<p class="title"><strong>ಕೇಂಬ್ರಿಡ್ಜ್, ಇಂಗ್ಲೆಂಡ್:</strong> ಭಾರತದ ಅಭಿವ್ಯಕ್ತಿ ಕ್ಷೇತ್ರಗಳಾದ ಸಂಸತ್ತು, ಚುನಾವಣಾ ವ್ಯವಸ್ಥೆ ಹಾಗೂ ಪ್ರಜಾಪ್ರಭುತ್ವದ ಮೂಲ ರಚನೆಯ ಮೇಲೆ ವ್ಯವಸ್ಥಿತ ದಾಳಿ ನಡೆಯುತ್ತಿದೆ. ಇದರಿಂದ ಈ ಕ್ಷೇತ್ರಗಳಲ್ಲಿ ದಿವ್ಯ ಮೌನ ಆವರಿಸಿದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಆರೋಪಿಸಿದ್ದಾರೆ.</p>.<p class="title">ಕೇಂಬ್ರಿಡ್ಜ್ ವಿಶ್ವವಿದ್ಯಾಲಯದ ಕಾರ್ಪಸ್ ಕ್ರಿಸ್ಟಿ ಕಾಲೇಜಿನಲ್ಲಿ ಆಯೋಜಿಸಲಾಗಿದ್ದ ‘ಇಂಡಿಯಾ ಅಟ್ 75’ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದ ರಾಹುಲ್, ‘ಭಾರತವು ಮಾತನಾಡಿದಾಗ ಜೀವಂತವಾಗುತ್ತದೆ. ಆದರೆ ದೇಶ ಮೌನವಾದರೆ ಭಾರತವೇ ಸಾಯುತ್ತದೆ’ ಎಂದು ಹೇಳಿದರು.</p>.<p class="title">ಭಾರತವು ಒಂದು ರಾಷ್ಟ್ರವಾಗಿರುವ ಬದಲು ‘ರಾಜ್ಯಗಳ ಒಕ್ಕೂಟ’ವಾಗಿದೆ ಎಂದು ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ ರಾಹುಲ್, ‘ಈ ಪದವು ಪ್ರತಿಯೊಂದು ರಾಜ್ಯದ ಜನರಿಗೆ ಸುಂದರವಾದ ಕಲ್ಪನೆಯನ್ನು ನೀಡುತ್ತದೆ’ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p class="title"><strong>ಕೇಂಬ್ರಿಡ್ಜ್, ಇಂಗ್ಲೆಂಡ್:</strong> ಭಾರತದ ಅಭಿವ್ಯಕ್ತಿ ಕ್ಷೇತ್ರಗಳಾದ ಸಂಸತ್ತು, ಚುನಾವಣಾ ವ್ಯವಸ್ಥೆ ಹಾಗೂ ಪ್ರಜಾಪ್ರಭುತ್ವದ ಮೂಲ ರಚನೆಯ ಮೇಲೆ ವ್ಯವಸ್ಥಿತ ದಾಳಿ ನಡೆಯುತ್ತಿದೆ. ಇದರಿಂದ ಈ ಕ್ಷೇತ್ರಗಳಲ್ಲಿ ದಿವ್ಯ ಮೌನ ಆವರಿಸಿದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಆರೋಪಿಸಿದ್ದಾರೆ.</p>.<p class="title">ಕೇಂಬ್ರಿಡ್ಜ್ ವಿಶ್ವವಿದ್ಯಾಲಯದ ಕಾರ್ಪಸ್ ಕ್ರಿಸ್ಟಿ ಕಾಲೇಜಿನಲ್ಲಿ ಆಯೋಜಿಸಲಾಗಿದ್ದ ‘ಇಂಡಿಯಾ ಅಟ್ 75’ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದ ರಾಹುಲ್, ‘ಭಾರತವು ಮಾತನಾಡಿದಾಗ ಜೀವಂತವಾಗುತ್ತದೆ. ಆದರೆ ದೇಶ ಮೌನವಾದರೆ ಭಾರತವೇ ಸಾಯುತ್ತದೆ’ ಎಂದು ಹೇಳಿದರು.</p>.<p class="title">ಭಾರತವು ಒಂದು ರಾಷ್ಟ್ರವಾಗಿರುವ ಬದಲು ‘ರಾಜ್ಯಗಳ ಒಕ್ಕೂಟ’ವಾಗಿದೆ ಎಂದು ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ ರಾಹುಲ್, ‘ಈ ಪದವು ಪ್ರತಿಯೊಂದು ರಾಜ್ಯದ ಜನರಿಗೆ ಸುಂದರವಾದ ಕಲ್ಪನೆಯನ್ನು ನೀಡುತ್ತದೆ’ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>