<p><strong>ವಿಶ್ವಸಂಸ್ಥೆ: </strong>‘ಗಾಜಾ ನಗರದಲ್ಲಿ ಅಂತರರಾಷ್ಟ್ರೀಯ ಮಾಧ್ಯಮ ಸಂಸ್ಥೆಗಳ ಕಚೇರಿಗಳಿರುವ ಬೃಹತ್ ಕಟ್ಟಡ, ಜನವಸತಿಯುಳ್ಳ ಅಪಾರ್ಟ್ಮೆಂಟ್ಗಳು ಇಸ್ರೇಲ್ ನಡೆಸಿರುವ ವೈಮಾನಿಕ ದಾಳಿಯಲ್ಲಿ ಧ್ವಂಸಗೊಂಡಿದ್ದು, ಇದರಿಂದ ಬಹಳ ವ್ಯಾಕುಲಗೊಂಡಿದ್ದೇನೆ’ ಎಂದು ವಿಶ್ವಸಂಸ್ಥೆಯ ಮಹಾ ಕಾರ್ಯದರ್ಶಿ ಆ್ಯಂಟೊನಿಯೊ ಗುಟೆರಸ್ ಹೇಳಿದ್ದಾರೆ.</p>.<p>‘ನಾಗರಿಕರು ಹಾಗೂ ಮಾಧ್ಯಮಗಳ ಕಚೇರಿಗಳನ್ನು ಗುರಿಯಾಗಿಸಿಕೊಂಡು ದಾಳಿ ನಡೆಸುವುದು ಅಂತರರಾಷ್ಟ್ರೀಯ ಕಾಯ್ದೆಯ ಉಲ್ಲಂಘನೆಯಾಗುತ್ತದೆ. ಇಂಥ ಕ್ರಮಗಳಿಗೆ ಮುಂದಾಗಬಾರದು ಎಂದು ಗುಟೆರಸ್ ಅವರು ಎರಡೂ ರಾಷ್ಟ್ರಗಳಿಗೆ ಎಚ್ಚರಿಸಿದ್ದಾರೆ’ ಎಂದು ಗುಟೆರಸ್ ಅವರ ವಕ್ತಾರ ಸ್ಟೀಫನ್ ದುಜಾರಿಕ್ ಹೇಳಿದರು.</p>.<p>ಇಸ್ರೇಲ್ ವಾಯುಪಡೆ ಶನಿವಾರ ನಡೆಸಿದ ದಾಳಿಯಲ್ಲಿ ಗಗನಚುಂಬಿ ಕಟ್ಟಡವೊಂದು ನೆಲಸಮಗೊಂಡಿದೆ. ಈ ಕಟ್ಟಡದಲ್ಲಿ ದಿ ಅಸೋಸಿಯೇಟೆಡ್ ಪ್ರೆಸ್, ಅಲ್ ಜಝೀರಾ ಸೇರಿದಂತೆ ಹಲವು ಮಾಧ್ಯಮ ಸಂಸ್ತೆಗಳ ಕಚೇರಿಗಳಿದ್ದವು.</p>.<p>ಗಾಜಾದಲ್ಲಿರುವ ಅಲ್–ಶತಿ ನಿರಾಶ್ರಿತರ ಶಿಬಿರದಲ್ಲಿದ್ದ ಒಂದೇ ಕುಟುಂಬದ 10 ಜನರು ಮೃತಪಟ್ಟ ಘಟನೆ ಬಗ್ಗೆಯೂ ಗುಟೆರಸ್ ಕಳವಳ ವ್ಯಕ್ತಪಡಿಸಿದ್ದಾಗಿ ದುಜಾರಿಕ್ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ವಿಶ್ವಸಂಸ್ಥೆ: </strong>‘ಗಾಜಾ ನಗರದಲ್ಲಿ ಅಂತರರಾಷ್ಟ್ರೀಯ ಮಾಧ್ಯಮ ಸಂಸ್ಥೆಗಳ ಕಚೇರಿಗಳಿರುವ ಬೃಹತ್ ಕಟ್ಟಡ, ಜನವಸತಿಯುಳ್ಳ ಅಪಾರ್ಟ್ಮೆಂಟ್ಗಳು ಇಸ್ರೇಲ್ ನಡೆಸಿರುವ ವೈಮಾನಿಕ ದಾಳಿಯಲ್ಲಿ ಧ್ವಂಸಗೊಂಡಿದ್ದು, ಇದರಿಂದ ಬಹಳ ವ್ಯಾಕುಲಗೊಂಡಿದ್ದೇನೆ’ ಎಂದು ವಿಶ್ವಸಂಸ್ಥೆಯ ಮಹಾ ಕಾರ್ಯದರ್ಶಿ ಆ್ಯಂಟೊನಿಯೊ ಗುಟೆರಸ್ ಹೇಳಿದ್ದಾರೆ.</p>.<p>‘ನಾಗರಿಕರು ಹಾಗೂ ಮಾಧ್ಯಮಗಳ ಕಚೇರಿಗಳನ್ನು ಗುರಿಯಾಗಿಸಿಕೊಂಡು ದಾಳಿ ನಡೆಸುವುದು ಅಂತರರಾಷ್ಟ್ರೀಯ ಕಾಯ್ದೆಯ ಉಲ್ಲಂಘನೆಯಾಗುತ್ತದೆ. ಇಂಥ ಕ್ರಮಗಳಿಗೆ ಮುಂದಾಗಬಾರದು ಎಂದು ಗುಟೆರಸ್ ಅವರು ಎರಡೂ ರಾಷ್ಟ್ರಗಳಿಗೆ ಎಚ್ಚರಿಸಿದ್ದಾರೆ’ ಎಂದು ಗುಟೆರಸ್ ಅವರ ವಕ್ತಾರ ಸ್ಟೀಫನ್ ದುಜಾರಿಕ್ ಹೇಳಿದರು.</p>.<p>ಇಸ್ರೇಲ್ ವಾಯುಪಡೆ ಶನಿವಾರ ನಡೆಸಿದ ದಾಳಿಯಲ್ಲಿ ಗಗನಚುಂಬಿ ಕಟ್ಟಡವೊಂದು ನೆಲಸಮಗೊಂಡಿದೆ. ಈ ಕಟ್ಟಡದಲ್ಲಿ ದಿ ಅಸೋಸಿಯೇಟೆಡ್ ಪ್ರೆಸ್, ಅಲ್ ಜಝೀರಾ ಸೇರಿದಂತೆ ಹಲವು ಮಾಧ್ಯಮ ಸಂಸ್ತೆಗಳ ಕಚೇರಿಗಳಿದ್ದವು.</p>.<p>ಗಾಜಾದಲ್ಲಿರುವ ಅಲ್–ಶತಿ ನಿರಾಶ್ರಿತರ ಶಿಬಿರದಲ್ಲಿದ್ದ ಒಂದೇ ಕುಟುಂಬದ 10 ಜನರು ಮೃತಪಟ್ಟ ಘಟನೆ ಬಗ್ಗೆಯೂ ಗುಟೆರಸ್ ಕಳವಳ ವ್ಯಕ್ತಪಡಿಸಿದ್ದಾಗಿ ದುಜಾರಿಕ್ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>