<p><strong>ಕರಾಚಿ:</strong> ಸಿಂಧ್ ಪ್ರಾಂತ್ಯದಲ್ಲಿ ಸಂಭವಿಸಿದ ಎಕ್ಸ್ಪ್ರೆಸ್ ರೈಲು ಅಪಘಾತದಲ್ಲಿ, ಸಾವಿನ ಸಂಖ್ಯೆ 30 ಕ್ಕೆ ಏರಿಕೆಯಾಗಿದೆ. 80 ಜನ ಗಾಯಗೊಂಡಿದ್ದಾರೆ ಎಂದು ರೈಲ್ವೆ ಸಚಿವ ಸಾದ್ ರಫೀಕ್ ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ.</p><p>ಕರಾಚಿಯಿಂದ ರಾವಲ್ಪಿಂಡಿಗೆ ಹೊರಟಿದ್ದ ಹಜಾರಾ ಎಕ್ಸ್ಪ್ರೆಸ್ ರೈಲು ನವಾಬ್ ಶಾ ಜಿಲ್ಲೆಯ ಬಳಿ ಹಳಿತಪ್ಪಿದೆ. ಕರಾಚಿಯಿಂದ 275 ಕಿ.ಮೀ ದೂರದಲ್ಲಿ ರೈಲು ಅಪಘಾತಕ್ಕೀಡಾಗಿದೆ. </p><p>ರೈಲ್ವೆ ಅಧಿಕಾರಿಗಳು ಮತ್ತು ರಕ್ಷಣಾ ಸಿಬ್ಬಂದಿ ತಂಡ ರಕ್ಷಣಾ ಕಾರ್ಯದಲ್ಲಿ ತೊಡಗಿವೆ, ಗಾಯಾಳುಗಳಿಗೆ ಹತ್ತಿರದ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.</p><p>ಸುಮಾರು ಒಂದು ಸಾವಿರ ಮಂದಿ ರೈಲಿನಲ್ಲಿ ಪ್ರಯಾಣಿಸುತ್ತಿದ್ದರು. ಹಲವಾರು ಮಂದಿ ರೈಲು ಬೋಗಿಗಳಲ್ಲಿ ಸಿಲುಕಿರುವ ಸಾಧ್ಯತೆ ಇದೆ. ಅಪಘಾತದ ಬಗ್ಗೆ ತನಿಖೆ ನಡೆಸಲಾಗುವುದು ಎಂದು ಸಚಿವರು ತಿಳಿಸಿದ್ದಾರೆ.</p><p>ರೈಲ್ವೆ ಚಾಲಕ ಮಾಧ್ಯಮಗಳೊಂದಿಗೆ ಮಾತನಾಡುವಾಗ, ‘ರೈಲಿನ ಗರಿಷ್ಠ ವೇಗ ಗಂಟೆಗೆ 105 ಕಿ.ಮೀ ಆಗಿದೆ. ಆದರೆ ರೈಲು ಗಂಟೆಗೆ 50 ಕಿ.ಮೀ ವೇಗದಲ್ಲಿತ್ತು. 19 ಬೋಗಿಗಳಲ್ಲಿ 10 ಬೋಗಿಗಳು ಹಳಿತಪ್ಪಿದ್ದವು, ಏನಾಯಿತು ಎಂದು ನನಗೆ ತಿಳಿದಿಲ್ಲ’ ಎಂದಿದ್ದಾರೆ.</p><p><strong>ಇದನ್ನೂ ಓದಿ: <a href="https://www.prajavani.net/news/world-news/many-people-killed-in-train-derailment-in-pakistan-2429259">ಪಾಕಿಸ್ತಾನ: ಹಳಿತಪ್ಪಿದ ರೈಲು– 22 ಮಂದಿ ಸಾವು</a></strong></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕರಾಚಿ:</strong> ಸಿಂಧ್ ಪ್ರಾಂತ್ಯದಲ್ಲಿ ಸಂಭವಿಸಿದ ಎಕ್ಸ್ಪ್ರೆಸ್ ರೈಲು ಅಪಘಾತದಲ್ಲಿ, ಸಾವಿನ ಸಂಖ್ಯೆ 30 ಕ್ಕೆ ಏರಿಕೆಯಾಗಿದೆ. 80 ಜನ ಗಾಯಗೊಂಡಿದ್ದಾರೆ ಎಂದು ರೈಲ್ವೆ ಸಚಿವ ಸಾದ್ ರಫೀಕ್ ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ.</p><p>ಕರಾಚಿಯಿಂದ ರಾವಲ್ಪಿಂಡಿಗೆ ಹೊರಟಿದ್ದ ಹಜಾರಾ ಎಕ್ಸ್ಪ್ರೆಸ್ ರೈಲು ನವಾಬ್ ಶಾ ಜಿಲ್ಲೆಯ ಬಳಿ ಹಳಿತಪ್ಪಿದೆ. ಕರಾಚಿಯಿಂದ 275 ಕಿ.ಮೀ ದೂರದಲ್ಲಿ ರೈಲು ಅಪಘಾತಕ್ಕೀಡಾಗಿದೆ. </p><p>ರೈಲ್ವೆ ಅಧಿಕಾರಿಗಳು ಮತ್ತು ರಕ್ಷಣಾ ಸಿಬ್ಬಂದಿ ತಂಡ ರಕ್ಷಣಾ ಕಾರ್ಯದಲ್ಲಿ ತೊಡಗಿವೆ, ಗಾಯಾಳುಗಳಿಗೆ ಹತ್ತಿರದ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.</p><p>ಸುಮಾರು ಒಂದು ಸಾವಿರ ಮಂದಿ ರೈಲಿನಲ್ಲಿ ಪ್ರಯಾಣಿಸುತ್ತಿದ್ದರು. ಹಲವಾರು ಮಂದಿ ರೈಲು ಬೋಗಿಗಳಲ್ಲಿ ಸಿಲುಕಿರುವ ಸಾಧ್ಯತೆ ಇದೆ. ಅಪಘಾತದ ಬಗ್ಗೆ ತನಿಖೆ ನಡೆಸಲಾಗುವುದು ಎಂದು ಸಚಿವರು ತಿಳಿಸಿದ್ದಾರೆ.</p><p>ರೈಲ್ವೆ ಚಾಲಕ ಮಾಧ್ಯಮಗಳೊಂದಿಗೆ ಮಾತನಾಡುವಾಗ, ‘ರೈಲಿನ ಗರಿಷ್ಠ ವೇಗ ಗಂಟೆಗೆ 105 ಕಿ.ಮೀ ಆಗಿದೆ. ಆದರೆ ರೈಲು ಗಂಟೆಗೆ 50 ಕಿ.ಮೀ ವೇಗದಲ್ಲಿತ್ತು. 19 ಬೋಗಿಗಳಲ್ಲಿ 10 ಬೋಗಿಗಳು ಹಳಿತಪ್ಪಿದ್ದವು, ಏನಾಯಿತು ಎಂದು ನನಗೆ ತಿಳಿದಿಲ್ಲ’ ಎಂದಿದ್ದಾರೆ.</p><p><strong>ಇದನ್ನೂ ಓದಿ: <a href="https://www.prajavani.net/news/world-news/many-people-killed-in-train-derailment-in-pakistan-2429259">ಪಾಕಿಸ್ತಾನ: ಹಳಿತಪ್ಪಿದ ರೈಲು– 22 ಮಂದಿ ಸಾವು</a></strong></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>