<p><strong>ನ್ಯೂಯಾರ್ಕ್</strong>: ಪ್ಯಾಲೆಸ್ಟೀನ್ನ ಗಾಜಾದಲ್ಲಿ ಆಹಾರ ವಿತರಣೆ ಸಂದರ್ಭ ಸಂಭವಿಸಿದ ನೂಕು ನುಗ್ಗಲಿನಲ್ಲಿ ನೂರಾರು ಜನರ ಸಾವಿನ ಕುರಿತಂತೆ ವಿಶ್ವಸಂಸ್ಥೆಯ ಮಹಾ ಪ್ರಧಾನ ಕಾರ್ಯದರ್ಶಿ ಆಟೊನಿಯೊ ಗುಟೆರಸ್ ಖಂಡನೆ ವ್ಯಕ್ತಪಡಿಸಿದ್ದಾರೆ ಎಂದು ಎಎನ್ಐ ಟ್ವೀಟಿಸಿದೆ.</p><p>ಆಹಾರಕ್ಕಾಗಿ ಪರಿಹಾರ ಟ್ರಕ್ಗಳ ಬಳಿ ಸೇರಿದ ಜನರ ಮೇಲೆ ಇಸ್ರೇಲ್ ಪಡೆಗಳು ಗುಂಡು ಹಾರಿಸಿದ್ದರಿಂದ ಉಂಟಾದ ನೂಕು ನುಗ್ಗಲಿನಲ್ಲಿ 100ಕ್ಕೂ ಅಧಿಕ ಮಂದಿ ಮೃತಪಟ್ಟಿದ್ದಾರೆ ಎಂದು ಪ್ಯಾಲೆಸ್ಟೀನ್ ಆರೋಗ್ಯ ಸಚಿವಾಲಯ ಹೇಳಿದೆ. ಆದರೆ, ಈ ಕುರಿತಂತೆ ಇಸ್ರೇಲ್ ಮತ್ತು ಪ್ರತ್ಯಕ್ಷದರ್ಶಿಗಳು ಬೇರೆ ಬೇರೆ ಕಥೆಗಳನ್ನು ಹೇಳುತ್ತಿದ್ದಾರೆ ಎಂದು ಸಿಎನ್ಎನ್ ವರದಿ ಮಾಡಿದೆ.</p><p>‘ತೀವ್ರ ಹತಾಶೆಯಲ್ಲಿರುವ ಗಾಜಾ ಜನರಿಗೆ ತುರ್ತು ನೆರವಿನ ಅಗತ್ಯವಿದೆ. ಅದರಲ್ಲೂ ಉತ್ತರ ಗಾಜಾದಲ್ಲಿ ಸಿಲುಕಿರುವವರ ಸ್ಥಿತಿ ಶೋಚನೀಯವಾಗಿದ್ದು, ವಾರದಿಂದ ಇಲ್ಲಿ ವಿಶ್ವಸಂಸ್ಥೆ ನೆರವನ್ನು ಒದಗಿಸಲು ಸಾಧ್ಯವಾಗಿರಲಿಲ್ಲ’ ಎಂದು ವಿಶ್ವಸಂಸ್ಥೆಯ ಮುಖ್ಯಸ್ಥರ ವಕ್ತಾರ ಸ್ಟೀಫನ್ ಡುಜಾರಿಕ್ ಹೇಳಿದ್ದಾರೆ.</p><p>ಘಟನಾ ಸ್ಥಳದಲ್ಲಿ ವಿಶ್ವಸಂಸ್ಥೆಯ ಪ್ರತಿನಿಧಿ ಇರಲಿಲ್ಲ ಎಂದಿರುವ ಅವರು, ಈ ಬಗ್ಗೆ ಕೂಲಂಕಷ ತನಿಖೆಗೆ ಒತ್ತಾಯಿಸಿದ್ದಾರೆ.</p><p>ಗಾಜಾದಲ್ಲಿ ಜನರ ಸಾವಿನ ಕುರಿತಂತೆ ಪ್ರತಿಕ್ರಿಯಿಸಿರುವ ಗುಟೆರಸ್, ತುರ್ತಾಗಿ ಮಾನವೀಯ ನೆಲೆಯಲ್ಲಿ ಯುದ್ಧ ವಿರಾಮದ ಅಗತ್ಯತೆಯನ್ನು ಒತ್ತಿ ಹೇಳಿದ್ದಾರೆ. ಅಲ್ಲದೆ, ಗಾಜಾದಲ್ಲಿರುವ ಇಸ್ರೇಲ್ ಒತ್ತೆಯಾಳುಗಳನ್ನು ಬೇಷರತ್ ಬಿಡುಗಡೆ ಮಾಡಬೇಕೆಂದು ಒತ್ತಾಯಿಸಿದ್ದಾರೆ.