<p><strong>ಲಂಡನ್:</strong> ಶಿಕ್ಷೆಗೆ ಗುರಿಯಾಗುವ ವಿದೇಶಿ ಅಪರಾಧಿಗಳ ಮೇಲ್ಮನವಿ ಅರ್ಜಿಯ ವಿಚಾರಣೆಗೂ ಮುನ್ನವೇ ಅಂಥವರನ್ನು ಗಡೀಪಾರು ಮಾಡುವ ದೇಶಗಳ ಪಟ್ಟಿಯಲ್ಲಿ ಭಾರತವನ್ನೂ ಸೇರಿಸಲಾಗಿದೆ.</p>.<p>ಬ್ರಿಟನ್ಗೆ ವಲಸೆ ಹೋಗುವವರ ಸಂಖ್ಯೆಯನ್ನು ಕಡಿಮೆ ಮಾಡುವ ಕ್ರಮದ ಭಾಗವಾಗಿ ಬ್ರಿಟನ್ ಸರ್ಕಾರ ಈ ಕ್ರಮಕ್ಕೆ ಮುಂದಾಗಿದೆ.</p>.<p>‘ಈಗ ಗಡೀಪಾರು, ನಂತರ ವಿಚಾರಣೆ’ ಯೋಜನೆಯು 23 ದೇಶಗಳ ಅಪರಾಧಿಗಳಿಗೆ ಅನ್ವಯವಾಗಲಿದೆ. ಈ ಮೊದಲು ಎಂಟು ದೇಶಗಳಿಗೆ ಮಾತ್ರ ಅನ್ವಯವಾಗುತ್ತಿತ್ತು. ಯೋಜನೆಯ ಪ್ರಕಾರ, ಈ ದೇಶಗಳ ಅಪರಾಧಿಗಳನ್ನು ಶಿಕ್ಷೆಗೆ ಗುರಿಯಾದ ಕೂಡಲೇ ಗಡೀಪಾರು ಮಾಡಲಾಗುತ್ತದೆ ಎಂದು ಬ್ರಿಟನ್ನ ಗೃಹ ಕಚೇರಿಯು ತಿಳಿಸಿದೆ.</p>.<p>ಗಡೀಪಾರಾದ ವಿದೇಶಿಗರು ವಿಡಿಯೊ ಟೆಕ್ನಾಲಜಿ ಮೂಲಕ ಮೇಲ್ಮನವಿ ಅರ್ಜಿ ವಿಚಾರಣೆಗೆ ಹಾಜರಾಗಬಹುದು ಎಂದು ಹೇಳಿದೆ.</p>.<p>‘ನಮ್ಮ ದೇಶದಲ್ಲಿ ಅಪರಾಧ ಎಸಗುವವರಿಗೆ ನಮ್ಮ ವ್ಯವಸ್ಥೆಯನ್ನು ಹಾಳುಗೆಡವಲು ಅವಕಾಶ ನೀಡುವುದಿಲ್ಲ. ಹೀಗಾಗಿ ಅಂಥವರಿಗೆ ಈ ಮೂಲಕ ಸ್ಪಷ್ಟ ಸಂದೇಶ ರವಾನಿಸುತ್ತಿದ್ದೇವೆ. ನಮ್ಮ ನೆಲದ ಕಾನೂನನ್ನು ಗೌರವಿಸಬೇಕು ಮತ್ತು ಪಾಲಿಸಬೇಕು’ ಎಂದು ಗೃಹ ಕಾರ್ಯದರ್ಶಿ ಯವಿಟ್ ಕೂಪರ್ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಲಂಡನ್:</strong> ಶಿಕ್ಷೆಗೆ ಗುರಿಯಾಗುವ ವಿದೇಶಿ ಅಪರಾಧಿಗಳ ಮೇಲ್ಮನವಿ ಅರ್ಜಿಯ ವಿಚಾರಣೆಗೂ ಮುನ್ನವೇ ಅಂಥವರನ್ನು ಗಡೀಪಾರು ಮಾಡುವ ದೇಶಗಳ ಪಟ್ಟಿಯಲ್ಲಿ ಭಾರತವನ್ನೂ ಸೇರಿಸಲಾಗಿದೆ.</p>.<p>ಬ್ರಿಟನ್ಗೆ ವಲಸೆ ಹೋಗುವವರ ಸಂಖ್ಯೆಯನ್ನು ಕಡಿಮೆ ಮಾಡುವ ಕ್ರಮದ ಭಾಗವಾಗಿ ಬ್ರಿಟನ್ ಸರ್ಕಾರ ಈ ಕ್ರಮಕ್ಕೆ ಮುಂದಾಗಿದೆ.</p>.<p>‘ಈಗ ಗಡೀಪಾರು, ನಂತರ ವಿಚಾರಣೆ’ ಯೋಜನೆಯು 23 ದೇಶಗಳ ಅಪರಾಧಿಗಳಿಗೆ ಅನ್ವಯವಾಗಲಿದೆ. ಈ ಮೊದಲು ಎಂಟು ದೇಶಗಳಿಗೆ ಮಾತ್ರ ಅನ್ವಯವಾಗುತ್ತಿತ್ತು. ಯೋಜನೆಯ ಪ್ರಕಾರ, ಈ ದೇಶಗಳ ಅಪರಾಧಿಗಳನ್ನು ಶಿಕ್ಷೆಗೆ ಗುರಿಯಾದ ಕೂಡಲೇ ಗಡೀಪಾರು ಮಾಡಲಾಗುತ್ತದೆ ಎಂದು ಬ್ರಿಟನ್ನ ಗೃಹ ಕಚೇರಿಯು ತಿಳಿಸಿದೆ.</p>.<p>ಗಡೀಪಾರಾದ ವಿದೇಶಿಗರು ವಿಡಿಯೊ ಟೆಕ್ನಾಲಜಿ ಮೂಲಕ ಮೇಲ್ಮನವಿ ಅರ್ಜಿ ವಿಚಾರಣೆಗೆ ಹಾಜರಾಗಬಹುದು ಎಂದು ಹೇಳಿದೆ.</p>.<p>‘ನಮ್ಮ ದೇಶದಲ್ಲಿ ಅಪರಾಧ ಎಸಗುವವರಿಗೆ ನಮ್ಮ ವ್ಯವಸ್ಥೆಯನ್ನು ಹಾಳುಗೆಡವಲು ಅವಕಾಶ ನೀಡುವುದಿಲ್ಲ. ಹೀಗಾಗಿ ಅಂಥವರಿಗೆ ಈ ಮೂಲಕ ಸ್ಪಷ್ಟ ಸಂದೇಶ ರವಾನಿಸುತ್ತಿದ್ದೇವೆ. ನಮ್ಮ ನೆಲದ ಕಾನೂನನ್ನು ಗೌರವಿಸಬೇಕು ಮತ್ತು ಪಾಲಿಸಬೇಕು’ ಎಂದು ಗೃಹ ಕಾರ್ಯದರ್ಶಿ ಯವಿಟ್ ಕೂಪರ್ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>