‘ದುಷ್ಟಶಕ್ತಿಗಳ ವಿರುದ್ಧ ಸಂಘರ್ಷ ಪ್ರತಿನಿತ್ಯ ನಡೆಯುತ್ತಲೇ ಇರುತ್ತದೆ. ದುಷ್ಟಶಕ್ತಿಗಳನ್ನು ದಮನ ಮಾಡುವ ಹೋರಾಟದಲ್ಲಿ ಜಯ ಸಾಧಿಸುವ ಸಂಕೇತವಾಗಿ ಅಂಚೆ ಚೀಟಿ ಬಿಡುಗಡೆ ಮಾಡಿರುವುದಕ್ಕೆ ಧನ್ಯವಾದಗಳು’ ಎಂದು ವಿಶ್ವಸಂಸ್ಥೆಯಲ್ಲಿನ ಭಾರತದ ಶಾಶ್ವತ ಪ್ರತಿನಿಧಿ ರಾಯಭಾರಿ ಸೈಯದ್ ಅಕ್ಬರುದ್ದೀನ್ ಟ್ವೀಟ್ ಮಾಡಿದ್ದಾರೆ.