</p><p>ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ ವಿಶ್ವಸಂಸ್ತೆಯ ಮಾನವೀಯ ವ್ಯವಹಾರಗಳು ಮತ್ತು ತುರ್ತು ಪರಿಹಾರ ಸಂಯೋಜಮಾ ಕಾರ್ಯದರ್ಶಿ ಮಾರ್ಟಿನ್ ಗ್ರಿಫಿತ್, 5 ತಿಂಗಳ ಭೀಕರ ಯುದ್ಧ ಮತ್ತು ಒತ್ತೆಯಾಳುಗಳ ಬಿಡುಗಡೆ ಕಾರ್ಯಾಚರಣೆಗಳ ಬಳಿಕವೂ ಗಾಜಾದಲ್ಲಿ ಇನ್ನೂ ಆಘಾತಕಾರಿ ಘಟನೆಗಳು ನಡೆಯುತ್ತಿವೆ ಎಂದಿದ್ಧಾರೆ.</p><p>ಈ ನಡುವೆ ಘಟನೆ ಕುರಿತಂತೆ ಗಮನ ಸೆಳೆಯಲು ನ್ಯೂಯಾರ್ಕ್ನಲ್ಲಿ ವಿಶ್ವಸಂಸ್ಥೆಯ ಭದ್ರತಾ ಮಂಡಳಿ ಸಭೆ ಕರೆಯಲಾಗಿದೆ.</p> .<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನ್ಯೂಯಾರ್ಕ್</strong>: ಪ್ಯಾಲೆಸ್ಟೀನ್ನ ಗಾಜಾದಲ್ಲಿ ಆಹಾರ ವಿತರಣೆ ಸಂದರ್ಭ ಸಂಭವಿಸಿದ ನೂಕು ನುಗ್ಗಲಿನಲ್ಲಿ ನೂರಾರು ಜನರ ಸಾವಿನ ಕುರಿತಂತೆ ವಿಶ್ವಸಂಸ್ಥೆಯ ಮಹಾ ಪ್ರಧಾನ ಕಾರ್ಯದರ್ಶಿ ಆಟೊನಿಯೊ ಗುಟೆರಸ್ ಖಂಡನೆ ವ್ಯಕ್ತಪಡಿಸಿದ್ದಾರೆ ಎಂದು ಎಎನ್ಐ ಟ್ವೀಟಿಸಿದೆ.</p><p>ಆಹಾರಕ್ಕಾಗಿ ಪರಿಹಾರ ಟ್ರಕ್ಗಳ ಬಳಿ ಸೇರಿದ ಜನರ ಮೇಲೆ ಇಸ್ರೇಲ್ ಪಡೆಗಳು ಗುಂಡು ಹಾರಿಸಿದ್ದರಿಂದ ಉಂಟಾದ ನೂಕು ನುಗ್ಗಲಿನಲ್ಲಿ 100ಕ್ಕೂ ಅಧಿಕ ಮಂದಿ ಮೃತಪಟ್ಟಿದ್ದಾರೆ ಎಂದು ಪ್ಯಾಲೆಸ್ಟೀನ್ ಆರೋಗ್ಯ ಸಚಿವಾಲಯ ಹೇಳಿದೆ. ಆದರೆ, ಈ ಕುರಿತಂತೆ ಇಸ್ರೇಲ್ ಮತ್ತು ಪ್ರತ್ಯಕ್ಷದರ್ಶಿಗಳು ಬೇರೆ ಬೇರೆ ಕಥೆಗಳನ್ನು ಹೇಳುತ್ತಿದ್ದಾರೆ ಎಂದು ಸಿಎನ್ಎನ್ ವರದಿ ಮಾಡಿದೆ.