<p><strong>ಅಂಕಾರಾ:</strong> ವಾಯವ್ಯ ಟರ್ಕಿಯ ಪ್ರಸಿದ್ಧ ಸ್ಕಿ ರೆಸಾರ್ಟ್ನ ಹೋಟೆಲ್ನಲ್ಲಿ ಸಂಭವಿಸಿದ ಅಗ್ನಿ ಅವಘಡದಲ್ಲಿ ಮೃತಪಟ್ಟವರ ಸಂಖ್ಯೆ 76ಕ್ಕೆ ಏರಿಕೆಯಾಗಿದೆ. </p><p>ಘಟನೆ ಸಂಬಂಧ ಹೋಟೆಲ್ನ ಮಾಲೀಕ ಸೇರಿದಂತೆ ಒಂಬತ್ತು ಮಂದಿಯನ್ನು ಬಂಧಿಸಲಾಗಿದೆ ಎಂದು ಟರ್ಕಿಯ ಗೃಹ ಸಚಿವ ಆಲಿ ಎರ್ಲಿಕಯಾ ತಿಳಿಸಿದ್ದಾರೆ.</p><p>45 ಮೃತದೇಹಗಳನ್ನು ಅವರ ಕುಟುಂಬಗಳಿಗೆ ಹಸ್ತಾಂತರಿಸಲಾಗಿದೆ. ಇನ್ನುಳಿದವರ ಗುರುತು ಪತ್ತೆ ಹಚ್ಚಲು ಡಿಎನ್ಎ ಪರೀಕ್ಷೆ ನಡೆಸಲಾಗುತ್ತಿದೆ ಎಂದು ಎರ್ಲಿಕಯಾ ಮಾಹಿತಿ ನೀಡಿದ್ದಾರೆ.</p><p>’ರೆಸ್ಟೊರೆಂಟ್ನ 12ನೇ ಮಹಡಿಯಲ್ಲಿರುವ ಗ್ರಾಂಡ್ ಕರ್ತಾಲ್ ಹೋಟೆಲ್ನಲ್ಲಿ ಮಂಗಳವಾರ ಮುಂಜಾನೆ 3.30ರ ಸುಮಾರಿಗೆ ಬೆಂಕಿ ಕಾಣಿಸಿಕೊಂಡಿತ್ತು. ಘಟನೆ ಸಂದರ್ಭದಲ್ಲಿ 234 ಅತಿಥಿಗಳು ಹೋಟೆಲ್ನಲ್ಲಿ ಇದ್ದರು. ಗಾಬರಿಗೊಂಡು ಕಟ್ಟಡದಿಂದ ಜಿಗಿದಿದ್ದರಿಂದ ಇಬ್ಬರು ಸಾವಿಗೀಡಾಗಿದ್ದಾರೆ’ ಎಂದು ಅಧಿಕಾರಿಗಳು ತಿಳಿಸಿದ್ದರು. </p><p>ಅಗ್ನಿ ಅವಘಡಕ್ಕೆ ಕಾರಣ ಏನೆಂಬ ಬಗ್ಗೆ ತನಿಖೆ ನಡೆಯುತ್ತಿದೆ. ತನಿಖೆಗಾಗಿ ಆರು ಪ್ರಾಸಿಕ್ಯೂಟರ್ಗಳನ್ನು ಸರ್ಕಾರ ನೇಮಿಸಿದೆ ಎಂದು ವರದಿಯಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಅಂಕಾರಾ:</strong> ವಾಯವ್ಯ ಟರ್ಕಿಯ ಪ್ರಸಿದ್ಧ ಸ್ಕಿ ರೆಸಾರ್ಟ್ನ ಹೋಟೆಲ್ನಲ್ಲಿ ಸಂಭವಿಸಿದ ಅಗ್ನಿ ಅವಘಡದಲ್ಲಿ ಮೃತಪಟ್ಟವರ ಸಂಖ್ಯೆ 76ಕ್ಕೆ ಏರಿಕೆಯಾಗಿದೆ. </p><p>ಘಟನೆ ಸಂಬಂಧ ಹೋಟೆಲ್ನ ಮಾಲೀಕ ಸೇರಿದಂತೆ ಒಂಬತ್ತು ಮಂದಿಯನ್ನು ಬಂಧಿಸಲಾಗಿದೆ ಎಂದು ಟರ್ಕಿಯ ಗೃಹ ಸಚಿವ ಆಲಿ ಎರ್ಲಿಕಯಾ ತಿಳಿಸಿದ್ದಾರೆ.</p><p>45 ಮೃತದೇಹಗಳನ್ನು ಅವರ ಕುಟುಂಬಗಳಿಗೆ ಹಸ್ತಾಂತರಿಸಲಾಗಿದೆ. ಇನ್ನುಳಿದವರ ಗುರುತು ಪತ್ತೆ ಹಚ್ಚಲು ಡಿಎನ್ಎ ಪರೀಕ್ಷೆ ನಡೆಸಲಾಗುತ್ತಿದೆ ಎಂದು ಎರ್ಲಿಕಯಾ ಮಾಹಿತಿ ನೀಡಿದ್ದಾರೆ.</p><p>’ರೆಸ್ಟೊರೆಂಟ್ನ 12ನೇ ಮಹಡಿಯಲ್ಲಿರುವ ಗ್ರಾಂಡ್ ಕರ್ತಾಲ್ ಹೋಟೆಲ್ನಲ್ಲಿ ಮಂಗಳವಾರ ಮುಂಜಾನೆ 3.30ರ ಸುಮಾರಿಗೆ ಬೆಂಕಿ ಕಾಣಿಸಿಕೊಂಡಿತ್ತು. ಘಟನೆ ಸಂದರ್ಭದಲ್ಲಿ 234 ಅತಿಥಿಗಳು ಹೋಟೆಲ್ನಲ್ಲಿ ಇದ್ದರು. ಗಾಬರಿಗೊಂಡು ಕಟ್ಟಡದಿಂದ ಜಿಗಿದಿದ್ದರಿಂದ ಇಬ್ಬರು ಸಾವಿಗೀಡಾಗಿದ್ದಾರೆ’ ಎಂದು ಅಧಿಕಾರಿಗಳು ತಿಳಿಸಿದ್ದರು. </p><p>ಅಗ್ನಿ ಅವಘಡಕ್ಕೆ ಕಾರಣ ಏನೆಂಬ ಬಗ್ಗೆ ತನಿಖೆ ನಡೆಯುತ್ತಿದೆ. ತನಿಖೆಗಾಗಿ ಆರು ಪ್ರಾಸಿಕ್ಯೂಟರ್ಗಳನ್ನು ಸರ್ಕಾರ ನೇಮಿಸಿದೆ ಎಂದು ವರದಿಯಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>