತ್ತೆ ಮಾಡಲಾಯಿತು. ಕಾರ್ಯಾಚರಣೆಯಲ್ಲಿ 2 ಭಾರತೀಯ ಮೀನುಗಾರಿಕಾ ಬೋಟ್ಗಳನ್ನು ಜಪ್ತಿ ಮಾಡಿ 8 ಭಾರತೀಯ ಮೀನುಗಾರರನ್ನು ಬಂಧಿಸಲಾಗಿದೆ’ ಎಂದು ಪ್ರಕಟಣೆಯಲ್ಲಿ ಉಲ್ಲೇಖವಿದೆ.</p>.ಶ್ರೀಲಂಕಾ: ಮಾನವ ಹಕ್ಕುಗಳ ಆಯೋಗದ ಅಧ್ಯಕ್ಷರ ನಿರಾಶ್ರಿತರ ಭೇಟಿಗೆ ನಿರಾಕರಣೆ.<p>ಬಂಧಿತ ಮೀನುಗಾರರು ಹಾಗೂ ಅವರ ದೋಣಿಗಳನ್ನು ಇರಾನ್ವಟಿವು ದ್ವೀಪಕ್ಕೆ ಕರೆತರಲಾಗಿದ್ದು, ಮುಂದಿನ ಕಾನೂನು ಪ್ರಕ್ರಿಯೆಗಳಿಗೆ ಅವರನ್ನು ಕಿಲಿನೊಚ್ಚಿಯ ಸಹಾಯಕ ಮೀನುಗಾರಿಕೆ ನಿರ್ದೇಶನಾಲಯಕ್ಕೆ ಹಸ್ತಾಂತರಿಸಲಾಗುವುದು ಎಂದು ಅದು ಹೇಳಿದೆ.</p> .ಶ್ರೀಲಂಕಾ: ಅಭಿವೃದ್ಧಿ ಚಟುವಟಿಕೆಗಳಿಗಾಗಿ ಭಾರತದಿಂದ ₹230 ಕೋಟಿ ನೆರವು.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>