<p><strong>ವಿಶ್ವಸಂಸ್ಥೆ:</strong> ಗಾಜಾದ ರಫಾದಲ್ಲಿ ಇಸ್ರೇಲ್ ಬಾಂಬ್ಗೆ ಬಲಿಯಾದ ಭಾರತ ಮೂಲದ ಅಧಿಕಾರಿಯ ಸಾವಿಗೆ ವಿಶ್ವಸಂಸ್ಥೆ ಸಂತಾಪ ಸೂಚಿಸಿದೆ. ಅಲ್ಲದೇ ಕ್ಷಮೆಯನ್ನೂ ಯಾಚಿಸಿದೆ.</p><p>ಭಾರತೀಯ ಸೇನೆಯ ನಿವೃತ್ತ ಅಧಿಕಾರಿ ಕರ್ನಲ್ ವೈಭವ್ ಅನಿಲ್ ಕಾಳೆ ಅವರು ವಿಶ್ವಸಂಸ್ಥೆಯ ಸುರಕ್ಷತೆ ಮತ್ತು ಭದ್ರತೆ ಇಲಾಖೆಯಲ್ಲಿ ಕಳೆದ ಎರಡು ತಿಂಗಳಿನಿಂದ ಭದ್ರತಾ ಸಮನ್ವಯ ಅಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದರು. </p>.ರಫಾದಲ್ಲಿ ಇಸ್ರೇಲ್ ದಾಳಿ: ಭಾರತ ಮೂಲದ ವಿಶ್ವಸಂಸ್ಥೆ ಸಿಬ್ಬಂದಿ ಸಾವು.<p>ಸೋಮವಾರ ಬೆಳಿಗ್ಗೆ ಇವರು ಪ್ರಯಾಣಿಸುತ್ತಿದ್ದ ವಾಹನದ ಮೇಲೆ ಇಸ್ರೇಲ್ ದಾಳಿ ನಡೆಸಿತ್ತು. ಘಟನೆಯಲ್ಲಿ ಅನಿಲ್ ಕಾಳೆ ಮೃತಪಟ್ಟು, ಜೋರ್ಡನ್ ಮೂಲದ ಮತ್ತೊಬ್ಬ ಮಹಿಳಾ ಅಧಿಕಾರಿ ಗಾಯಗೊಂಡಿದ್ದರು. ಯುದ್ಧ ಪೀಡಿತ ರಫಾದಲ್ಲಿರುವ ಯೂರೋಪಿಯನ್ ಆಸ್ಪತ್ರೆಗೆ ಅವರು ಪ್ರಯಾಣಿಸುತ್ತಿದ್ದರು ಎಂದು ವಿಶ್ವಸಂಸ್ಥೆ ಹೇಳಿದೆ.</p><p>‘ಭಾರತದ ನಾಗರಿಕರಿಗೆ ಹಾಗೂ ಸರ್ಕಾರಕ್ಕೆ ನಾವು ನಮ್ಮ ಕ್ಷಮೆ ಹಾಗೂ ಸಂತಾಪಗಳನ್ನು ವ್ಯಕ್ತಪಡಿಸುತ್ತೇವೆ. ಭಾರತದ ಕೊಡುಗೆಯನ್ನು ನಾವು ಪ್ರಶಂಸಿಸುತ್ತೇವೆ’ ಎಂದು ವಿಶ್ವಸಂಸ್ಥೆಯ ಉಪವಕ್ತಾರ ಫರ್ಹಾನ್ ಹಕ್ ಹಾಗೂ ಪ್ರಧಾನ ಕಾರ್ಯದರ್ಶಿ ಅಂಟನಿಯೊ ಗುಟೆರಸ್ ದೈನಂದಿನ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.</p>.ಪ್ಯಾಲೆಸ್ಟೀನ್ಗೆ ವಿಶ್ವಸಂಸ್ಥೆ ಸದಸ್ಯತ್ವ –ನಿರ್ಣಯಕ್ಕೆ ಅಸ್ತು . <p>ಘಟನೆ ಸಂಬಂಧ ಸತ್ಯಶೋಧನೆ ಸಮಿತಿಯನ್ನು ವಿಶ್ವಸಂಸ್ಥೆ ರಚಿಸಿದೆ. ಘಟನೆಯ ಬಗ್ಗೆ ಇಸ್ರೇಲಿ ಸೇನೆಯಿಂದ ಮಾಹಿತಿ ಪಡೆಯಲಾಗುತ್ತಿದೆ ಎಂದು ಫರ್ಹಾನ್ ತಿಳಿಸಿದ್ದಾರೆ.</p><p>ಕಾಳೆ 11ನೇ ಜಮ್ಮು ಮತ್ತು ಕಾಶ್ಮೀರ ರೈಫಲ್ಸ್ನ ಕಮಾಂಡರ್ ಆಗಿದ್ದರು. 2022ರಲ್ಲಿ ಸ್ವಯಂ ನಿವೃತ್ತಿ ಪಡೆದಿದ್ದರು.</p> .ಇಸ್ರೇಲ್ ಮತ್ತು ಹಮಾಸ್ ಯುದ್ಧ: ಗಾಜಾದಲ್ಲಿ 34 ಸಾವಿರ ಮಂದಿ ಸಾವು.