</p><p>‘ತೀವ್ರ ಹತಾಶೆಯಲ್ಲಿರುವ ಗಾಜಾ ಜನರಿಗೆ ತುರ್ತು ನೆರವಿನ ಅಗತ್ಯವಿದೆ. ಅದರಲ್ಲೂ ಉತ್ತರ ಗಾಜಾದಲ್ಲಿ ಸಿಲುಕಿರುವವರ ಸ್ಥಿತಿ ಶೋಚನೀಯವಾಗಿದ್ದು, ವಾರದಿಂದ ಇಲ್ಲಿ ವಿಶ್ವಸಂಸ್ಥೆ ನೆರವನ್ನು ಒದಗಿಸಲು ಸಾಧ್ಯವಾಗಿರಲಿಲ್ಲ’ ಎಂದು ವಿಶ್ವಸಂಸ್ಥೆಯ ಮುಖ್ಯಸ್ಥರ ವಕ್ತಾರ ಸ್ಟೀಫನ್ ಡುಜಾರಿಕ್ ಹೇಳಿದ್ದಾರೆ.</p><p>ಘಟನಾ ಸ್ಥಳದಲ್ಲಿ ವಿಶ್ವಸಂಸ್ಥೆಯ ಪ್ರತಿನಿಧಿ ಇರಲಿಲ್ಲ ಎಂದಿರುವ ಅವರು, ಈ ಬಗ್ಗೆ ಕೂಲಂಕಷ ತನಿಖೆಗೆ ಒತ್ತಾಯಿಸಿದ್ದಾರೆ.</p><p>ಗಾಜಾದಲ್ಲಿ ಜನರ ಸಾವಿನ ಕುರಿತಂತೆ ಪ್ರತಿಕ್ರಿಯಿಸಿರುವ ಗುಟೆರಸ್, ತುರ್ತಾಗಿ ಮಾನವೀಯ ನೆಲೆಯಲ್ಲಿ ಯುದ್ಧ ವಿರಾಮದ ಅಗತ್ಯತೆಯನ್ನು ಒತ್ತಿ ಹೇಳಿದ್ದಾರೆ. ಅಲ್ಲದೆ, ಗಾಜಾದಲ್ಲಿರುವ ಇಸ್ರೇಲ್ ಒತ್ತೆಯಾಳುಗಳನ್ನು ಬೇಷರತ್ ಬಿಡುಗಡೆ ಮಾಡಬೇಕೆಂದು ಒತ್ತಾಯಿಸಿದ್ದಾರೆ.</p><p>ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ ವಿಶ್ವಸಂಸ್ತೆಯ ಮಾನವೀಯ ವ್ಯವಹಾರಗಳು ಮತ್ತು ತುರ್ತು ಪರಿಹಾರ ಸಂಯೋಜಮಾ ಕಾರ್ಯದರ್ಶಿ ಮಾರ್ಟಿನ್ ಗ್ರಿಫಿತ್, 5 ತಿಂಗಳ ಭೀಕರ ಯುದ್ಧ ಮತ್ತು ಒತ್ತೆಯಾಳುಗಳ ಬಿಡುಗಡೆ ಕಾರ್ಯಾಚರಣೆಗಳ ಬಳಿಕವೂ ಗಾಜಾದಲ್ಲಿ ಇನ್ನೂ ಆಘಾತಕಾರಿ ಘಟನೆಗಳು ನಡೆಯುತ್ತಿವೆ ಎಂದಿದ್ಧಾರೆ.</p><p>ಈ ನಡುವೆ ಘಟನೆ ಕುರಿತಂತೆ ಗಮನ ಸೆಳೆಯಲು ನ್ಯೂಯಾರ್ಕ್ನಲ್ಲಿ ವಿಶ್ವಸಂಸ್ಥೆಯ ಭದ್ರತಾ ಮಂಡಳಿ ಸಭೆ ಕರೆಯಲಾಗಿದೆ.</p> .<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>