ಟ್ವಿಟರ್ ಮಾಜಿ ಸಿಇಓ ಪರಾಗ್ ಅಗರವಾಲ್, ಮುಖ್ಯ ಹಣಕಾಸು ಅಧಿಕಾರಿ ನೆಡ್ ಸೆಗಲ್ ಮತ್ತು ಮುಖ್ಯ ಕಾನೂನು ಸಲಹೆಗಾರ ವಿಜಯ್ ಗಡ್ಡೆ ದಾವೆ ಹೂಡಿದವರು. ದೈತ್ಯ ಮೈಕ್ರೋಬ್ಲಾಗಿಂಗ್ ವೇದಿಕೆಯಾದ ಟ್ವಿಟರ್ಅನ್ನು ಇಲಾನ್ ಮಸ್ಕ್ ಖರೀದಿಸಿದ ಬಳಿಕ ಹಲವು ಉನ್ನತ ಅಧಿಕಾರಿಗಳನ್ನು ಕೆಲಸದಿಂದ ಕಿತ್ತು ಹಾಕಿದ್ದರು. ಇಲಾನ್ ಮಸ್ಕ್ ಕಂಪೆನಿಯ ನಿಯಮಗಳ ಪ್ರಕಾರ ನಡೆದುಕೊಂಡಿಲ್ಲ ಎಂದು ಈ ಮೂವರು ಕಾನೂನು ಹೋರಾಟ ನಡೆಸಿದ್ದರು. ಈ ವೆಚ್ಚವನ್ನು ಇಲಾನ್ ಭರಿಸಬೇಕು ಎಂದು ದಾವೆ ಹೂಡಿದ್ದಾರೆ.