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ವಿಶ್ವಸಂಸ್ಥೆ:</strong> ಗಾಜಾದ ರಫಾದಲ್ಲಿ ಇಸ್ರೇಲ್ ಬಾಂಬ್ಗೆ ಬಲಿಯಾದ ಭಾರತ ಮೂಲದ ಅಧಿಕಾರಿಯ ಸಾವಿಗೆ ವಿಶ್ವಸಂಸ್ಥೆ ಸಂತಾಪ ಸೂಚಿಸಿದೆ. ಅಲ್ಲದೇ ಕ್ಷಮೆಯನ್ನೂ ಯಾಚಿಸಿದೆ.</p><p>ಭಾರತೀಯ ಸೇನೆಯ ನಿವೃತ್ತ ಅಧಿಕಾರಿ ಕರ್ನಲ್ ವೈಭವ್ ಅನಿಲ್ ಕಾಳೆ ಅವರು ವಿಶ್ವಸಂಸ್ಥೆಯ ಸುರಕ್ಷತೆ ಮತ್ತು ಭದ್ರತೆ ಇಲಾಖೆಯಲ್ಲಿ ಕಳೆದ ಎರಡು ತಿಂಗಳಿನಿಂದ ಭದ್ರತಾ ಸಮನ್ವಯ ಅಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದರು. </p>.ರಫಾದಲ್ಲಿ ಇಸ್ರೇಲ್ ದಾಳಿ: ಭಾರತ ಮೂಲದ ವಿಶ್ವಸಂಸ್ಥೆ ಸಿಬ್ಬಂದಿ ಸಾವು.<p>ಸೋಮವಾರ ಬೆಳಿಗ್ಗೆ ಇವರು ಪ್ರಯಾಣಿಸುತ್ತಿದ್ದ ವಾಹನದ ಮೇಲೆ ಇಸ್ರೇಲ್ ದಾಳಿ ನಡೆಸಿತ್ತು. ಘಟನೆಯಲ್ಲಿ ಅನಿಲ್ ಕಾಳೆ ಮೃತಪಟ್ಟು, ಜೋರ್ಡನ್ ಮೂಲದ ಮತ್ತೊಬ್ಬ ಮಹಿಳಾ ಅಧಿಕಾರಿ ಗಾಯಗೊಂಡಿದ್ದರು. ಯುದ್ಧ ಪೀಡಿತ ರಫಾದಲ್ಲಿರುವ ಯೂರೋಪಿಯನ್ ಆಸ್ಪತ್ರೆಗೆ ಅವರು ಪ್ರಯಾಣಿಸುತ್ತಿದ್ದರು ಎಂದು ವಿಶ್ವಸಂಸ್ಥೆ ಹೇಳಿದೆ.</p><p>‘ಭಾರತದ ನಾಗರಿಕರಿಗೆ ಹಾಗೂ ಸರ್ಕಾರಕ್ಕೆ ನಾವು ನಮ್ಮ ಕ್ಷಮೆ ಹಾಗೂ ಸಂತಾಪಗಳನ್ನು ವ್ಯಕ್ತಪಡಿಸುತ್ತೇವೆ. ಭಾರತದ ಕೊಡುಗೆಯನ್ನು ನಾವು ಪ್ರಶಂಸಿಸುತ್ತೇವೆ’ ಎಂದು ವಿಶ್ವಸಂಸ್ಥೆಯ ಉಪವಕ್ತಾರ ಫರ್ಹಾನ್ ಹಕ್ ಹಾಗೂ ಪ್ರಧಾನ ಕಾರ್ಯದರ್ಶಿ ಅಂಟನಿಯೊ ಗುಟೆರಸ್ ದೈನಂದಿನ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.</p>.ಪ್ಯಾಲೆಸ್ಟೀನ್ಗೆ ವಿಶ್ವಸಂಸ್ಥೆ ಸದಸ್ಯತ್ವ –ನಿರ್ಣಯಕ್ಕೆ ಅಸ್ತು . <p>ಘಟನೆ ಸಂಬಂಧ ಸತ್ಯಶೋಧನೆ ಸಮಿತಿಯನ್ನು ವಿಶ್ವಸಂಸ್ಥೆ ರಚಿಸಿದೆ. ಘಟನೆಯ ಬಗ್ಗೆ ಇಸ್ರೇಲಿ ಸೇನೆಯಿಂದ ಮಾಹಿತಿ ಪಡೆಯಲಾಗುತ್ತಿದೆ ಎಂದು ಫರ್ಹಾನ್ ತಿಳಿಸಿದ್ದಾರೆ.</p><p>ಕಾಳೆ 11ನೇ ಜಮ್ಮು ಮತ್ತು ಕಾಶ್ಮೀರ ರೈಫಲ್ಸ್ನ ಕಮಾಂಡರ್ ಆಗಿದ್ದರು. 2022ರಲ್ಲಿ ಸ್ವಯಂ ನಿವೃತ್ತಿ ಪಡೆದಿದ್ದರು.</p> .ಇಸ್ರೇಲ್ ಮತ್ತು ಹಮಾಸ್ ಯುದ್ಧ: ಗಾಜಾದಲ್ಲಿ 34 ಸಾವಿರ ಮಂದಿ ಸಾವು.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>